ಗುಜರಾತ್:ಮೇಲ್ಜಾತಿಯ ಗಾರ್ಬಾ ನೋಡಿದ್ದಕ್ಕೆ ದಲಿತ ಯುವಕನ ಹತ್ಯೆ
Team Udayavani, Oct 2, 2017, 10:57 AM IST
ಅಹಮದಾಬಾದ್ : ಚುನಾವಣೆ ಹೊಸ್ತಿಲಲ್ಲಿರುವ ಗುಜರಾತ್ನ ಆನಂದ್ ಜಿಲ್ಲೆಯಲ್ಲಿ ನವರಾತ್ರಿ ವೇಳೆ ಶನಿವಾರ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮೇಲ್ಜಾತಿ ಪಟೇಲ್ ಸಮುದಾಯದ ಗಾರ್ಬಾ ನೃತ್ಯ ಪ್ರದರ್ಶನವನ್ನು ನೋಡಿದ ಎಂಬ ಕಾರಣಕ್ಕೆ 21 ವರ್ಷ ಪ್ರಾಯದ ದಲಿತ ಯುವಕನನ್ನು ಹತ್ಯೆಗೈಯಲಾಗಿದೆ.
ಹತ್ಯೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಲ್ಲೆ ನಡೆಸಿದ 8 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಭದ್ರಾನಿಯಾ ಪ್ರದೇಶದ ವಂಕಾರ್ವಾಸ್ ಪ್ರದೇಶದ ಜಯೇಶ್ ಸೋಲಂಕಿ ಎಂಬ ಯುವಕ ಇತರ ನಾಲ್ವರು ದಲಿತ ವರ್ಗದ ಸ್ನೇಹಿತರೊಂದಿಗೆ ದೇವಾಲಯದ ಬಳಿ ಬಂದು ಗಾರ್ಬಾ ನೋಡುತ್ತಿದ್ದ , ಈ ವೇಳೆ ಪಟೇಲ್ ಸಮುದಾಯದ ಮುಖಂಡನೊಬ್ಬ ಜಾತಿ ನಿಂದನೆ ಮಾಡಿ ಇತರರನ್ನು ಸ್ಥಳಕ್ಕೆ ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ. ಈ ವೇಳೆ ಸೋಲಂಕಿಯ ತಲೆಯನ್ನು ಗೊಡೆಗೆ ಅಪ್ಪಳಿಸಿ ಅಟ್ಟಹಾಸ ಮೆರೆದಿದ್ದಾರೆ.
ಗಂಭೀರವಾಗಿ ಗಾಯಗೊಂಡ ಸೋಲಂಕಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಆತನ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಈ ಘಟನೆ ಉನಾದಲ್ಲಿ 2016 ರಲ್ಲಿ ನಾಲ್ವರು ದಲಿತರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ನೆನಪಿಸಿದ್ದು ವ್ಯಾಪಕ ಪ್ರತಿಭಟನೆಗಳು ನಡೆಯುವ ಸಾಧ್ಯತೆಗಳಿವೆ. ಬಿಜೆಪಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ