ಚಳಿಗಾಲ ಇನ್ನೂ ಅಪಾಯಕಾರಿ: ಚಳಿಯಲ್ಲಿ ಕೋವಿಡ್-19 ಸೋಂಕು ಇನ್ನಷ್ಟು ಹೆಚ್ಚಳ ಸಾಧ್ಯತೆ
Team Udayavani, Oct 12, 2020, 10:04 AM IST
ಹೊಸದಿಲ್ಲಿ: ದೇಶದ ಒಟ್ಟಾರೆ ಕೋವಿಡ್-19 ಸ್ಥಿತಿ ನೋಡಿದರೆ, ದೈನಂದಿನ ಸೋಂಕಿನ ಸಂಖ್ಯೆಯಲ್ಲಿ ಕ್ರಮೇಣ ಇಳಿಕೆ ಕಾಣಿಸುತ್ತಿದೆ. ಸದ್ಯದ ಮಟ್ಟಿಗೆ ಇದು ಸಮಾಧಾನದ ಸಂಗತಿಯಾಗಿದ್ದರೂ, ದೇಶವು “ಕೋವಿಡ್-19 ಅಪಾಯ’ದಿಂದ ಸಂಪೂರ್ಣವಾಗಿ ದೂರವಾಗಿಲ್ಲ. ನಿಜವಾದ ಅಪಾಯ ಇರುವುದು ಮುಂದಿನ ದಿನಗಳಲ್ಲಿ!
ಹೌದು. ಕೆಲವೇ ದಿನಗಳಲ್ಲಿ ದೇಶವು ಸರಣಿ ಹಬ್ಬಗಳಿಗೆ ಸಾಕ್ಷಿಯಾಗಲಿದೆ. ಅದರೊಂದಿಗೆ, ಚಳಿಗಾಲವೂ ಜತೆಯಾಗಲಿದೆ. ಚಳಿಯ ವಾತಾವರಣದಲ್ಲಿ ಕೋವಿಡ್-19 ವೈರಸ್ನ ಪ್ರಕರಣಗಳು ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಸ್ವತಃ ಕೇಂದ್ರ ಆರೋಗ್ಯ ಸಚಿವರೇ ಇಂಥದ್ದೊಂದು ಎಚ್ಚರಿಕೆ ನೀಡಿದ್ದಾರೆ.
ವಾತಾವರಣದಲ್ಲಿ ಚಳಿಯ ಪ್ರಮಾಣ ಜಾಸ್ತಿಯಾದಂತೆ, ಶ್ವಾಸಕೋಶ ಅಥವಾ ಉಸಿರಾಟದ ಸಮಸ್ಯೆಗಳು ಉಲ್ಬಣಿಸುತ್ತವೆ. ಸೋಂಕು ಕೂಡ ಉಸಿರಾಟ ವ್ಯವಸ್ಥೆಯೊಂದಿಗೆ ಸಂಬಂಧ ಹೊಂದಿರುವ ಕಾರಣ, ಚಳಿಗಾಲದಲ್ಲಿ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಅಪಾಯವಿದೆ. ಈ ಬಗ್ಗೆ ಎಲ್ಲರೂ ಅತ್ಯಂತ ಎಚ್ಚರಿಕೆಯಿಂದಿರಬೇಕು ಎಂದು ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಇದನ್ನೂ ಓದಿ:ಈ ಬಾರಿ ಮನೆಯಲ್ಲೇ ಹಬ್ಬ ಆಚರಿಸಿ! ಕೇಂದ್ರ ಆರೋಗ್ಯ ಸಚಿವರ ಸಲಹೆ
ಯುಕೆಯಲ್ಲೂ ಇದೇ ಸ್ಥಿತಿ: ಇದಕ್ಕೆ ಯುನೈಟೆಡ್ ಕಿಂಗ್ಡಮ್(ಯುಕೆ) ಅನ್ನು ಉದಾಹರಣೆಯಾಗಿ ನೀಡಿರುವ ಅವರು, “ಸೋಂಕಿನ ಪ್ರಮಾಣ ತಗ್ಗಿದ್ದ ಯು.ಕೆ.ಯಲ್ಲಿ ಚಳಿಗಾಲ ಆರಂಭವಾಗುತ್ತಿದ್ದಂತೆ ಮತ್ತೂಂದು ಹಂತದ ವ್ಯಾಪಿಸುವಿಕೆ ಶುರುವಾಗಿದೆ. ಇದನ್ನು ಎಲ್ಲರೂ ಗಮನದಲ್ಲಿಟ್ಟುಕೊಳ್ಳಬೇಕು. ಹಾಗೆಂದು ಭಾರತದಲ್ಲಿಯೂ ಇದೇ ಸ್ಥಿತಿ ತಲೆದೋರಲಿದೆ ಎಂದು ಖಚಿತವಾಗಿ ಹೇಳಲಾರೆ. ಎಲ್ಲರೂ ಸೂಕ್ತ ಮುನ್ನೆಚ್ಚರಿಕೆ ವಹಿಸಿ, ಸರಕಾರದ ಮಾರ್ಗಸೂಚಿ ಪಾಲನೆ ಮಾಡಿದರೆ ಮುಂಬರುವ ಅಪಾಯದಿಂದ ನಮ್ಮನ್ನು ನಾವು ರಕ್ಷಿಸಿ ಕೊಳ್ಳಬಹುದು’ ಎಂದಿದ್ದಾರೆ ಹರ್ಷವರ್ಧನ್.
ವರದಿ ಆಧರಿಸಿ ನಿರ್ಧಾರ: ಭಾರತದಲ್ಲಿ ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವ ಬಗ್ಗೆ ಸರಕಾರ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಲಸಿಕೆಯ ವೈದ್ಯಕೀಯ ಪ್ರಯೋಗದ ವರದಿ ಆಧರಿಸಿ ಈ ಕುರಿತು ನಿರ್ಧರಿಸಲಾಗುತ್ತದೆ ಎಂದು ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಜತೆಗೆ ಅಗ್ಗದ ದರದ ಫೆಲೂಡಾ ಪೇಪರ್ ಸ್ಟ್ರಿಪ್ ಪರೀಕ್ಷೆಯನ್ನು ಇನ್ನು ಕೆಲವೇ ವಾರಗಳಲ್ಲಿ ಜನರಿಗೆ ಲಭ್ಯವಾಗುವಂತೆ ಮಾಡಲಾಗುತ್ತದೆ ಎಂದೂ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ