Viral Video: ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಚಪ್ಪಲಿ ನೆಕ್ಕಿಸಿದ ಲೈನ್ ಮ್ಯಾನ್
Team Udayavani, Jul 9, 2023, 11:51 AM IST
ಲಕ್ನೋ: ದಲಿತ ವ್ಯಕ್ತಿಯೊಬ್ಬ ವಿದ್ಯುತ್ ವೈರಿಂಗ್ ಅನ್ನು ಪರಿಶೀಲಿಸಿದ್ದಕ್ಕಾಗಿ ಆತನ ಮೇಲೆ ಹಲ್ಲೆ ನಡೆಸಿ ಗುತ್ತಿಗೆ ಲೈನ್ ಮ್ಯಾನ್ ನ ಚಪ್ಪಲಿಗಳನ್ನು ನೆಕ್ಕಿಸಿದ ಘಟನೆ ಉತ್ತರ ಪ್ರದೇಶದ ಸೋನ್ ಭದ್ರಾ ಜಿಲ್ಲೆಯಲ್ಲಿ ನಡೆದಿದೆ.
ಈ ಘಟನೆ ಗುರುವಾರ ನಡೆದಿದ್ದು, ಶನಿವಾರದಂದು ಅದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ವೀಡಿಯೋ ಒಂದರಲ್ಲಿ, 21 ವರ್ಷದ ದಲಿತ ವ್ಯಕ್ತಿಯ ಮೇಲೆ ವಿದ್ಯುತ್ ಕಾರ್ಮಿಕರು ಅಮಾನುಷವಾಗಿ ಹಲ್ಲೆ ನಡೆಸಿ ನಿಂದಿಸುತ್ತಿರುವುದನ್ನು ಕಾಣಬಹುದು ಮತ್ತು ವೀಡಿಯೊವನ್ನು ಚಿತ್ರೀಕರಿಸಿದ ವ್ಯಕ್ತಿಯನ್ನು “ವಾಟ್ಸಪ್ ಗ್ರೂಪ್ ನಲ್ಲಿ” ಹಂಚಿಕೊಳ್ಳುವಂತೆ ಕೇಳಿಕೊಳ್ಳುತ್ತಿದ್ದಾರೆ. ಎರಡನೇ ವೀಡಿಯೊದಲ್ಲಿ, ಆ ವ್ಯಕ್ತಿ ಕೆಲಸಗಾರನ ಚಪ್ಪಲಿಗಳನ್ನು ನೆಕ್ಕುತ್ತಿರುವುದನ್ನು ಮತ್ತು ಅವನ ಕಿವಿಗಳನ್ನು ಹಿಡಿದುಕೊಂಡು ಕ್ಷಮೆಯಾಚಿಸುವುದನ್ನು ಕಾಣಬಹುದು.
ಸೋನ್ ಭದ್ರಾ ಜಿಲ್ಲೆಯ ಶಹಗಂಜ್ ಪ್ರದೇಶದಲ್ಲಿ ಗುತ್ತಿಗೆ ಲೈನ್ಮ್ಯಾನ್ ಆಗಿರುವ ತೇಜ್ಬಾಲಿ ಸಿಂಗ್ ಪಟೇಲ್ ಎಂದು ಗುರುತಿಸಲಾದ ಆರೋಪಿಯ ವಿರುದ್ಧ ಪೊಲೀಸರು ಶಹಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಾಜೇಂದ್ರ ಚಮರ್ ಅವರು ಶಹಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಪ್ರಕರಣ ದಾಖಲಾಗಿದ್ದು, ಪಟೇಲ್ ನನ್ನು ಬಂಧಿಸಲಾಗಿದೆ.
Tejbali Singh, an upper caste hindu lineman in UP’s Sonbhadra, forced a Dalit to lick his slipper and squat after altercation and yes this the condition of dalit in double engine sarkar! #DalitLivesMatter #SayNoToHinduRastra pic.twitter.com/XisC6FZbVS
— Vanchit Shoshit Samaj (@BanchitSoshit) July 8, 2023
ಸುದ್ದಿಗಾರರೊಂದಿಗೆ ಮಾತನಾಡಿದ ಚಾಮರ್, ‘ನಾನು ನನ್ನ ಚಿಕ್ಕಪ್ಪನ ಮನೆಗೆ ಹೋಗಿದ್ದೆ. ವಿದ್ಯುತ್ ತಂತಿಯಲ್ಲಿ ಸ್ವಲ್ಪ ಸಮಸ್ಯೆ ಇತ್ತು ಮತ್ತು ನಾನು ಅದನ್ನು ನೋಡುತ್ತಿದ್ದೆ. ತೇಜ್ಬಲಿ ಅಲ್ಲಿಗೆ ಬಂದು ನನ್ನ ಮೇಲೆ ದೊಣ್ಣೆಗಳಿಂದ ಹಲ್ಲೆ ಮಾಡಲು ಆರಂಭಿಸಿದ. ಅವನು ನನ್ನ ಪಾದರಕ್ಷೆಗೆ ಉಗುಳಿ ನೆಕ್ಕುವಂತೆ ಮಾಡಿದನು. ಎರಡು ದಿನ ನಾನು ಏನನ್ನೂ ಹೇಳಲಿಲ್ಲ. ಆದರೆ ಈಗ ಪ್ರಕರಣ ದಾಖಲಿಸಲು ಬಂದಿದ್ದೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು