ಹೊಸ ವರ್ಷಕ್ಕೆ ಲಸಿಕೆ ಸಿಹಿ: ನಾಳೆ ದೇಶಾದ್ಯಂತ ಡ್ರೈ ರನ್‌ ಪ್ರಯೋಗ ಪ್ರಾತ್ಯಕ್ಷಿಕೆ


Team Udayavani, Jan 1, 2021, 6:33 AM IST

ಹೊಸ ವರ್ಷಕ್ಕೆ ಲಸಿಕೆ ಸಿಹಿ: ನಾಳೆ ದೇಶಾದ್ಯಂತ ಡ್ರೈ ರನ್‌ ಪ್ರಯೋಗ ಪ್ರಾತ್ಯಕ್ಷಿಕೆ

ಬೆಂಗಳೂರು/ಹೊಸದಿಲ್ಲಿ: ಹೊಸ ವರ್ಷದ ಮೊದಲ ದಿನವೇ ದೇಶವಾಸಿಗಳಿಗೆ ಕೋವಿಡ್ ಲಸಿಕೆಯ ಸಿಹಿ ಸುದ್ದಿ ನೀಡುವ ಬಗ್ಗೆ ಭಾರತ ಔಷಧ ನಿಯಂತ್ರಣ ನಿರ್ದೇಶನಾಲಯ (ಡಿಸಿಜಿಐ) ಸುಳಿವು ನೀಡಿದೆ.

ಅಭಿವೃದ್ಧಿಪಡಿಸಲಾಗಿರುವ ಲಸಿಕೆಗಳು ಸರಕಾರದ ಒಪ್ಪಿಗೆಗೆ ಕಾಯುತ್ತಿವೆ. ಇದರ ನಡುವೆ ಕೇಂದ್ರ ಸರಕಾರ ಶನಿವಾರದಿಂದ ಎಲ್ಲ ರಾಜ್ಯಗಳಲ್ಲೂ ಲಸಿಕೆಯ ಡ್ರೈ ರನ್‌ (ವಿತರಣೆ ಪ್ರಾತ್ಯಕ್ಷಿಕೆ) ನಡೆಸುವಂತೆ ಸೂಚಿಸಿರುವುದು ಕೊರೊನಾ ವಿರುದ್ಧದ ಹೋರಾಟದಲ್ಲಿ ಹೊಸ ಆಶಾಭಾವ ಹುಟ್ಟಿಸಿದೆ. ಕರ್ನಾಟಕದಲ್ಲೂ ಡ್ರೈ ರನ್‌ಗೆ ಸಿದ್ಧತೆ ಮಾಡಲಾಗಿದೆ. ಶನಿವಾರ ನಡೆಯಲಿರುವ ವಿತರಣೆ ಪ್ರಾತ್ಯಕ್ಷಿಕೆ (ಡ್ರೈರನ್‌)ಗಾಗಿ ಆರೋಗ್ಯ ಇಲಾಖೆ ಸಜ್ಜಾಗಿದೆ.

ಬಿಬಿಎಂಪಿ (ಬೆಂಗಳೂರು ನಗರ ಸಹಿತ), ಮೈಸೂರು, ಶಿವಮೊಗ್ಗ, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಡ್ರೈ ರನ್‌ ನಡೆಯಲಿದೆ. ಜಿಲ್ಲಾಸ್ಪತ್ರೆ, ತಲಾ ಒಂದು ತಾಲೂಕು ಮತ್ತು ಒಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಗುರುವಾರ ಆಯ್ಕೆ ಮಾಡಲಾಗಿದೆ. ಈ ಕೇಂದ್ರಗಳಲ್ಲಿ ತಲಾ ಐದು ಸಿಬಂದಿ, ಲಸಿಕೆ ವಿತರಣೆಗೆ ಬೇಕಾದ ಅಗತ್ಯ ಸಲಕರಣೆಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ನಿಯೋಜಿತ ಆರೋಗ್ಯ ಸಿಬಂದಿಗೆ ಶುಕ್ರವಾರ (ಜ. 1) ಅಪರಾಹ್ನ 2 ಗಂಟೆಗೆ ಆನ್‌ಲೈನ್‌ ಮೂಲಕ ತರಬೇತಿ ನೀಡಲಾಗುತ್ತದೆ.

ಹೊಸ ವರ್ಷಕ್ಕೆ ಸಿಹಿ ಸುದ್ದಿ
ಭಾರತ ಔಷಧ ನಿಯಂತ್ರಣ ಪ್ರಾಧಿಕಾರ (ಡಿಸಿಜಿಐ) ಹೊಸ ವರ್ಷದ ಮೊದಲ ದಿನವೇ ಸಿಹಿ ಸುದ್ದಿ ನೀಡುವುದಾಗಿ ಹೇಳಿದೆ. ಪುಣೆಯ ಸೀರಮ್‌ ಸಂಸ್ಥೆ ಮತ್ತು ಭಾರತ್‌ ಬಯೋಟೆಕ್‌ ಸಂಸ್ಥೆಗಳು ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿವೆ. ಬುಧವಾರ ಮೊದಲ ಹಂತದ ಸಭೆ ನಡೆದು, ಶುಕ್ರವಾರ ಎರಡನೇ ಹಂತದ ಪರಿಶೀಲನ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಲಸಿಕೆಗೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಿಬಂದಿಗೆ ಅನುಭವ
ಶನಿವಾರ ಬೆಳಗ್ಗೆ ಲಸಿಕೆ ವಿತರಣೆ ಪ್ರಾತ್ಯಕ್ಷಿಕೆ ನಡೆಯಲಿದೆ. ಭವಿಷ್ಯದಲ್ಲಿ ಲಸಿಕೆ ವಿತರಣೆಯನ್ನು ವ್ಯವಸ್ಥಿತವಾಗಿ ನಡೆಸಲು ತರಬೇತಿ- ಪ್ರಾತ್ಯಕ್ಷಿಕೆಗಾಗಿ ಈ ಡ್ರೈ ರನ್‌ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಎದುರಾಗುವ ಹೊಸ ಸಮಸ್ಯೆ, ಗೊಂದಲಗಳನ್ನು ಪಟ್ಟಿ ಮಾಡಿ ಕೇಂದ್ರ ಸರಕಾರಕ್ಕೆ ವರದಿ ನೀಡಬೇಕು ಎಂದು ಆರೋಗ್ಯ ಇಲಾಖೆಯ ಲಸಿಕೆ ವಿಭಾಗದ ಉಪ ನಿರ್ದೇಶಕಿ ಡಾ| ಬಿ.ಎನ್‌. ರಜನಿ ತಿಳಿಸಿದ್ದಾರೆ.

ಹೇಗಿರಲಿದೆ ಡ್ರೈ ರನ್‌?
ಡ್ರೈ ರನ್‌ ವೇಳೆ ಈ ವೇಳೆ ಚುಚ್ಚುಮದ್ದು ನೀಡುವುದೊಂದನ್ನು ಬಿಟ್ಟು ಲಸಿಕೆ ನೀಡಿಕೆಗೆ ಸಂಬಂಧಿಸಿದ ಉಳಿದೆಲ್ಲ ಚಟುವಟಿಕೆಗಳು ನಡೆಯಲಿವೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಲಸಿಕೆ ವಿತರಣೆಗೆ ಎಲ್ಲ ಸಿದ್ಧತೆಗಳು ಆಗುತ್ತಿವೆ. ಕಟ್ಟ ಕಡೆಯ ಫ‌ಲಾನುಭವಿಗೂ ಸ್ವದೇಶಿಯಾಗಿ ಅಭಿವೃದ್ಧಿಪಡಿಸಿರುವ ಲಸಿಕೆ ಸಿಗುವ ಹಾಗೆ ಮಾಡಲಾಗುತ್ತದೆ. ಜಗತ್ತಿನ ಅತೀ ದೊಡ್ಡ ಲಸಿಕೆ ವಿತರಣೆಗೆ ನಾವು ಸಿದ್ಧರಾಗುತ್ತಿದ್ದೇವೆ. – ನರೇಂದ್ರ ಮೋದಿ, ಪ್ರಧಾನಿ

ಡ್ರೈ ರನ್‌ ಪಕ್ಷಿನೋಟ
05 ಆಯ್ಕೆಯಾದ ಜಿಲ್ಲೆಗಳು
15 ಒಟ್ಟು ಆರೋಗ್ಯ ಕೇಂದ್ರ
100 ನಿಯೋಜಿತ ಆರೋಗ್ಯ ಸಿಬಂದಿ
375 ಪ್ರಾತ್ಯಕ್ಷಿಕೆ ಫ‌ಲಾನುಭವಿಗಳು

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.