ಜಾಮೀನು ಪಡೆದ ಕೆಲವೇ ಗಂಟೆಗಳಲ್ಲಿ ದೀಪ್ ಸಿ‍ಧು ಮತ್ತೆ ಬಂಧನ


Team Udayavani, Apr 17, 2021, 4:04 PM IST

ghjfghjt

ನವದೆಹಲಿ :  ಇಂದು ಮಧ್ಯಾಹ್ನವಷ್ಟೆ ಜಾಮೀನು ಪಡೆದು ಹೊರ ಬಂದಿದ್ದ ‘ಗಣರಾಜ್ಯೋತ್ಸವ ಗಲಭೆ’ ಪ್ರಕರಣದ ಆರೋಪಿ ದೀಪ್ ಸಿ‍ಧು ಅವರನ್ನು ದೆಹಲಿಯ ಅಪರಾಧ ವಿಭಾಗದ ಪೊಲೀಸರು ಮತ್ತೆ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಜನವರಿ 26ರಂದು ರೈತರ ಪ್ರತಿಭಟನಾ ಮೆರವಣೆಗೆ ವೇಳೆ ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಗಲಭೆ-ಹಿಂಸಾಚಾರ ಪ್ರಕರಣದಡಿ ಬಂಧಿತರಾಗಿರುವ ನಟ ದೀಪ್ ಸಿಧುಗೆ ಇಂದು ( ಏಪ್ರಿಲ್ 17) ದೆಹಲಿ ನ್ಯಾಯಾಲಯ ಜಾಮೀನು ನೀಡಿತ್ತು. ವಿಶೇಷ ನ್ಯಾಯಾಧೀಶ ನೀಲೋಫರ್ ಅಬಿದಾ ಪರ್ವೀನ್ ಅವರು 30,000 ರೂ.ಗಳ ವೈಯಕ್ತಿಕ ಬಾಂಡ್ ಪಡೆದು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದರು. ಅಂದು ನಡೆದ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಸಿಧು ಅವರನ್ನು ಫೆಬ್ರುವರಿ 9 ರಂದು ಬಂಧಿಸಿ ನ್ಯಾಯಾಲಯದ ಎದುರು ಹಾಜರು ಪಡಿಸಲಾಗಿತ್ತು.

ಇಂದು ನಡೆದ ವಿಚಾರಣೆ ವೇಳೆ ‘ಸಿಧು ಅವರು ಪ್ರತಿಭಟನೆಗಾಗಿ ಕರೆ ನೀಡಿದ್ದಕ್ಕೆ, ಜನಸಮೂಹವನ್ನು ಪ್ರತಿಭಟನೆಯಲ್ಲಿ ತೊಡಗುವಂತೆ ಮಾಡಿದ್ದಕ್ಕೆ ಯಾವುದೇ ಪುರಾವೆಗಳಿಲ್ಲ’ ಎಂದು ಅವರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದರು. ಅಲ್ಲದೆ ಸಿಧು ಯಾವ ರೈತ ಮುಖಂಡ, ರೈತ ಸಂಘದ ಸದಸ್ಯರಲ್ಲ ಎಂದು ಅವರ ಪರ ವಕೀಲರು ಹೇಳಿದ್ದಾರೆ.

ಸಿಧು ಅವರು ಫೇಸ್‌ಬುಕ್‌ನಲ್ಲಿ ವೀಡಿಯೊ ಪೋಸ್ಟ್ ಮಾಡುವಲ್ಲಿ ತಪ್ಪು ಮಾಡಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ ಮತ್ತು ಅದು ಅಪರಾಧವಲ್ಲ ಎಂದು ವಾದಿಸಿದ ವಕೀಲ ಹೇಳಿದ್ದಾರೆ . “ನಾನು ವೀಡಿಯೊವನ್ನು ಪೋಸ್ಟ್ ಮಾಡಿದ್ದೇನೆ, ಅದು ನನ್ನ ತಪ್ಪು. ಪ್ರತಿಯೊಂದು ತಪ್ಪೂ ಅಪರಾಧವಲ್ಲ. ನಾನು ವಿಡಿಯೋ ಪೋಸ್ಟ್ ಮಾಡಿದ ಕಾರಣ ಮಾಧ್ಯಮಗಳು ನನ್ನನ್ನು ಮುಖ್ಯ ಆರೋಪಿ ಎಂದು ಹೆಸರಿಸಿದೆ. ನನ್ನನ್ನು ಮುಖ್ಯ ಸಂಚುಕೋರನಾಗಿ ಮಾಧ್ಯಮಗಳು ಬಿಂಬಿಸಿದ್ದವು. ಅವು ಹಾಗೇಕೆ ಮಾಡಿದವೆಂದು ನನಗೆ ಅರಿವಿಲ್ಲ” ಏಪ್ರಿಲ್ 8 ರಂದು ಜಾಮೀನು ಅರ್ಜಿಯ ಸಂದರ್ಭದಲ್ಲಿ ಸಿಧು ತನ್ನ ವಕೀಲರ ಮೂಲಕ ನ್ಯಾಯಾಲಯಕ್ಕೆ ತಿಳಿಸಿದ್ದರು.

ಇನ್ನು ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು, ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್ ಹಮ್ಮಿಕೊಂಡಿದ್ದರು. ಆದರೆ, ಈ ಜಾಥಾ ಹಿಂಸಾರೂಪ ಪಡೆದು, ದೆಹಲಿಯ ಕೆಂಪುಕೋಟೆಗೆ ಲಗ್ಗೆ ಇಟ್ಟಿದ್ದ ರೈತರು ಗಲಭೆ ನಡೆಸಿದ್ದರು.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.