ಹಿರಿಯ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ CRPF ಸಬ್ ಇನ್ಸ್ ಪೆಕ್ಟರ್, ಆತ್ಮಹತ್ಯೆಗೆ ಶರಣಾದ SI
ಕರ್ನೈಲ್ ಸಿಂಗ್ ಜಮ್ಮು-ಕಾಶ್ಮೀರದ ಉಧಾಂಪುರ್ ಮೂಲದವರು
Team Udayavani, Jul 25, 2020, 9:38 AM IST
ನವದೆಹಲಿ:ಸಿಆರ್ ಪಿಎಫ್ (ಕೇಂದ್ರೀಯ ಮೀಸಲು ಪೊಲೀಸ್ ಪಡೆ)ಯ ಸಬ್ ಇನ್ಸ್ ಪೆಕ್ಟರ್ ರೊಬ್ಬರು ತನ್ನ ಹಿರಿಯ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆಗೈದ ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೆಹಲಿಯ ಲೋಧಿ ಎಸ್ಟೇಟ್ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಕೇಂದ್ರ ಗೃಹ ಸಚಿವಾಲಯಕ್ಕೆ ನೀಡಿರುವ ಲೋಧಿ ಎಸ್ಟೇಟ್ ನ ಬಂಗ್ಲೆಯಲ್ಲಿ ಶುಕ್ರವಾರ ರಾತ್ರಿ 10.30ರ ಹೊತ್ತಿಗೆ ಗುಂಡಿನ ಶಬ್ದ ಕೇಳಿ ಅರೆಸೇನಾಪಡೆಯ ಹಿರಿಯ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದರು ಎಂದು ವರದಿ ತಿಳಿಸಿದೆ.
ಅಧಿಕಾರಿಗಳು ನೀಡಿರುವ ಹೇಳಿಕೆ ಪ್ರಕಾರ,ಸಬ್ ಇನ್ಸ್ ಪೆಕ್ಟರ್ ಕರ್ನೈಲ್ ಸಿಂಗ್ (55ವರ್ಷ), ಸಹೋದ್ಯೋಗಿ ಹಿರಿಯ ಸಬ್ ಇನ್ಸ್ ಪೆಕ್ಟರ್ ದಶ್ ರಥ್ ಸಿಂಗ್ (56ವರ್ಷ) ನಡುವೆ ಘರ್ಷಣೆ ನಡೆದಿದ್ದು, ಈ ಸಂದರ್ಭದಲ್ಲಿ ಎಸ್ ಐ ಕರ್ನೈಲ್ ಸಿಂಗ್ ಗುಂಡು ಹಾರಿಸಿ ಹಿರಿಯ ಅಧಿಕಾರಿ ದಶ್ ರಥ್ ಅವರನ್ನು ಕೊಂದಿದ್ದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.
ಕರ್ನೈಲ್ ಸಿಂಗ್ ಜಮ್ಮು-ಕಾಶ್ಮೀರದ ಉಧಾಂಪುರ್ ಮೂಲದವರು, ದಶ್ ರಥ್ ಸಿಂಗ್ ಹರ್ಯಾಣದ ರೋಹ್ಟಕ್ ಮೂಲದವರಾಗಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್