ಅಬ್ಬರಿಸಿ ಕ್ಷೀಣಿಸಿದ ಅಸಾನಿ; ಚಂಡಮಾರುತದಿಂದಾಗಿ ಐದು ರಾಜ್ಯಗಳಲ್ಲಿ ಬಿರುಗಾಳಿ-ಮಳೆ

ಹಲವು ವಿಮಾನಗಳ ಸಂಚಾರ ರದ್ದು; ಜನಜೀವನ ಅಸ್ತವ್ಯಸ್ತ

Team Udayavani, May 11, 2022, 12:46 AM IST

ಅಬ್ಬರಿಸಿ ಕ್ಷೀಣಿಸಿದ ಅಸಾನಿ; ಚಂಡಮಾರುತದಿಂದಾಗಿ ಐದು ರಾಜ್ಯಗಳಲ್ಲಿ ಬಿರುಗಾಳಿ-ಮಳೆ

ಹೊಸದಿಲ್ಲಿ: ಗಂಟೆಗೆ 105 ಕಿ.ಮೀ. ವೇಗದ ಗಾಳಿಯೊಂದಿಗೆ ಪೂರ್ವ ಕರಾವಳಿಯನ್ನು ತಲುಪಿರುವ ಅಸಾನಿ ಚಂಡಮಾರುತವು ಹಲವು ರಾಜ್ಯಗಳ ಜನಜೀವನವನ್ನು ಅಲ್ಲೋಲ ಕಲ್ಲೋಲವಾಗಿಸಿದೆ. ಮಂಗಳವಾರ ರಾತ್ರಿ ವೇಳೆಗೆ ಚಂಡಮಾರುತದ ತೀವ್ರತೆ ಕಡಿಮೆಯಾಗಿದ್ದರೂ, ಸೈಕ್ಲೋನ್‌ ಪ್ರಭಾವವೆಂಬಂತೆ ಪಶ್ಚಿಮ ಬಂಗಾಲ, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು ಹಾಗೂ ಕೇರಳಗಳಲ್ಲಿ ಭಾರೀ ಗಾಳಿ- ಮಳೆಯಾಗಿದೆ.

ಗುರುವಾರದವರೆಗೂ ಮಳೆ ಮುಂದುವರಿಯಲಿದ್ದು, ಈ ರಾಜ್ಯಗಳಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣ ಪಡೆಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ. ಮಂಗಳವಾರ ಕರಾ ವಳಿ ನಗರವಾದ ವಿಶಾಖಪಟ್ಟಣದಲ್ಲಿ ಧಾರಾಕಾರ ಮಳೆಯಾಗಿದ್ದು, ತೀವ್ರ ಬಿರುಗಾಳಿ ಯಿಂದಾಗಿ ಜನಜೀವನ ಅಸ್ತವ್ಯಸ್ತವಾಯಿತು. ಬಂದರುನಗರಿಯಲ್ಲಿ ಚಂಡಮಾರುತದ ಪ್ರಭಾವ ಅಧಿಕವಾಗಿರಲಿದೆ ಎಂಬ ಭೀತಿಯಿಂದ ವಿಶಾಖಪಟ್ಟಣಂ ಬಂದರಿನ ಎಲ್ಲ ಕಾರ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ.

ವಿಶಾಖಪಟ್ಟಣಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಸಂಸ್ಥೆಯು 23 ವಿಮಾನಗಳನ್ನು ರದ್ದು ಮಾಡಿದೆ. ಏರ್‌ ಏಷ್ಯಾದ ನಾಲ್ಕು ವಿಮಾನಗಳ ಸಂಚಾರವನ್ನೂ ರದ್ದು ಮಾಡಲಾಗಿದೆ. ಆಂಧ್ರಪ್ರದೇಶದ ಕರಾವಳಿ ಯಲ್ಲಿ ಹಾಗೂ ಮೇ 12ರವರೆಗೆ ಸಿಕ್ಕಿಂ, ಬಿಹಾರ, ಜಾರ್ಖಂಡ್‌ನ‌ಲ್ಲಿಯೂ ಮಳೆಯಾಗ ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಡಿಶಾ
ಚಂಡಮಾರುತವು ಕರಾವಳಿಗೆ ಸಮೀಪಿಸುತ್ತಿದ್ದಂತೆ, ಒಡಿಶಾದ ಗಂಜಾಮ್‌ ಆಡಳಿತವು ಗೋಪಾಲಪುರ ಬೀಚ್‌ ಸೇರಿದಂತೆ ಎಲ್ಲ ಸಮುದ್ರತೀರಗಳನ್ನೂ 2 ದಿನಗಳ ಕಾಲ ಮುಚ್ಚಿ ಆದೇಶ ಹೊರಡಿಸಿದೆ. ಅಲೆಯ ಅಬ್ಬರದಿಂದಾಗಿ ಸಮುದ್ರದ ಮಧ್ಯೆ ಸಿಲುಕಿದ್ದ ಒಡಿಶಾದ 11 ಮೀನುಗಾರರನ್ನು ಕರಾವಳಿ ರಕ್ಷಕ ಪಡೆಯು ರಕ್ಷಿಸಿ ಕರೆತಂದಿದೆ. ಈ ನಡುವೆ 60 ಮೀನು ಗಾರರಿದ್ದ ದೋಣಿಯೊಂದು ಸಮುದ್ರದ ನಡುವೆ ದೈತ್ಯ ಅಲೆಗಳಿಗೆ ಸಿಕ್ಕು ಮುಗುಚಿ ಕೊಂಡಿದ್ದು ಅದರಲ್ಲಿದ್ದ ಎಲ್ಲ ಮೀನುಗಾರರನ್ನು ರಕ್ಷಿಸಲಾಗಿದೆ.

ಆಂಧ್ರಪ್ರದೇಶ
ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹೈಅಲರ್ಟ್‌ ಘೋಷಿಸಲಾಗಿದೆ. ಸಮುದ್ರಕ್ಕಿಳಿ ಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ವಿಶಾಖ ಪಟ್ಟಣಂ ಏರ್‌ಪೋರ್ಟ್‌ಗೆ ಬೆಂಗಳೂರು, ಕರ್ನೂಲ್‌, ಹೈದರಾಬಾದ್‌ನಿಂದ ಬಂದ ವಿಮಾನಗಳಿಗೆ ಲ್ಯಾಂಡಿಂಗ್‌ ಸಾಧ್ಯವಾಗಲಿಲ್ಲ. ಹೀಗಾಗಿ ಅವುಗಳನ್ನು ಮರಳಿ ಕಳುಹಿಸಲಾಗಿದ್ದು, ಹಲವು ವಿಮಾನಗಳ ಸಂಚಾರವನ್ನೇ ರದ್ದು ಮಾಡಲಾಗಿದೆ.

ಪಶ್ಚಿಮ ಬಂಗಾಲ
ಕೆಲವು ಭಾಗಗಳಲ್ಲಿ ಮಧ್ಯಮದಿಂದ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ಇನ್ನೂ 2 ದಿನ ಇದು ಮುಂದುವರಿಯಲಿದೆ. ಹೆಚ್ಚು ಹಾನಿ- ನಷ್ಟ ಉಂಟಾಗದಂತೆ ತಡೆಯಲು ಎಲ್ಲ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ.

ತಮಿಳುನಾಡು
ಚೆನ್ನೈ ಏರ್‌ಪೋರ್ಟ್‌ನಲ್ಲಿ ಜೈಪುರ, ವಿಶಾಖಪಟ್ಟಣ, ಮುಂಬಯಿ, ಹೈದರಾಬಾದ್‌ ಸೇರಿದಂತೆ ವಿವಿಧ ಕಡೆಗಳಿಂದ ಬರಬೇಕಾಗಿದ್ದ 10 ವಿಮಾನ ಗಳನ್ನು ರದ್ದು ಮಾಡಲಾಗಿದೆ. ಕೊಯಂ ಬೇಡು, ಅನ್ನಾನಗರ, ಚೂಲೈಮೇಡು, ನುಂಗಂಬಾಕ್ಕಮ್‌ನಲ್ಲಿ ಭಾರೀ ಮಳೆಯಾಗುತ್ತಿದೆ.

ಕೇರಳ
ದಕ್ಷಿಣ ಮತ್ತು ಮಧ್ಯ ಕೇರಳದಲ್ಲಿ ವರ್ಷಧಾರೆ ಮುಂದುವರಿದಿದ್ದು, ಶುಕ್ರವಾರದವರೆಗೂ ಇದೇ ಸ್ಥಿತಿಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.