ದಲಿತ ಬಂದ್ : ರಾಜಸ್ಥಾನದಲ್ಲಿ 1 ಸಾವು, 26 ಮಂದಿಗೆ ಗಾಯ
Team Udayavani, Apr 2, 2018, 6:28 PM IST
ಜೈಪುರ : ಎಸ್ಸಿ/ಎಸ್ಟಿ ಕಾಯಿದೆಯನ್ನು ದುರ್ಬಲಗೊಳಿಸಿರುವ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಇಂದು ನಡೆದ ಭಾರತ್ ಬಂದ್ ಪ್ರಯುಕ್ತ ರಾಜಸ್ಥಾನದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಒಬ್ಬ ವ್ಯಕ್ತಿ ಬಲಿಯಾಗಿ ಇತರ 26 ಮಂದಿ ಗಾಯಗೊಂಡರು. ಗಾಯಾಳುಗಳಲ್ಲಿ 9 ಮಂದಿ ಪೊಲೀಸರೂ ಸೇರಿದ್ದಾರೆ.
ರಾಜಸ್ಥಾನದ ಆಲ್ವಾರ್ ಜಿಲ್ಲೆಯ ಖೈರ್ತಾಲ್ ಗರಿಷ್ಠ ಹಿಂಸಾತ್ಮಕ ಪ್ರತಿಭಟನೆಯನ್ನು ಕಂಡಿತು. ಹಿಂಸೆಗೆ ಬಲಿಯಾದ 28ರ ತರುಣನನ್ನು ಪವನ್ ಜಾತವ್ ಎಂದು ಗುರುತಿಸಲಾಗಿದೆ. ಈತ ಮಾಜಿ ಸರಪಂಚರೋರ್ವರ ಮಗ ಎಂದು ಗೊತ್ತಾಗಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉದ್ರಿಕ್ತ ಪ್ರತಿಭಟನಕಾರರು ಪೊಲೀಸರ ಮೇಲೆ ಗುಂಡು ಹಾರಿಸಿದರು; ವಾಹನಗಳಿಗೆ ಮತ್ತು ಪೊಲೀಸ್ ಠಾಣೆ ಸ್ಟೋರ್ಗೆ ಬೆಂಕಿ ಹಚ್ಚಿದರು; ಆ ಸಂದರ್ಭದಲ್ಲಿ ಪೊಲೀಸರು ಬೇರೆ ಉಪಾಯವಿಲ್ಲದೆ ಫೈರಿಂಗ್ ನಡೆಸಿದರು ಎಂದು ಖೈರ್ತಾಲ್ ಪೊಲೀಸ್ ಠಾಣೆ ಅಧಿಕಾರಿ ಜಿತೇಂದ್ರ ಕುಮಾರ್ ತಿಳಿಸಿದರು.
9 ಮಂದಿ ಪೊಲೀಸ್ ಗಾಯಾಳುಗಳಲ್ಲಿ ಓರ್ವ ಡಿವೈಎಸ್ಪಿ, ಓರ್ವ ಹೆಡ್ ಕಾನ್ಸ್ಟೆಬಲ್ ಮತ್ತು 6 ಕಾನ್ಸ್ಟೆಬಲ್ಗಳು ಸೇರಿದ್ದಾರೆ. ಇವರ ಮೇಲೆ ಪ್ರತಿಭಟಕಾರರು ಕಲ್ಲೆಸೆತ ನಡೆಸಿದ್ದರು ಎಂದು ಜಿತೇಂದ್ರ ಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ