ಕೋವಿಡ್ 19 ನೆಪದಲ್ಲಿ ಬಿಹಾರ ವಿಧಾನಸಭೆ ಚುನಾವಣೆ ಮುಂದೂಡಿಕೆ ಅಸಾಧ್ಯ: ಸುಪ್ರೀಂಕೋರ್ಟ್
ಚುನಾವಣಾ ದಿನಾಂಕವನ್ನೂ ಆಯೋಗ ಘೋಷಿಸಿಲ್ಲ, ನೋಟಿಫಿಕೇಶನ್ ಕೂಡಾ ಹೊರಡಿಸಿಲ್ಲ
Team Udayavani, Aug 28, 2020, 12:21 PM IST
ನವದೆಹಲಿ: ಕೋವಿಡ್ 19 ಸೋಂಕಿನ ಭಯದ ನೆಪದಲ್ಲಿ ಬಿಹಾರ ವಿಧಾನಸಭಾ ಚುನಾವಣೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ (ಆಗಸ್ಟ್ 28, 2020) ಸ್ಪಷ್ಟಪಡಿಸಿದೆ. ಕೋವಿಡ್ 19 ಹಿನ್ನೆಲೆಯಲ್ಲಿ ಚುನಾವಣೆ ರದ್ದುಪಡಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ವಜಾಗೊಳಿಸಿದೆ.
ಚುನಾವಣೆಯನ್ನು ನಿಲ್ಲಿಸಲು ಕೋವಿಡ್ ಸೋಂಕು ಮುಖ್ಯ ಕಾರಣವಾಗಬಾರದು. ಅಲ್ಲದೇ ಚುನಾವಣಾ ಆಯೋಗದ ಅಧಿಕಾರದ ಬಗ್ಗೆ ಮಧ್ಯಪ್ರವೇಶಿಸಲ್ಲ. ಇನ್ನೂ ಚುನಾವಣಾ ದಿನಾಂಕವನ್ನೂ ಆಯೋಗ ಘೋಷಿಸಿಲ್ಲ, ನೋಟಿಫಿಕೇಶನ್ ಕೂಡಾ ಹೊರಡಿಸಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
“ಏನು ಮಾಡಬೇಕು ಎಂಬುದನ್ನು ಮುಖ್ಯ ಚುನಾವಣಾಧಿಕಾರಿಗೆ ಸುಪ್ರೀಂಕೋರ್ಟ್ ಹೇಳಲು ಆಗುವುದಿಲ್ಲ. ಅವರು (ಕೇಂದ್ರ ಚುನಾವಣಾಧಿಕಾರಿ) ಎಲ್ಲವನ್ನು ಪರಿಗಣಿಸಲಿದ್ದಾರೆ ಎಂದು ನ್ಯಾಯಾಧೀಶರು ಹೇಳಿದರು.
“ಇದೊಂದು ಅವಸರದ ಹಾಗೂ ಅನುಮಾನದ” ಅರ್ಜಿಯಾಗಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದ್ದು, ಇನ್ನೂ ನೋಟಿಫಿಕೇಶನ್ ಅನ್ನು ಹೊರಡಿಸಿಲ್ಲ. ಈ ನಿಟ್ಟಿನಲ್ಲಿ ಚುನಾವಣೆ ನಡೆಸುವುದನ್ನು ನಿಲ್ಲಿಸಿ ಎಂದು ನಾವು(ಸುಪ್ರೀಂ) ಹೇಗೆ ಚುನಾವಣಾ ಆಯೋಗವನ್ನು ಪ್ರಶ್ನಿಸಬಹುದಾಗಿದೆ. ಬಿಹಾರ ಚುನಾವಣೆ ಮುಂದೂಡಿಕೆ ಮಾಡಲು ಕೋವಿಡ್ ಸಮರ್ಪಕವಾದ ಕಾರಣವಲ್ಲ ಎಂದು ಸುಪ್ರೀಂ ಆದೇಶದಲ್ಲಿ ತಿಳಿಸಿದೆ.
“ಚುನಾವಣೆ ನಡೆಸುವ ಮುನ್ನ ಚುನಾವಣಾ ಆಯೋಗ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ ಮತ್ತು ಪ್ರತಿಯೊಂದನ್ನು ಪರಿಗಣಿಸಲಿದೆ ಎಂದು ಸುಪ್ರೀಂಕೋರ್ಟ್ ಅರ್ಜಿದಾರ ಅವಿನಾಶ್ ಠಾಕೂರ್ ಗೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್