RML ಆಸ್ಪತ್ರೆಗೆ ದಾಖಲಾದ ಡಿ.ಕೆ. ಶಿವಕುಮಾರ್ ; ವೈದ್ಯರ ವಿರುದ್ಧ ಡಿಕೆ ಗರಂ!
Team Udayavani, Sep 17, 2019, 10:47 PM IST
ನವದೆಹಲಿ: ರೋಸ್ ಅವೆನ್ಯೂ ಕೋರ್ಟ್ ನಿಂದ 14 ದಿನಗಳ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಮಾಜೀ ಸಚಿವ ಡಿ.ಕೆ. ಶಿವಕುಮಾರ್ ಅವರು ಇದೀಗ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನ್ಯಾಯಾಲಯವು ಶಿವಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬಳಿಕ ಅವರನ್ನು ತಿಹಾರ್ ಜೈಲಿಗೆ ಕರೆದೊಯ್ಯುವುದಕ್ಕೂ ಮುನ್ನ ವೈದ್ಯಕೀಯ ತಪಾಸಣೆಗಾಗಿ ನಗರದ ಆರ್.ಎಂ.ಎಲ್. ಆಸ್ಪತ್ರೆಗೆ ಕರೆತರಲಾಯಿತು.
ಸುಮಾರು ಎರಡು ಗಂಟೆಗಳ ಸುದೀರ್ಘ ತಪಾಸಣೆಯ ನಂತರ ಶಿವಕುಮಾರ್ ಅವರನ್ನು ಇದೀಗ ಆಸ್ಪತ್ರೆಯ ಕಾರ್ಡಿಯಾಕ್ ಕೇರ್ ಯುನಿಟ್ ನಲ್ಲಿ ದಾಖಲಿಸಿಕೊಳ್ಳಲಾಗಿದೆ. ಮಂಗಳವಾರ ರಾತ್ರಿಯನ್ನು ಶಿವಕುಮಾರ್ ಅವರು ತಿಹಾರ್ ಜೈಲಿನ ಬದಲು ಆಸ್ಪತ್ರೆಯ ಬೆಡ್ ಮೇಲೆ ಕಳೆಯುವಂತಾಗಿದೆ.
ಶಿವಕುಮಾರ್ ಅಡ್ಮಿಟ್ ಹಿನ್ನಲೆಯಲ್ಲಿ ಆರ್.ಎಂ.ಎಲ್. ಆಸ್ಪತ್ರೆಯ ಸುತ್ತಮುತ್ತ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ತಿಹಾರ್ ಜೈಲಿನ ಮೂರನೇ ಬೆಟಾಲಿಯನ್ ಆಸ್ಪತ್ರೆಯ ಆವರಣದಲ್ಲೇ ಬೀಡುಬಿಟ್ಟಿದೆ. ಮಾತ್ರವಲ್ಲದೇ ಶಿವಕುಮಾರ್ ಅವರನ್ನು ಜೈಲಿಗೆ ಕರೆದೊಯ್ಯಲು ಬಂದಿದ್ದ ಜೈಲು ವಾಹನವನ್ನೂ ಸಹ ಆಸ್ಪತ್ರೆಯ ಆವರಣದಲ್ಲೇ ಇರಿಸಲಾಗಿದೆ.
ವೈದ್ಯರ ವಿರುದ್ಧ ಡಿಕೆ ಗರಂ!
ಆರ್.ಎಂ.ಎಲ್. ಆಸ್ಪತ್ರೆಯಲ್ಲಿ ಶಿವಕುಮಾರ್ ಅವರಿಗೆ ವೈದ್ಯಕೀಯ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ವೈದ್ಯರ ಮೇಲೆ ಕೈ ನಾಯಕ ಗರಂ ಆಗಿ ರೇಗಿದ ಘಟನೆ ನಡೆದಿದೆ. ಶಿವಕುಮಾರ್ ಅವರ ವೈದ್ಯಕೀಯ ತಪಾಸಣೆಯನ್ನು ಮುಗಿಸಿದ ಬಳಿಕ ಆಸ್ಪತ್ರೆಯ ವೈದ್ಯರು ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸುತ್ತಿದ್ದರು. ಇದರಿಂದ ಕೋಪಗೊಂಡ ಶಿವಕುಮಾರ್ ಅವರು ವೈದ್ಯರ ವಿರುದ್ದ ತಮ್ಮ ಸಿಟ್ಟನ್ನು ಹೊರಹಾಕಿದರು.
ನಿಮ್ಮ ಅನುಕಂಪ ನನಗೆ ಬೇಕಾಗಿಲ್ಲ, ವಾಸ್ತವ ಏನಿದೆಯೋ ಆ ವರದಿಯನ್ನು ನೀಡಿ. ನನಗೇನೂ ಆರೋಗ್ಯ ಸಮಸ್ಯೆ ಇಲ್ಲ ಎಂದೇ ವರದಿ ನೀಡಿ, ನಾನು ತಿಹಾರ್ ಜೈಲಿಗೆ ಹೋಗುತ್ತೇನೆ ಎಂದು ಶಿವಕುಮಾರ್ ಅವರು ವೈದ್ಯರ ಮೇಲೆ ತಮ್ಮ ಆಕ್ರೋಶವನ್ನು ಹೊರಹಾಕಿದರು ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
MUST WATCH
ಹೊಸ ಸೇರ್ಪಡೆ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ