Gujarat: ಇಬ್ಬರನ್ನು ಬಲಿ ತೆಗೆದುಕೊಂಡ ಬಿಪರ್ಜಾಯ್ ಚಂಡಮಾರುತ
Team Udayavani, Jun 16, 2023, 10:23 AM IST
ಭಾವ್ನಗರ: ಬಿಪರ್ಜಾಯ್ ಚಂಡಮಾರುತದಿಂದ ಗುಜರಾತ್ನ ಹಲವು ಭಾಗಗಳಲ್ಲಿ ಭಾರೀ ಮಳೆಯನ್ನು ತಂದಿದ್ದು, ಭಾವ್ನಗರ ಜಿಲ್ಲೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಮೇಕೆಗಳನ್ನು ರಕ್ಷಣೆಗೆ ತೆರಳಿದ್ದ ತಂದೆ-ಮಗ ಮೃತಪಟ್ಟ ಘಟನೆ ನಡೆದಿದೆ.
ಬಿಪರ್ಜಾಯ್ ಚಂಡಮಾರುತ ಗುಜರಾತ್ನ ಕರಾವಳಿಗೆ ಅಪ್ಪಳಿಸಿದ್ದು, ಭಾರಿ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ವರುಣನ ಅಬ್ಬರದಿಂದ ಅವಾಂತರ ಸೃಷ್ಟಿಯಾಗಿದೆ.
ಮಳೆಯಿಂದಾಗಿ ಹತ್ತಾರು ಮರಗಳು ಧರೆಗುರುಳಿ ಬಿದ್ದಿವೆ. ನೂರಾರು ಗ್ರಾಮಗಳಲ್ಲಿ ವಿದ್ಯುತ್ ಸ್ಥಗಿತವಾಗಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
#WATCH | Gujarat: Mandvi witnesses strong winds as an impact of cyclone ‘Biparjoy’ pic.twitter.com/2JKV5Rwhkz
— ANI (@ANI) June 16, 2023
ಚಂಡಮಾರುತದಿಂದ ಹಾನಿಗೆ ಗುರಿಯಾಗಿರುವ ಎಲ್ಲ ಜಿಲ್ಲೆಗಳಲ್ಲಿ ಗುಜರಾತ್ ಪೊಲೀಸ್ ಇಲಾಖೆ, ಭೂಸೇನೆ, ಎನ್ಡಿಆರ್ಎಫ್, ರಾಜ್ಯ ವಿಪತ್ತು ನಿರ್ವಹಣ ಪಡೆ, ಐಎಎಫ್, ಭಾರತೀಯ ನೌಕಾದಳಗಳು ವಿವಿಧ ರೀತಿಯಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ನೆರವಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!