ಗುಲಾಬ್ ಅಬ್ಬರ: ಮಹಾ ಮಳೆಗೆ 25ಕ್ಕೂ ಹೆಚ್ಚು ಮಂದಿ ಬಲಿ
Cyclone Gulab live updates: 'Heavy rain
Team Udayavani, Sep 29, 2021, 2:57 PM IST
ಮುಂಬಯಿ : ದೇಶದ ವಿವಿಧೆಡೆ ಗುಲಾಬ್ ಚಂಡ ಮಾರುತದ ದುಷ್ಪರಿಣಾಮವಾಗಿ ಭಾರಿ ಮಳೆ ಸುರಿಯುತ್ತಿದ್ದು, 25 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸುತ್ತಿದೆ. ಮಹಾರಾಷ್ಟ್ರದ ಹಲವೆಡೆ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಹಲವರು ಪ್ರಾಣ ಕಳೆದುಕೊಂಡಿದ್ದಾರೆ.
ಮಹಾರಾಷ್ಟ್ರದಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. 17 ಕ್ಕೂ ಹೆಚ್ಚು ಮಂದಿ ಅವಘಡಗಳಲ್ಲಿ ಪ್ರಾಣ ಕಳೆದುಕೊಂಡಿರುವ ಬಗ್ಗೆ ವರದಿಯಾಗಿದೆ.
ಮರಾಠವಾಡ ಮತ್ತು ವಿದರ್ಭದ ಕೆಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಮತ್ತು ನಾಲೆಗಳು ಉಕ್ಕಿ ಹರಿಯುತ್ತಿದ್ದು, ಅನೇಕ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಕೆಲವೆಡೆ ಅನೇಕ ಮಂದಿ ಪ್ರವಾಹದಲ್ಲಿ ಸಿಲುಕಿಕೊಂಡಿದ್ದು, ರಕ್ಷಣ ಕಾರ್ಯಾಚರಣೆ ನಡೆಯುತ್ತಿದೆ. ಬೆಳೆಗಳಿಗೆ ಅಪಾರ ಪ್ರಮಾಣದ ಹಾನಿ ಉಂಟಾಗಿದೆ.
ಯಾವತ್ಮಾಳ್ ಜಿಲ್ಲೆಯಲ್ಲಿ ಸಾರಿಗೆ ಬಸ್ಸೊಂದು ಕೊಚ್ಚಿ ಹೋಗಿದ್ದು ಮೂವರು ನಾಪತ್ತೆಯಾಗಿದ್ದಾರೆ. ಮಧ್ಯ ಮಹಾರಾಷ್ಟ್ರದಲ್ಲಿ ರಕ್ಷಣಾ ಪಡೆಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಆಂಧ್ರ ದಲ್ಲೂ ಭಾರಿ ಮಳೆ ಸುರಿಯುತ್ತಿದ್ದು ಶ್ರೀಕಾಕುಳಂ ಜಿಲ್ಲೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ತೆಲಗಾಂಣದಲ್ಲೂ ಕುಂಭದ್ರೋಣ ಮಳೆ ಸುರಿಯುತ್ತಿದೆ.
ಪಶ್ಚಿಮ ಬಂಗಾಳದಲ್ಲೂ ವರುಣ ರೌದ್ರ ಅವತಾರ ತೋರುತ್ತಿದ್ದು, ಕೋಲ್ಕತಾದಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಕೊಲ್ಕತಾ ನಗರದ ಆಹಿರಿಟೋಲಾ ರಸ್ತೆಯಲ್ಲಿ ಗೋಡೆ ಕುಸಿದು 3 ವರ್ಷ ಪ್ರಾಯದ ಮಗು ದಾರುಣವಾಗಿ ಸಾವನ್ನಪ್ಪಿದೆ.
ದೇಶದ ವಿವಿಧೆಡೆಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರತೆ ಪಡೆಯುತ್ತಿದ್ದು, ಶುಕ್ರವಾರದಿಂದ ಗುಜರಾತ್ ನಲ್ಲೂ ಭಾರಿ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ