ಆತ್ಮಹತ್ಯಾ ದಾಳಿ ಮೂಲಕ ಅಮಿತ್ ಶಾ, ಯೋಗಿ ಹತ್ಯೆ ಮಾಡ್ತೇವೆ: CRPF ಗೆ ಬೆದರಿಕೆಯ ಇ ಮೇಲ್
ಹತ್ಯೆಗೈಯುವ ಬೆದರಿಕೆ ಒಡ್ಡಿರುವ ಇ-ಮೇಲ್ ಮೂಲದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
Team Udayavani, Apr 6, 2021, 1:05 PM IST
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆಗೈಯುವುದಾಗಿ ಬೆದರಿಕೆ ಒಡ್ಡಿರುವ ಇ-ಮೇಲ್ ಬಂದಿರುವುದಾಗಿ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ಮಂಗಳವಾರ(ಏ.6) ತಿಳಿಸಿದೆ.
ಇದನ್ನೂ ಓದಿ:ಉಡುಪಿ: ಮನೆ ಮುಂಭಾಗ ನಿಲ್ಲಿಸಿರುವ ವಾಹನಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ಮಾಧ್ಯಮಗಳ ವರದಿ ಪ್ರಕಾರ, ಕೆಲವು ದಿನಗಳ ಹಿಂದೆ ಮುಂಬೈನಲ್ಲಿರುವ ಸಿಆರ್ ಪಿಎಫ್ ಕೇಂದ್ರ ಕಚೇರಿಗೆ ಬೆದರಿಕೆ ಒಡ್ಡಿರುವ ಇ-ಮೇಲ್ ಬಂದಿರುವುದಾಗಿ ಹೇಳಿದೆ. ಪ್ರಮುಖ ಧಾರ್ಮಿಕ ಸ್ಥಳ ಹಾಗೂ ಮುಖ್ಯವಾದ ಘಟಕಗಳ ಮೇಲೂ ದಾಳಿ ನಡೆಸುವುದಾಗಿ ಇ-ಮೇಲ್ ನಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆತ್ಮಹತ್ಯೆ ದಾಳಿಯಿಂದ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ನಿರ್ಮೂಲ ಮಾಡುವುದಾಗಿ ಇ-ಮೇಲ್ ನಲ್ಲಿ ಬೆದರಿಸಲಾಗಿದೆ. ಯೋಗಿ ಹಾಗೂ ಶಾ ಅವರನ್ನು ಹತ್ಯೆಗೈಯಲು 11 ಮಂದಿ ಆತ್ಮಹತ್ಯಾ ಬಾಂಬರ್ಸ್ ಇದ್ದಿರುವುದಾಗಿ ಇ-ಮೇಲ್ ನಲ್ಲಿ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
ಗೃಹ ಸಚಿವ ಅಮಿತ್ ಶಾ ಮತ್ತು ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆಗೈಯುವ ಬೆದರಿಕೆ ಒಡ್ಡಿರುವ ಇ-ಮೇಲ್ ಮೂಲದ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಈ ಬಗ್ಗೆ ಶೀಘ್ರವೇ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್