ದೇಶದಲ್ಲಿಂದು ಕೋವಿಡ್ ಚಿಕಿತ್ಸಾ ತಾಲೀಮು: ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವರು
Team Udayavani, Dec 27, 2022, 12:49 PM IST
ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟಲು, ಚಿಕಿತ್ಸಾ ವ್ಯವಸ್ಥೆ ಪರಿಶೀಲನೆಗೆ ದೇಶದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಕ್ರಮ, ಸಾಧನ, ಸಿಬ್ಬಂದಿ ಕಾರ್ಯಾಚರಣೆಯ ಅಣಕು ಪ್ರದರ್ಶನ ನಡೆಯುತ್ತಿದೆ. ಈ ತಾಲೀಮನ್ನು ಸಂಬಂಧಪಟ್ಟ ರಾಜ್ಯಗಳ ಆರೋಗ್ಯ ಮಂತ್ರಿಗಳು ಮುನ್ನಡೆಸುತ್ತಿದ್ದಾರೆ.
ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಡ್ರಿಲ್ನ ಮೇಲ್ವಿಚಾರಣೆ ನಡೆಸಿದರು.
“ಇಂತಹ ವ್ಯಾಯಾಮಗಳು ನಮ್ಮ ಕಾರ್ಯಾಚರಣೆಯ ಸಿದ್ಧತೆಗೆ ಸಹಾಯ ಮಾಡುತ್ತದೆ, ಯಾವುದಾದರೂ ಅಡೆತಡೆಯಿದ್ದರೆ ಅದನ್ನು ಸರಿ ಮಾಡಲು ಸಹಾಯ ಮಾಡುತ್ತದೆ” ಎಂದು ಸಚಿವ ಮಾಂಡವಿಯಾ ನಿನ್ನೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಜೊತೆಗಿನ ಸಭೆಯಲ್ಲಿ ಹೇಳಿದ್ದರು.
ಎಲ್ಲಾ ಜಿಲ್ಲೆಗಳಲ್ಲಿ ಆರೋಗ್ಯ ಸೌಲಭ್ಯಗಳ ಲಭ್ಯತೆ, ಪ್ರತ್ಯೇಕ ಹಾಸಿಗೆಗಳ ಸಾಮರ್ಥ್ಯ, ಆಮ್ಲಜನಕ-ಬೆಂಬಲಿತ ಹಾಸಿಗೆಗಳು, ಐಸಿಯು (ತೀವ್ರ ನಿಗಾ ಘಟಕ) ಹಾಸಿಗೆಗಳು ಮತ್ತು ವೆಂಟಿಲೇಟರ್ ಬೆಂಬಲಿತ ಹಾಸಿಗೆಗಳಂತಹ ವಿಚಾರಗಳ ಮೇಲೆ ಈ ಡ್ರಿಲ್ ಕೇಂದ್ರೀಕರಿಸುತ್ತದೆ.
ಇದನ್ನೂ ಓದಿ:ರಾಹುಲ್ ಗಾಂಧಿಯನ್ನು ‘ಶ್ರೀರಾಮ’ನಿಗೆ ಹೋಲಿಸಿದ ಸಲ್ಮಾನ್ ಖುರ್ಷಿದ್
ಇದು ಕೋವಿಡ್ ನಿರ್ವಹಣೆಯಲ್ಲಿ ತರಬೇತಿ ಪಡೆದವರು ಮತ್ತು ವೆಂಟಿಲೇಟರ್ ನಿರ್ವಹಣೆ ಮತ್ತು ವೈದ್ಯಕೀಯ ಆಮ್ಲಜನಕ ಸ್ಥಾವರಗಳ ಕಾರ್ಯಾಚರಣೆಯಲ್ಲಿ ನುರಿತ ಆರೋಗ್ಯ ವೃತ್ತಿಪರರ ವಿಚಾರದಲ್ಲಿ ಕೇಂದ್ರೀತವಾಗಿದೆ.
ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಕಳೆದ ವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದು, ಇಂದೇ ಡ್ರಿಲ್ ನಡೆಸುವಂತೆ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ