ತೌಕ್ತೆ ಚಂಡಮಾರುತ ರೌದ್ರಾವತಾರ: ಕಾಸರಗೋಡಿನಲ್ಲಿ ಮನೆ ಕುಸಿತ, ಕರಾವಳಿ ಪ್ರದೇಶದಲ್ಲಿ ಭೀತಿ
ಕರ್ನಾಟಕ, ಗೋವಾ, ಮಹಾರಾಷ್ಟ್ರ, ಗುಜರಾತ್ ಕರಾವಳಿ ಪ್ರದೇಶಗಳಲ್ಲಿ ತೀವ್ರ ಸ್ವರೂಪದ ಗಾಳಿ, ಮಳೆಯಾಗಲಿದೆ ಎಂದು ತಿಳಿಸಿದೆ.
Team Udayavani, May 15, 2021, 2:35 PM IST
ನವದೆಹಲಿ/ತಿರುವನಂತಪುರಂ: ಅರಬ್ಬಿ ಸಮುದ್ರದಲ್ಲಿನ ತೀವ್ರ ವಾಯುಭಾರ ಕುಸಿತದ ಪರಿಣಾಮ ಮೇ 17ರಂದು ತೀವ್ರ ಸ್ವರೂಪದಲ್ಲಿ ತೌಕ್ತೆ ಚಂಡಮಾರುತ ಅಪ್ಪಳಿಸಲಿದ್ದು, ಇದು ಗುಜರಾತ್ ಕರಾವಳಿ ಪ್ರದೇಶವನ್ನು ಹಾದುಹೋಗಲಿದೆ ಎಂದು ವರದಿ ತೌಕ್ತೆ ಚಂಡಮಾರುತದಿಂದಾಗಿ ಕರಾವಳಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಹಲವೆಡೆ ಕರಾವಳಿ ಪ್ರದೇಶದಲ್ಲಿ ಮನೆಗಳಿಗೆ ನೀರು ನುಗ್ಗಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:ಉಳ್ಳಾಲ: ತೌಖ್ತೆ ಚಂಡಮಾರುತದ ಪ್ರಭಾವಕ್ಕೆ ಸಮುದ್ರ ಪಾಲಾದ ಹಿಂದೂ ರುದ್ರಭೂಮಿ
ತೌಕ್ತೆ ಚಂಡಮಾರುತದ ರೌದ್ರಾವತಾರದಿಂದ ಕೇರಳದ ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಕರಾವಳಿ ಭಾಗದ ಪ್ರದೇಶಗಳಲ್ಲಿ ತೀವ್ರ ಕಡಲ್ಕೊರೆತದಿಂದಾಗಿ ಮನೆಗಳಿಗೆ ನೀರು ನುಗ್ಗಿದೆ. ಕಾಸರಗೋಡಿನಲ್ಲಿ ಸಮುದ್ರ ಪ್ರದೇಶದ ಸಮೀಪವಿದ್ದ ಎರಡು ಅಂತಸ್ತಿನ ಮನೆ ಕುಸಿದುಬಿದ್ದಿರುವುದಾಗಿ ವರದಿ ತಿಳಿಸಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿ ಪ್ರದೇಶದಲ್ಲಿ ವಾಸವಾಗಿದ್ದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಕೇರಳದ ಎರ್ನಾಕುಲಂ, ಇಡುಕ್ಕಿ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ತೀವ್ರ ವಾಯುಭಾರ ಕುಸಿತದಿಂದ ಹವಾಮಾನ ವೈಪರೀತ್ಯವಾಗಲಿದೆ. ಇದರಿಂದ ತೌಕ್ತೆ ಚಂಡಮಾರುತ ಶನಿವಾರ ಬೆಳಗ್ಗಿನಿಂದಲೇ ಆರಂಭವಾಗಲಿದ್ದು, ಶನಿವಾರ ರಾತ್ರಿಯ ಬಳಿಕ ತೀವ್ರವಾಗಿ ಅಪ್ಪಳಿಸಲಿದೆ ಎಂದು ವರದಿ ವಿವರಿಸಿದೆ.
ಹವಾಮಾನ ಇಲಾಖೆ ವರದಿ ಪ್ರಕಾರ, ತೌಕ್ತೆ ಚಂಡಮಾರುತ ಅರಬ್ಬಿ ಸಮುದ್ರದ ಈಶಾನ್ಯ ಪ್ರದೇಶ, ಲಕ್ಷದ್ಚೀಪ, ಮಾಲ್ಡೀವ್ಸ್ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಅಲ್ಲದೇ ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಗುಜರಾತ್ ಕರಾವಳಿ ಪ್ರದೇಶಗಳಲ್ಲಿ ತೀವ್ರ ಸ್ವರೂಪದ ಗಾಳಿ, ಮಳೆಯಾಗಲಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್