Online betting ವ್ಯಕ್ತಿಯನ್ನು ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳು
Team Udayavani, Jun 3, 2023, 4:31 PM IST
ದುರ್ಗ್ : ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಆನ್ಲೈನ್ ಬೆಟ್ಟಿಂಗ್ ಲಿಂಕ್ ಹೊಂದಿರುವ 41 ವರ್ಷದ ವ್ಯಕ್ತಿಯನ್ನು ಅಪರಿಚಿತ ವ್ಯಕ್ತಿಗಳು ಅಪಹರಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಮೇ 31 ರಂದು ರಾತ್ರಿ ಅಪಹರಣಕ್ಕೊಳಗಾದ ಓಂ ಪ್ರಕಾಶ್ ಸಾಹು ಅವರ ಸಾವಿಗೆ ಸಂಬಂಧಿಸಿದಂತೆ ಇಬ್ಬರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಶುಕ್ರವಾರ ರಾತ್ರಿ ಓಲ್ಡ್ ಭಿಲಾಯಿ ಪ್ರದೇಶದ ಅಕ್ರೋಲ್ದಿಹ್ ಕೊಳದಲ್ಲಿ ಶವ ಪತ್ತೆಯಾಗಿದೆ ಎಂದು ದುರ್ಗ್ ಪೊಲೀಸ್ ವರಿಷ್ಠಾಧಿಕಾರಿ ಶಲಭ್ ಸಿನ್ಹಾ ತಿಳಿಸಿದ್ದಾರೆ.
“ಹತ್ಯೆಯ ಬಳಿಕ ದೇಹವನ್ನು ಗೋಣಿಚೀಲದಲ್ಲಿ ತುಂಬಿಸಲಾಗಿತ್ತು, ಅದನ್ನು ಅವನ ಸ್ಕೂಟರ್ಗೆ ಹಗ್ಗದಿಂದ ಕಟ್ಟಲಾಗಿತ್ತು. ಜೂನ್ 1 ರಂದು, ಅವರು ಮೇ 31 ರಿಂದ ನಾಪತ್ತೆಯಾಗಿದ್ದಾರೆ ಮತ್ತು ಅಪರಿಚಿತ ಕರೆಗಾರರಿಂದ ಸುಲಿಗೆ ಕರೆ ಬಂದಿದೆ ಎಂದು ಅವರ ಪತ್ನಿ ಪೊಲೀಸರಿಗೆ ತಿಳಿಸಿದ್ದರು”ಎಂದು ಎಸ್ಪಿ ಹೇಳಿದರು.
“ಕರೆ ಮಾಡಿದ ಸಂಖ್ಯೆ ಸ್ವಿಚ್ ಆಫ್ ಆಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಮೇ 31 ರ ರಾತ್ರಿ ಸಾಹುವನ್ನು ಕೊಲೆ ಮಾಡಲಾಗಿದೆ ಮತ್ತು ತನಿಖಾಧಿಕಾರಿಗಳನ್ನು ದಾರಿತಪ್ಪಿಸಲು ರಾನ್ಸಮ್ ಕರೆ ಮಾಡಲಾಗಿದೆ. ಮೃತರು ಆನ್ಲೈನ್ ಬೆಟ್ಟಿಂಗ್ಗೆ ಸಂಬಂಧ ಹೊಂದಿದ್ದರು ಮತ್ತು ಇದು ಕೊಲೆಗೆ ಕಾರಣವೆಂದು ತೋರುತ್ತದೆಹತ್ಯೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ”ಎಂದು ಸಿನ್ಹಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್
MUST WATCH
ಹೊಸ ಸೇರ್ಪಡೆ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಶುಕ್ತಿಜಾ