ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

ಯುನೈಟೆಡ್‌ ಕಿಂಗ್‌ಡಮ್‌ಗೆ ಆಗಮಿಸಬೇಕಾಗಿದ್ದರೆ ಲಸಿಕೆ ಪ್ರಮಾಣಪತ್ರ ಅಗತ್ಯ.

Team Udayavani, Sep 24, 2021, 3:00 PM IST

ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

ನವದೆಹಲಿ: ಇನ್ನು ಮುಂದೆ ದಿವ್ಯಾಂಗರು ಹಾಗೂ ನಡೆದಾಡಲು ಸಾಧ್ಯವಾಗದಂಥ ವ್ಯಕ್ತಿಗಳಿಗೆ ಮನೆಯಲ್ಲೇ ಕೋವಿಡ್ ಲಸಿಕೆ ಲಭ್ಯವಾಗಲಿದೆ.

ಕೇಂದ್ರ ಸರ್ಕಾರವೇ ಇಂಥದ್ದೊಂದು ಘೋಷಣೆ ಮಾಡಿದೆ. ಲಸಿಕಾ ಕೇಂದ್ರಗಳಿಗೆ ತೆರಳಿ ಲಸಿಕೆ ಪಡೆಯಲು ಅಸಮರ್ಥರಾದವರಿಗೆ ಮನೆಗೇ ಲಸಿಕೆ ನೀಡುವಂಥ ವ್ಯವಸ್ಥೆ ಜಾರಿಯಾಗಬೇಕೆಂದು ಆಗ್ರಹಗಳು ಕೇಳಿಬಂದಿದ್ದವು. ಅದಕ್ಕೆ ಸ್ಪಂದಿಸಿರುವ ಸರ್ಕಾರ, ದಿವ್ಯಾಂಗರು ಹಾಗೂ ನಡೆದಾಡಲು ಸಾಧ್ಯವಾಗದಂಥ ನಾಗರಿಕರಿಗೆ ಅವರ ಮನೆಗೇ ತೆರಳಿ ಲಸಿಕೆ ನೀಡಲಾಗುವುದು ಎಂದು ಗುರುವಾರ ತಿಳಿಸಿದೆ.

ಜತೆಗೆ, ದೇಶಾದ್ಯಂತ ಶೇ.66ರಷ್ಟು ವಯಸ್ಕರು ಕನಿಷ್ಠ ಒಂದು ಡೋಸ್‌, ಶೇ.23ರಷ್ಟು ಮಂದಿ ಎರಡೂ ಡೋಸ್‌ ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ವಾರದ ಒಟ್ಟು ಕೋವಿಡ್ ಸೋಂಕು ಪ್ರಕರಣಗಳ ಪೈಕಿ ಶೇ.62.73ರಷ್ಟು ಪ್ರಕರಣ ಕೇರಳವೊಂದರಲ್ಲೇ ದಾಖಲಾಗಿದೆ. ಅಲ್ಲದೇ 1 ಲಕ್ಷಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಏಕೈಕ ರಾಜ್ಯ ಕೇರಳ ಎಂದೂ ಅವರು ತಿಳಿಸಿದ್ದಾರೆ.

ಇದನ್ನೂ ಓದಿ:ಇನ್ಮುಂದೆ ಆ್ಯಪಲ್ ಸೇರಿ ಎಲ್ಲಾ ಮೊಬೈಲ್‍ಗಳಿಗೆ ‘ಟೈಪ್ ಸಿ’ ಚಾರ್ಜರ್  

187 ದಿನಗಳಲ್ಲಿ ಕನಿಷ್ಠ:
ದೇಶದಲ್ಲಿ ಬುಧವಾರದಿಂದ ಗುರುವಾರದ ಅವಧಿಯಲ್ಲಿ 31,923 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ. 187 ದಿನಗಳಿಗೆ ಹೋಲಿಕೆ ಮಾಡಿದರೆ ಇದು ಅತ್ಯಂತ ಕನಿಷ್ಠವಾಗಿದೆ. ಇದೇ ಅವಧಿಯಲ್ಲಿ 282 ಮಂದಿ ಅಸುನೀಗಿದ್ದಾರೆ.

ಮಾನದಂಡ ಅನುಸರಿಸುವಂತಿರಲಿ:
ಈ ನಡುವೆ, ಯುನೈಟೆಡ್‌ ಕಿಂಗ್‌ಡಮ್‌ಗೆ ಆಗಮಿಸಬೇಕಾಗಿದ್ದರೆ ಲಸಿಕೆ ಪ್ರಮಾಣಪತ್ರ ಅಗತ್ಯ. ಜತೆಗೆ ಆ  ಪ್ರಮಾಣಪತ್ರವು ಕನಿಷ್ಠ ನಿಯಮಗಳ ವ್ಯಾಪ್ತಿಯಲ್ಲಿರಬೇಕು ಎಂದು ಅಲ್ಲಿನ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ. ಭಾರತದ ಪ್ರಯಾಣಿಕರಿಗೆ 10 ದಿನಗಳ ಕ್ವಾರಂಟೈನ್‌ ನಿಯಮ ವಿವಾದವಾಗುತ್ತಿರುವಂತೆಯೇ ಈ ಹೇಳಿಕೆ ಹೊರಬಿದ್ದಿದೆ. ಭಾರತ ಸರ್ಕಾರದ ಜತೆಗೆ ಈ ವಿಚಾರವಾಗಿ ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದೂ ಯುಕೆ ಹೇಳಿದೆ.

ಹಬ್ಬಗಳಿಗೆ ಮಾರ್ಗಸೂಚಿ
ಹಬ್ಬಗಳ ಸರಣಿಯ ಹಿನ್ನೆಲೆಯಲ್ಲಿ ಮಾರ್ಗಸೂಚಿ ಹೊರಡಿಸಿರುವ ಕೇಂದ್ರ ಸರ್ಕಾರ, ಶೇ.5ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹೆಚ್ಚು ಜನಸಂದಣಿ ಸೇರದಂತೆ ಕ್ರಮ ಕೈಗೊಳ್ಳಿ ಎಂದು ರಾಜ್ಯಗಳಿಗೆ ಸೂಚಿಸಿದೆ. ಆಯಾ ವಾರದ ಪಾಸಿಟಿವಿಟಿ ದರ ಆಧರಿಸಿ ನಿರ್ಬಂಧ ಅಥವಾ ಸಡಿಲಿಕೆ ನಿರ್ಧಾರ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ.

ಕೊರೊನೋತ್ತರ ಚಿಕಿತ್ಸಾ ಸೂತ್ರ ಬಿಡುಗಡೆ
ಕೊರೊನೋತ್ತರ ಸಮಸ್ಯೆ ನಿಭಾಯಿಸುವ ನಿಟ್ಟಿನಲ್ಲಿ ಹೊಸ ಚಿಕಿತ್ಸಾ ಸೂತ್ರಗಳನ್ನು ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯ ಬಿಡುಗಡೆ ಮಾಡಿದ್ದಾರೆ. ಆರೋಗ್ಯ ಕಾರ್ಯಕರ್ತರು, ನರ್ಸ್‌ಗಳು,  ಪ್ಯಾರಾ ಮೆಡಿಕಲ್‌ ಸಿಬ್ಬಂದಿಗೆ ಸೋಂಕಿನಿಂದ ಗುಣಮುಖರಾದ ಬಳಿಕ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಹೇಗೆ ನಿರ್ವಹಿಸಬಹುದು ಎಂಬುದರ ಬಗ್ಗೆ ಅದರಲ್ಲಿ ಪ್ರಸ್ತಾಪಿಸಲಾಗಿದೆ. ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದು, ಸೂಕ್ತ ರೀತಿಯ ಔಷಧ ಸೇವನೆ ಕುರಿತೂ ಮಾಹಿತಿಯಿದೆ.

ಟಾಪ್ ನ್ಯೂಸ್

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ!

Voting ಹದಿನೈದು ನಿಮಿಷ ಕಾದು‌ ಮತ ಹಾಕಿದ ಅನಂತಕುಮಾರ್ ಹೆಗಡೆ!

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.