ಸಗಣಿ ಮಾರಿ ಗೋ ಸಂರಕ್ಷಣೆ
Team Udayavani, Dec 16, 2018, 6:00 AM IST
ಗಾಂಧಿನಗರ: ಗೋವುಗಳನ್ನು ಸಾಕಲಾಗದೇ ಕಸಾಯಿಖಾನೆಗೆ ದೂಡುವುದನ್ನು ತಪ್ಪಿಸಲು ಅವುಗಳ ನಿರ್ವಹಣೆಗಾಗಿ ಸಗಣಿ ಮತ್ತು ಗೋಮೂತ್ರ ಬ್ಯಾಂಕ್ ಸ್ಥಾಪನೆಗೆ ಗುಜರಾತ್ ಸರ್ಕಾರ ಮುಂದಾಗಿದೆ.
ಸಗಣಿ ಹಾಗೂ ಗೋಮೂತ್ರವನ್ನು ಮಾರಾಟ ಮಾಡಿ, ಅದರಿಂದ ಬಂದ ಆದಾಯವನ್ನು ಜಾನುವಾರು ನಿರ್ವಹಣೆಗೆ ಬಳಸಲಾಗುತ್ತದೆ. ಇದರಿಂದಾಗಿ ಲಕ್ಷಾಂತರ ಬೀಡಾಡಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುವುದನ್ನು ತಪ್ಪಿಸಬಹುದು ಎಂದು ಹಿರಿಯ ಸಚಿವ ಭೂಪೇಂದ್ರ ಸಿಂಗ್ ಚುಡಾಸನಾ ಹೇಳಿದ್ದಾರೆ.
ಗೋಮೂತ್ರ ಮತ್ತು ಗೋಬರ್ ಬ್ಯಾಂಕ್ ಸ್ಥಾಪಿಸಿ, ಇದರಲ್ಲಿ ಸಂಗ್ರಹವಾದ ಸಗಣಿ ಹಾಗೂ ಗೋಮೂತ್ರವನ್ನು ರಸಗೊಬ್ಬರ ಮತ್ತು ನೈಸರ್ಗಿಕ ಕೀಟನಾಶಕ ತಯಾರಕ ಕಂಪನಿಗಳಿಗೆ ಮಾರಾಟ ಮಾಡಲಾಗುತ್ತದೆ. ಸಂಗ್ರಹ, ಪ್ಯಾಕಿಂಗ್ ಹಾಗೂ ವಿತರಣೆಗೆ ಸೂಕ್ತ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಈ ಯೋಜನೆಯಲ್ಲಿ ಸಹಕಾರಿ ಸಂಘಗಳನ್ನೂ ಸೇರಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಬರಕ್ಕೆ ಪರಿಹಾರ: ಗುಜರಾತ್ನಲ್ಲಿ ಈ ವರ್ಷ ಮಳೆ ಕೊರತೆಯಾಗಿದ್ದು, ಬರ ತಲೆದೋರುವ ಸಾಧ್ಯತೆ ಇದೆ. ಬರ ಎದುರಾದಲ್ಲಿ ಮೊದಲು ಜಾನುವಾರುಗಳಿಗೇ ಬಾಧಿಸುತ್ತದೆ. ಈಗಾಗಲೇ 11 ಜಿಲ್ಲೆಗಳ 51 ತಾಲೂಕುಗಳಲ್ಲಿ ಮೇವು ಕೊರತೆ ಕಂಡುಬಂದಿದ್ದು, ಇದಕ್ಕಾಗಿ 412 ಗೋಶಾಲೆಗಳಲ್ಲಿರುವ 2.30 ಲಕ್ಷ ಗೋವುಗಳ ನಿರ್ವಹಣೆಗೆ ಪ್ರತಿ ದಿನ 25 ರೂ. ಅನುದಾನ ವನ್ನು ಸರ್ಕಾರ ನೀಡುತ್ತಿದೆ. ಮೇವು ಕೊರತೆ ಯಿಂದಾಗಿ ಮೇವಿನ ಬೆಲೆಯೂ ಹೆಚ್ಚಳವಾಗಿದೆ. ಇನ್ನೊಂದೆಡೆ ಗೋಶಾಲೆಗೆ ಜಾನುವಾರುಗಳನ್ನು ತಂದುಬಿಡುವ ಸಂಖ್ಯೆಯೂ ಹೆಚ್ಚುತ್ತಿದೆ ಎಂದು ಸಚಿವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು