ನಿವಾರ್ ಅಬ್ಬರ-ಜನಜೀವನ ತತ್ತರ: ತ. ನಾಡು, ಪುದುಚೇರಿಯಲ್ಲಿ ಭಾರೀ ವರ್ಷಧಾರೆ !
Team Udayavani, Nov 26, 2020, 8:05 AM IST
ಚೆನ್ನೈ: ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಿವಾರ್ ಚಂಡಮಾರುತ ಅಬ್ಬರಿಸಿದ್ದು ಭಾರೀ ವರ್ಷಧಾರೆಯಾಗುತ್ತಿದೆ. ಮಧ್ಯರಾತ್ರಿ 1 ರಿಂದ 2:30 ರ ನಡುವೆ ಅಪ್ಪಳಿಸಿದ ಸೈಕ್ಲೋನ್ ಬಳಿಕ ದುರ್ಬಲವಾಗಿದೆ.
ಚಂಡಮಾರುತ ಅಪ್ಪಳಿಸಿದ ಸಮಯದಲ್ಲಿ ಗಂಟೆಗೆ 100-130 ಕಿ.ಮೀ ವೇಗದಲ್ಲಿ ಗಾಳಿ ಬೀಸಿದ್ದು, ಚೆನ್ನೈ ನಗರದಿಂದ 115 ಕಿ.ಮೀ ದಕ್ಷಿಣಕ್ಕೆ ಹಾಗೂ ಪುದುಚೇರಿಯಿಂದ 30 ಕಿಮೀ ಉತ್ತರಕ್ಕೆ ಇರುವ ಮರಕ್ಕಣಮ್ ಸಮೀಪ ಚಂಡಮಾರುತ ಅಪ್ಪಳಿಸಿದೆ. ಚೆನ್ನೈ ನಗರದಲ್ಲೂ ಭಾರೀ ಮಳೆಯಾಗುತ್ತಿದ್ದು ಹಲವೆಡೆ ಭೂಕುಸಿತಗೊಂಡಿದೆ. ಚಂಡಮಾರುತದ ಪರಿಣಾಮವಾಗಿ ಇವತ್ತು ಮಧ್ಯಾಹ್ನದವರೆಗೂ ತಮಿಳುನಾಡಿನ ಕೆಲವೆಡೆ ದೊಡ್ಡ ಪ್ರಮಾಣದಲ್ಲಿ ಮಳೆ ಗಾಳಿ ಇರಲಿದೆ. ನಾಳೆ ಶುಕ್ರವಾರದವರೆಗೂ ಮಳೆ ಮುಂದುವರಿಯಲಿದೆ ಎನ್ನಲಾಗಿದೆ.
VERY SEVERE CYCLONIC STORM NIVAR
REALISED RAINFALL (MM) DURING 08:30 HOURS IST OF 25TH NOV TO
0230 HOURS IST OF 26TH NOVEMBER 2020:
NAGAPATNAM-63, KARAIKAL-86, CUDDALORE-246,
PUDUCHERRY-237 AND CHENNAI-89 pic.twitter.com/Pzo9SfOWGn— India Meteorological Department (@Indiametdept) November 26, 2020
ಧಾರಾಕಾರ ಮಳೆಯಿಂದ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಚೆನ್ನೈನ ಚೆಂಬರಂಬಕ್ಕಂ ಸರೋವರದ ಗೇಟ್ಗಳನ್ನು 2015ರ ನಂತರ ಇದೇ ಮೊದಲ ಬಾರಿಗೆ ತೆರೆಯಲಾಗಿದೆ. ತೀವ್ರ ಚಂಡಮಾರುತ ನಿವಾರ್, ಬಂಗಾಳಕೊಲ್ಲಿಯಲ್ಲಿಯಿಂದ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿದೆ.
ಈಗಾಗಲೇ ತಗ್ಗು ಪ್ರದೇಶಗಳು ಅಸುರಕ್ಷಿತ ಕಟ್ಟಡಗಳಿಂದ ಜನರನ್ನು ತೆರವುಗೊಳಿಸಿ ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗಿದೆ. 13 ಲಕ್ಷ ಜನರಿಗೆ ಸುರಕ್ಷತೆ ಕಲ್ಪಿಸಬಲ್ಲ 4,733 ಪರಿಹಾರ ಕೇಂದ್ರಗಳ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯವರೆಗೆ 28 ಸಾವಿರ ಮಕ್ಕಳು ಸೇರಿ 1.38 ಲಕ್ಷ ಜನರನ್ನ ಈ ಕೇಂದ್ರಗಳಿಗೆ ಕಳುಹಿಸಲಾಗಿದೆ. 13 ಜಿಲ್ಲೆಗಳಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ರಕ್ಷಣಾ ಕಾರ್ಯಕ್ಕಾಗಿ ಭಾರತೀಯ ಸೇನೆಯಿಂದ ಎಂಟು ತಂಡಗಳು ಇವತ್ತು ಚೆನ್ನೈಗೆ ಬಂದಿಳಿಯುತ್ತಿದ್ದು, ಒಂದೊಂದು ತಂಡದಲ್ಲಿ 10 ಮಂದಿ ಇದ್ದಾರೆ. ಇದರ ಜೊತೆಗೆ ಇನ್ನೂ ಆರು ತಂಡಗಳು ತಿರುಚ್ಚಿಗೆ ಹೋಗುತ್ತಿವೆ. ಹಾಗೆಯೇ, ನೌಕಾಪಡೆ ಮತ್ತು ಕರಾವಳಿ ಕಾವಲು ಪಡೆಗಳೂ ಕೂಡ ತಮ್ಮ ಹಲವು ತಂಡಗಳನ್ನ ರಕ್ಷಣಾ ಕಾರ್ಯಕ್ಕಾಗಿ ತಮಿಳುನಾಡಿನಲ್ಲಿ ನಿಯೋಜಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ