ದಲಿತನೆಂಬ ಕಾರಣಕ್ಕೆ ಕುದುರೆಯಿಂದ ಕೆಳಗಿಳಿಸಿ ಅವಮಾನ
Team Udayavani, May 11, 2023, 7:43 AM IST
ಲಕ್ನೋ: ದಲಿತನೆಂಬ ಕಾರಣಕ್ಕೆ ಮದುವೆಯ ಮೆರವಣಿಗೆಯಲ್ಲಿದ್ದ 24 ವರ್ಷದ ವರನೊಬ್ಬನಿಗೆ ಕುದುರೆ ಮೇಲಿಂದ ಕೆಳಗಿಳಿಯುವಂತೆ ಮೇಲ್ಜಾತಿಯ ಗುಂಪೊಂದು ಥಳಿಸಿ, ಅವಮಾನಿಸಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ವರದಿಯಾಗಿದೆ.
ಸದರ್ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಸೊಹಲ್ಲಾ ಜಾತವ್ ಬಸ್ತಿ ಪ್ರದೇಶದಲ್ಲಿ, ರಾಧಾ ಕೃಷ್ಣ ಮ್ಯಾರೇಜ್ ಹಾಲ್ನಲ್ಲಿ ದಲಿತ ಕುಟುಂಬವೊಂದರ ಮದುವೆ ಸಮಾರಂಭ ನಡೆಯುತ್ತಿತ್ತು. ಈ ವೇಳೆ ಇದಕ್ಕಿದ್ದಂತೆ ಕೋಲುಗಳನ್ನು ಹಿಡಿದು ಮಂಟಪಕ್ಕ ಆಗಮಿಸಿದ ಮೇಲ್ಜಾತಿಯ ಕೆಲ ಸದಸ್ಯರು, ಮಂಟಪದಲ್ಲಿದ್ದ ಜನರ ಮೇಲೆ ಹಲ್ಲೆ ನಡೆಸಿದ್ದಾರೆ.
ಅಲ್ಲದೇ, ವರ ಅಜಯ್ ಜಾಟವ್ನಿಗೆ ಥಳಿಸಿ ನಮ್ಮ ಊರಿನಲ್ಲಿ ದಲಿತರು ಕುದುರೆ ಮೇಲೆ ಮೆರವಣಿಗೆ ನಡೆಸುವಂತಿಲ್ಲ ಎಂದು ಆಕ್ಷೇಪಿಸಿ ಕೆಳಗಿಳಿಸಿದ್ದಾರೆ. ಈ ಸಂಬಂಧಿಸಿ, ವರನ ಅತ್ತೆ ದೂರು ನೀಡಲು ಮುಂದಾಗಿದ್ದು, ಪೊಲೀಸರು ಸಹಕರಿಸದ ಬಳಿಕ ಆಗ್ರಾ ಕಮಿಷನರ್ ಅವರಿಗೆ ವಿಚಾರ ತಿಳಿಸಿ ದೂರು ದಾಖಲಿಸಿದ್ದಾರೆ.
ಮೇ4 ರಂದೇ ನಡೆದಿರುವ ಘಟನೆ ಈಗ ಬೆಳಕಿಗೆ ಬಂದಿದ್ದು, ಈ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!