ಚಂಡಮಾರುತ ಪರಿಶೀಲನಾ ಸಭೆ: ಮಮತಾ ಬ್ಯಾನರ್ಜಿಗಾಗಿ 30 ನಿಮಿಷ ಕಾದ ಪ್ರಧಾನಿ ಮೋದಿ?
ಸಭೆಗೆ ಗೈರು ಹಾಜರಾಗುವುದು ಸಾಂವಿಧಾನಿಕವಾಗಿ ಸಮರ್ಪಕವಾದ ನಡೆಯಲ್ಲ ಎಂದು ತಿಳಿಸಿದ್ದಾರೆ.
Team Udayavani, May 28, 2021, 5:26 PM IST
ಕೋಲ್ಕತಾ: ಯಾಸ್ ಚಂಡಮಾರುತದಿಂದ ಸಂಭವಿಸಿದ ನಷ್ಟದ ಪರಿಶೀಲನಾ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮಬಂಗಾಳ ರಾಜ್ಯಪಾಲ ಜಗದೀಪ್ ಧಾನ್ಕಾರ್ ಅವರು ಆಗಮಿಸಿದ್ದರು. ಮಮತಾ ಬ್ಯಾನರ್ಜಿ 30 ನಿಮಿಷಗಳ ಕಾಲ ತಡವಾಗಿ ಸಭೆಗೆ ಆಗಮಿಸಿರುವುದಾಗಿ ಮೂಲಗಳು ತಿಳಿಸಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
ಇದನ್ನೂ ಓದಿ:ಲೇಡಿ ಪೋಲಿಸ್ ಅಸಭ್ಯವಾಗಿ ವರ್ತನೆ ವಿರುದ್ಧ ಕಣ್ಣೀರಿಟ್ಟ ಗರ್ಭಿಣಿ ಮಹಿಳೆ
ಮೂಲಗಳ ಪ್ರಕಾರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆಗೆ ತಡವಾಗಿ ಆಗಮಿಸಿದ ನಂತರ ಯಾಸ್ ಚಂಡಮಾರುತದಿಂದ ರಾಜ್ಯದಲ್ಲಿ ಸಂಭವಿಸಿದ ನಷ್ಟಕ್ಕೆ ಸಂಬಂಧಿಸಿದ ದಾಖಲೆ(ಪೇಪರ್ಸ್)ಗಳನ್ನು ನೀಡಿದ ಕೂಡಲೇ ಅಲ್ಲಿಂದ ನಿರ್ಗಮಿಸಿರುವುದಾಗಿ ವರದಿ ವಿವರಿಸಿದೆ.
ಮಮತಾ ಬ್ಯಾನರ್ಜಿ ಅವರ ನಡವಳಿಕೆ ಬಗ್ಗೆ ಟ್ವೀಟ್ ಮೂಲಕ ಅಸಮಾಧಾನ ಹೊರಹಾಕಿರುವ ಗವರ್ನರ್ ಧಾನ್ಕಾರ್, ಪ್ರಧಾನಿ ನರೇಂದ್ರ ಮೋದಿ ಅವರ ಪರಿಶೀಲನಾ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರೆ ಅದು ರಾಜ್ಯದ ಹಿತಾಸಕ್ತಿ ಪೂರೈಸಲು ಸಾಧ್ಯವಾಗುತ್ತಿತ್ತು. ಆದರೆ ತಿಕ್ಕಾಟದ ಸ್ವಭಾವದಿಂದಾಗಿ ರಾಜ್ಯದ ಬಗ್ಗೆ ಅಥವಾ ಪ್ರಜಾಪ್ರಭುತ್ವದ ಬಗ್ಗೆ ನಿರಾಸಕ್ತಿ ಹೊಂದಿರುವುದನ್ನು ತೋರಿಸುತ್ತದೆ. ಮುಖ್ಯಮಂತ್ರಿ ಹಾಗೂ ಅಧಿಕಾರಿಗಳು ಸಭೆಗೆ ಗೈರು ಹಾಜರಾಗುವುದು ಸಾಂವಿಧಾನಿಕವಾಗಿ ಸಮರ್ಪಕವಾದ ನಡೆಯಲ್ಲ ಎಂದು ತಿಳಿಸಿದ್ದಾರೆ.
“ನಾನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರತ್ಯೇಕವಾಗಿ 15 ನಿಮಿಷಗಳ ಕಾಲ ಭೇಟಿ ಮಾಡಿ, ಯಾಸ್ ಚಂಡಮಾರುತದಿಂದ ಸಂಭವಿಸಿದ ಹಾನಿ ಬಗ್ಗೆ ವಿವರಿಸಿದ್ದೇನೆ. ಈ ಸಂದರ್ಭದಲ್ಲಿ ಕೋಣೆಯಲ್ಲಿ ಇತರ ಅಧಿಕಾರಿಗಳು ಇರಲಿಲ್ಲವಾಗಿತ್ತು. ನಂತರ ರಾಜ್ಯ ಸರ್ಕಾರದ ವರದಿಯನ್ನು ಪ್ರಧಾನಿ ಅವರಿಗೆ ಹಸ್ತಾಂತರಿಸಿ, ಕೇಂದ್ರದಿಂದ 20 ಸಾವಿರ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಬೇಕೆಂದು ಮನವಿ ಮಾಡಿಕೊಂಡಿರುವುದಾಗಿ” ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!