ವಿಶಾಖಪಟ್ಟಣದ ಶಿಪ್ ಯಾರ್ಡ್ ನಲ್ಲಿ ಕುಸಿದ ಕ್ರೇನ್: ಕನಿಷ್ಠ 11 ಮಂದಿ ಸಾವು
Team Udayavani, Aug 1, 2020, 4:04 PM IST
ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ಕ್ರೇನ್ ಕುಸಿದು ಭಾರಿ ದುರ್ಘಟನೆ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ಇನ್ನೂ ಹಲವರು ಸಿಲುಕಿರುವ ಸಾಧ್ಯತೆಯಿದ್ದು, ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
ವಿಶಾಖಪಟ್ಟಣದ ಬಂದರಿನ ಹಿಂದೂಸ್ಥಾನ್ ಶಿಪ್ ಯಾರ್ಡ್ ನಲ್ಲಿ ನೂತನ ಕ್ರೇನ್ ಅನ್ನು ನಿಲ್ಲಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಕ್ರೇನ್ 70 ಟನ್ ತೂಕವಿದೆ. ಕ್ರೇನ್ ಕುಸಿದು ಬಿದ್ದ ಕಾರಣ ಹತ್ತಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದವರಲ್ಲಿ ನಾಲ್ಕು ಮಂದಿ ಹಿಂದೂಸ್ಥಾನ್ ಶಿಪ್ ಯಾರ್ಡ್ ಲಿಮಿಟೆಡ್ ಕಂಪನಿಗೆ ಸೇರಿದವರಾಗಿದ್ದು, ಉಳಿದವರು ಗುತ್ತಿಗೆ ಸಂಸ್ಥೆಯ ನೌಕರರಾಗಿದ್ದಾರೆ ಎಂದು ಸ್ಥಳೀಯ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿಕೆ ನೀಡಿದ್ದಾರೆ.
#WATCH A crane collapses at Hindustan Shipyard Limited in Visakhapatnam, Andhra Pradesh. 10 dead and 1 injured in the incident, says DCP Suresh Babu. pic.twitter.com/BOuz1PdJu3
— ANI (@ANI) August 1, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ