ಕೋವಿಡ್ ಲಸಿಕೆ ವಿತರಣೆಗೆ ಸಮಿತಿ ರಚಿಸಿ: ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ
Team Udayavani, Oct 31, 2020, 6:32 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕೋವಿಡ್ ಲಸಿಕೆ ಅಂತಿಮ ಪ್ರಯೋಗ ಹಂತದಲ್ಲಿರುವಂತೆಯೇ ಅದರ ವಿತರಣೆಗೂ ಕೇಂದ್ರ ಸರಕಾರ ಭರದ ಸಿದ್ಧತೆ ಮಾಡುತ್ತಿದೆ. ವಿತರಣೆ ಸಂಬಂಧ ಸಮನ್ವಯ ಸಮಿತಿಗಳನ್ನು ರಚಿಸುವಂತೆ ಎಲ್ಲ ರಾಜ್ಯಗಳಿಗೆ ಸೂಚಿಸಿದೆ.
ರಾಜ್ಯ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ರಾಜ್ಯ ಪರಿಶೀಲನ ಸಮಿತಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಥವಾ ಆರೋಗ್ಯ ಇಲಾಖೆ ಕಾರ್ಯದರ್ಶಿಯ ನೇತೃತ್ವದಲ್ಲಿ ರಾಜ್ಯ ಕಾರ್ಯಪಡೆ, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ಕಾರ್ಯಪಡೆಗಳನ್ನು ರಚಿಸುವಂತೆ ಸೂಚಿಸಿದೆ. ಈ ಸಂಬಂಧ ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆಯಲಾಗಿದೆ.
ಇದರ ಜತೆಗೆ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಬೇಕು. ಲಸಿಕೆಯ ಬಗ್ಗೆ ತಪ್ಪು ಸಂದೇಶಗಳು ಹರಡುವುದಕ್ಕೆ ಬಿಡಬಾರದು. ಒಂದು ವೇಳೆ ವದಂತಿಗಳು ಹರಡಿದರೆ ಜನರು ಲಸಿಕೆಯಿಂದ ದೂರ ಉಳಿಯಬಹುದು. ಹಾಗಾಗ ದಂತೆ ಎಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.
ಭಾರತದಂತಹ ವಿಶಾಲ ದೇಶದಲ್ಲಿ ಎಲ್ಲರಿಗೂ ಲಸಿಕೆ ಒದಗಿಸುವುದು ಸುಲಭವಲ್ಲ. ಲಸಿಕೆ ಲಭ್ಯವಾದ ಬಳಿಕ ಎಲ್ಲರಿಗೂ ವಿತರಣೆ ಮಾಡಲು ವರ್ಷವೇ ಹಿಡಿಯಬಹುದು. ಹೀಗಾಗಿ ಇದನ್ನು ಸಮರ್ಪಕವಾಗಿ ನಿರ್ವಹಿಸುವುದಕ್ಕೆ ಸಮನ್ವಯ ಸಮಿತಿಗಳನ್ನು ರಚಿಸಬೇಕು. ವಿತರಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಮತ್ತು ಮೇಲುಸ್ತುವಾರಿ ವಹಿಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಬೇಕು ಎಂದವರು ಹೇಳಿದ್ದಾರೆ.
ಹಂಚಿಕೆ ಹೇಗೆ?
ಕೊರೊನಾ ಲಸಿಕೆ ಸಿಕ್ಕಿದ ಬಳಿಕ ಎಲ್ಲರಿಗೂ ತಲುಪಿಸುವುದಕ್ಕಾಗಿ ಸಿದ್ಧತೆಗಳು ಆರಂಭವಾಗಿವೆ. ಇಡೀ ವಿತರಣ ವ್ಯವಸ್ಥೆಯಲ್ಲಿ ಗಮನಾರ್ಹ ಪಾತ್ರ ವಹಿಸುವುದು ಶೀತಲ ಸಂಗ್ರಹಾಗಾರಗಳು. ಇಲ್ಲಿಂದಲೇ ಎಲ್ಲರಿಗೂ ಲಸಿಕೆ ತಲುಪಬೇಕಿದೆ.
2 ಹಂತಗಳಲ್ಲಿ ಪೂರೈಕೆ
ಹಂತ 1
– ಲಸಿಕೆ ಉತ್ಪಾದಕರು
– ಕಂಪೆನಿಗಳ ಪ್ರಯೋಗಾಲಯಗಳು
- ವಿತರಕರು
- ಮಾರಾಟಗಾರರು
- ಆಸ್ಪತ್ರೆಗಳು, ಕ್ಲಿನಿಕ್ಗಳು
- ಫಲಾನುಭವಿಗಳು
ಹಂತ 2
– ಸ್ಥಳೀಯ ಏರ್ಪೋರ್ಟ್ಗಳಿಗೆ ರವಾನೆ
– ಸಾರ್ವಜನಿಕ ಆರೋಗ್ಯ ಲಸಿಕೆ ಪೂರೈಕೆ ವ್ಯವಸ್ಥೆ ಬಳಕೆ
– ರಾಜ್ಯ, ಪ್ರಾದೇಶಿಕ, ವಿಭಾಗೀಯ ಮೆಡಿಕಲ್ ಕೇಂದ್ರಗಳು
– ಜಿಲ್ಲಾ ಕೇಂದ್ರಗಳು
– ಸಮುದಾಯ ಆರೋಗ್ಯ ಕೇಂದ್ರಗಳು/ ಪ್ರಾಥಮಿಕ ಆರೋಗ್ಯ ಕೇಂದ್ರಗಳು
– ಫಲಾನುಭವಿಗಳು
ಕೊರೊನಾ ಲಸಿಕೆ ವಿತರಣೆ ಸಂಬಂಧ ನಾನಾ ಸಮಿತಿಗಳನ್ನು ರಚಿಸುವಂತೆ ಕೇಂದ್ರ ಸರಕಾರದಿಂದ ಸೂಚನೆ ಬಂದಿದ್ದು , ಈ ನಿಟ್ಟಿನಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.
– ಟಿ.ಎಂ. ವಿಜಯ ಭಾಸ್ಕರ್, ಮುಖ್ಯ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?