ಪಶ್ಚಿಮ ಬಂಗಾಳ ರಾಜ್ಯಪಾಲರಾಗಿ ಸಿ.ವಿ.ಆನಂದ ಬೋಸ್ ಪ್ರಮಾಣ ವಚನ ಸ್ವೀಕಾರ
Team Udayavani, Nov 23, 2022, 4:41 PM IST
ಕೋಲ್ಕತಾ : ಪಶ್ಚಿಮ ಬಂಗಾಳದ ನೂತನ ರಾಜ್ಯಪಾಲರಾಗಿ ಸಿ.ವಿ. ಆನಂದ ಬೋಸ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇತರ ರಾಜ್ಯ ಸಚಿವರು ಮತ್ತು ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ಕಲ್ಕತ್ತಾ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಅವರು ಪ್ರಮಾಣ ವಚನ ಬೋಧಿಸಿದರು. ಆದರೆ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಕಾರ್ಯಕ್ರಮದಿಂದ ಹೊರಗುಳಿದಿದ್ದರು.
977 ರ ಬ್ಯಾಚ್ನ ನಿವೃತ್ತ ಕೇರಳ ಕೇಡರ್ ಐಎಎಸ್ ಅಧಿಕಾರಿ ಬೋಸ್ ಅವರನ್ನು ನವೆಂಬರ್ 17 ರಂದು ಪಶ್ಚಿಮ ಬಂಗಾಳದ ಹೊಸ ಗವರ್ನರ್ ಆಗಿ ನೇಮಿಸಲಾಯಿತು. ಅವರು ಲಾ ಗಣೇಶನ್ ಅವರಿಂದ ತೆರವಾದ ಸ್ಥಾನವನ್ನು ಅಲಂಕರಿಸಿದರು. ಬೋಸ್ ಅವರು 2011 ರಲ್ಲಿ ನಿವೃತ್ತರಾಗುವ ಮೊದಲು ಕೋಲ್ಕತಾದ ರಾಷ್ಟ್ರೀಯ ವಸ್ತುಸಂಗ್ರಹಾಲಯದ ನಿರ್ವಾಹಕರಾಗಿ ಸೇವೆ ಸಲ್ಲಿಸಿದರು.