ಗುಜರಾತ್:ಮೇಲ್ಜಾತಿಯ ಗಾರ್ಬಾ ನೋಡಿದ್ದಕ್ಕೆ ದಲಿತ ಯುವಕನ ಹತ್ಯೆ
Team Udayavani, Oct 2, 2017, 10:57 AM IST
ಅಹಮದಾಬಾದ್ : ಚುನಾವಣೆ ಹೊಸ್ತಿಲಲ್ಲಿರುವ ಗುಜರಾತ್ನ ಆನಂದ್ ಜಿಲ್ಲೆಯಲ್ಲಿ ನವರಾತ್ರಿ ವೇಳೆ ಶನಿವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮೇಲ್ಜಾತಿ ಪಟೇಲ್ ಸಮುದಾಯದ ಗಾರ್ಬಾ ನೃತ್ಯ ಪ್ರದರ್ಶನವನ್ನು ನೋಡಿದ ಎಂಬ ಕಾರಣಕ್ಕೆ 21 ವರ್ಷ ಪ್ರಾಯದ ದಲಿತ ಯುವಕನನ್ನು ಹತ್ಯೆಗೈಯಲಾಗಿದೆ.
ಹತ್ಯೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಲ್ಲೆ ನಡೆಸಿದ 8 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಭದ್ರಾನಿಯಾ ಪ್ರದೇಶದ ವಂಕಾರ್ವಾಸ್ ಪ್ರದೇಶದ ಜಯೇಶ್ ಸೋಲಂಕಿ ಎಂಬ ಯುವಕ ಇತರ ನಾಲ್ವರು ದಲಿತ ವರ್ಗದ ಸ್ನೇಹಿತರೊಂದಿಗೆ ದೇವಾಲಯದ ಬಳಿ ಬಂದು ಗಾರ್ಬಾ ನೋಡುತ್ತಿದ್ದ , ಈ ವೇಳೆ ಪಟೇಲ್ ಸಮುದಾಯದ ಮುಖಂಡನೊಬ್ಬ ಜಾತಿ ನಿಂದನೆ ಮಾಡಿ ಇತರರನ್ನು ಸ್ಥಳಕ್ಕೆ ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ. ಈ ವೇಳೆ ಸೋಲಂಕಿಯ ತಲೆಯನ್ನು ಗೊಡೆಗೆ ಅಪ್ಪಳಿಸಿ ಅಟ್ಟಹಾಸ ಮೆರೆದಿದ್ದಾರೆ.
ಗಂಭೀರವಾಗಿ ಗಾಯಗೊಂಡ ಸೋಲಂಕಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಆತನ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಈ ಘಟನೆ ಉನಾದಲ್ಲಿ 2016 ರಲ್ಲಿ ನಾಲ್ವರು ದಲಿತರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ನೆನಪಿಸಿದ್ದು ವ್ಯಾಪಕ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿವೆ. ಬಿಜೆಪಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು