ಪಶ್ಚಿಮ ಬಂಗಾಲ: ದೀಪಾವಳಿ,ಕಾಳಿ ಪೂಜೆ ಹಬ್ಬಕ್ಕೆ ಸಿತ್ರಂಗ್ ಚಂಡಮಾರುತ ಅಡ್ಡಿ
Team Udayavani, Oct 25, 2022, 7:05 AM IST
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ದೀಪಾವಳಿ ಹಾಗೂ ಕಾಳಿ ಪೂಜೆಯ ಸಡಗರವನ್ನು ಸಿತ್ರಂಗ್ ಚಂಡಮಾರುತ ಕಿತ್ತುಕೊಂಡಿದೆ.
ಚಂಡಮಾರುತವು ಸೋಮವಾರ ಗಂಟೆಗೆ 33 ಕಿ.ಮೀ. ವೇಗದಲ್ಲಿ ಉತ್ತರ-ಈಶಾನ್ಯ ದಿಕ್ಕಿನತ್ತ ಸಂಚರಿಸಲು ಆರಂಭಿಸಿದ್ದು, ಮುಂದೆ ಸಾಗಿದಂತೆ ಅದರ ತೀವ್ರತೆ ಹೆಚ್ಚಾಗಿದೆ. ಪರಿಣಾಮವೆಂಬಂತೆ, ಪ.ಬಂಗಾಲ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ ಆರಂಭವಾಗಿದೆ.
ಮಂಗಳವಾರ ಚಂಡಮಾರುತವು ಬಾಂಗ್ಲಾ ಕರಾವಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಲ ಮಾತ್ರವಲ್ಲದೇ ಅಸ್ಸಾಂ, ತ್ರಿಪುರ, ಮೇಘಾಲಯ ಮತ್ತು ಮಿಜೋರಾಂನಲ್ಲೂ ಧಾರಾಕಾರ ಮಳೆಯಾಗಲಿದೆ. ಚಂಡಮಾರುತದ ಅಬ್ಬರವೇನಾದರೂ ಹೆಚ್ಚಾದರೆ, ಉಂಟಾಗಬಹುದಾದ ಅನಾಹುತವನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲ ರಾಜ್ಯ ಸರಕಾರಗಳೂ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಂಡಿವೆ.
ಪೆಂಡಾಲ್ ಕುಸಿದುಬಿತ್ತು: ಸೋಮವಾರ ಪ.ಬಂಗಾಲದ ಕೂಚ್ ಬೆಹಾರ್ನಲ್ಲಿ ಭಾರೀ ಬಿರುಗಾಳಿಗೆ ಪೂಜಾ ಪೆಂಡಾಲ್ವೊಂದು ಕುಸಿದುಬಿದ್ದಿದೆ. ಬಖಾಲಿ ಬೀಚ್ನಲ್ಲಿ ಎನ್ಡಿಆರ್ಎಫ್ ತಂಡ ನಿಯೋಜನೆಗೊಂಡಿದ್ದು, ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ