ಸಚಿವರ ನಿವಾಸಕ್ಕೆ ಏಡಿಗಳ ಎಸೆತ
Team Udayavani, Jul 10, 2019, 5:00 AM IST
ಮುಂಬಯಿ: ಮಹಾರಾಷ್ಟ್ರದ ಜಲ ಸಂರಕ್ಷಣಾ ಸಚಿವ ತಾನಾಜಿ ಸಾವಂತ್ ಅವರ ನಿವಾಸದ ಮೇಲೆ ನ್ಯಾಷನಲ್ ಕಾಂಗ್ರೆಸ್ ಪಾರ್ಟಿಯ (ಎನ್ಸಿಪಿ) ಕಾರ್ಯಕರ್ತರು, ಜೀವಂತ ಏಡಿಗಳನ್ನು ಎಸೆದಿರುವ ಘಟನೆ ಮಂಗಳ ವಾರ ನಡೆದಿದೆ.
ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ರತ್ನಗಿರಿ ಜಿಲ್ಲೆಯ ತಿವಾರೆಯಲ್ಲಿನ ಚೆಕ್ ಡ್ಯಾಂ ಒಡೆ ದಿದ್ದಕ್ಕೆ ಅದರಲ್ಲಿದ್ದ ಏಡಿಗಳೇ ಕಾರಣ ಎಂದು ಸಾವಂತ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಇದು ವಿವಾದಕ್ಕೆ ಕಾರಣವಾಗಿದೆ. ಸಚಿವರ ಹೇಳಿಕೆಯಿಂದ ರೊಚ್ಚಿಗೆದ್ದ ಎನ್ಸಿಪಿ ಕಾರ್ಯ ಕರ್ತರು, ಮಂಗಳವಾರ ವಿವಿಧ ಬಾಕ್ಸ್ಗಳಲ್ಲಿ ಏಡಿಗಳನ್ನು ತಂದು ಸಚಿವರ ನಿವಾಸದ ಅಂಗಳಕ್ಕೆ ಎಸೆದು ಹೋಗಿದ್ದಾರೆ. ಇದಕ್ಕೂ ಮೊದಲು, ಏಡಿಗಳೊಂದಿಗೆ ಶಾಹು ಪುರಿ ಪೊಲೀಸ್ ಠಾಣೆಗೆ ಹೋಗಿದ್ದ ಕಾರ್ಯ ಕರ್ತರು, ಏಡಿಗಳ ವಿರುದ್ಧ ಕೊಲೆ ಮೊಕದ್ದಮೆ ದಾಖಲಿಸಬೇಕೆಂದು ಆಗ್ರಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು