ಚಂಡಮಾರುತಕ್ಕೆ ನಲುಗಿದ ತಮಿಳುನಾಡು; ಆಂಧ್ರದಲ್ಲೂ ಮಳೆ
4- ತಮಿಳುನಾಡಿನಲ್ಲಿ ಮ್ಯಾಂಡಸ್ಗೆ ಬಲಿಯಾದವರು
Team Udayavani, Dec 11, 2022, 12:33 AM IST
ಚೆನ್ನೈ: ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ಕರ್ನಾಟಕದ ಮೇಲೆ ಮ್ಯಾಂಡಸ್ ಚಂಡಮಾರುತದ ಪರಿಣಾಮ ಬೀರಿದ್ದು, ಚೆನ್ನೈಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆಯಿಂದಾಗಿ ತಮಿಳುನಾಡಿನಲ್ಲಿ ನಾಲ್ವರು ಜೀವ ಕಳೆದುಕೊಂಡಿದ್ದಾರೆ.
ಶುಕ್ರವಾರ ಮಧ್ಯರಾತ್ರಿ 2 ಗಂಟೆ ವೇಳೆಗೆ ಮಮಲ್ಲಪುರಂ ಕರಾವಳಿಗೆ ಮ್ಯಾಂಡಸ್ ಚಂಡಮಾರುತ ಅಪ್ಪಳಿಸಿತು. ಇದರಿಂದಾಗಿ ಭಾರೀ ಮಳೆಯಾಗಿದ್ದು, 13 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಕಟ್ಟುಪಕ್ಕಮ್ನಲ್ಲಿ 16 ಸೆ.ಮೀ. ಮಳೆಯಾಗಿದೆ.
ಇದರಿಂದಾಗಿ ಚೆನ್ನೈ, ಮಧುರಾತಂಕಮ್, ಈಸ್ಟ್ ಕೋಸ್ಟ್ ರೋಡ್, ಓಲ್ಡ್ ಮಹಾಬಲಿಪುರಂ ರಸ್ತೆ ಸಹಿತ ಕೆಲವೆಡೆ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿತ್ತು. 16 ಜಿಲ್ಲೆಗಳಲ್ಲಿ ಶನಿವಾರ ಮಳೆಯಿಂದಾಗಿ ರಜೆ ನೀಡಲಾಗಿತ್ತು. ಅಷ್ಟೇ ಅಲ್ಲ, ಸಾರ್ವಜನಿಕ ಸಾರಿಗೆಯನ್ನೂ ರದ್ದು ಮಾಡಲಾಗಿತ್ತು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಬೆಳಗ್ಗೆಯೇ ಪರಿಸ್ಥಿತಿ ಅವಲೋಕಿಸಿದ್ದರು.
ತಮಿಳುನಾಡು ಅಧಿಕಾರಿಗಳ ಪ್ರಕಾರ, ಮ್ಯಾಂಡಸ್ನಿಂದ ಭಾರೀ ಪ್ರಮಾಣದ ಹಾನಿಯಾಗಿಲ್ಲ. ರಾಜ್ಯದ ನಾನಾ ಕಡೆಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಆಂಧ್ರ ಪ್ರದೇಶದ ರಾಯಲ್ಸೀಮಾ ಮತ್ತು ದಕ್ಷಿಣ ಕರಾವಳಿಯಲ್ಲಿ ಭಾರೀ ಮಳೆಯಾಗಿದೆ. ಕಳೆದ 24 ಗಂಟೆಗಳಲ್ಲಿ ತಿರುಪತಿ ಬಳಿಯ ನಾಯ್ಡುಪೇಟಾದಲ್ಲಿ 281 ಮಿ.ಮೀ. ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ