ಸುಟ್ಟು ಕರಕಲಾದ ದಲಿತ ವ್ಯಕ್ತಿಯ ಶವ ಪತ್ತೆ; ಕೊಲೆ ಶಂಕೆ
Team Udayavani, Mar 2, 2019, 12:05 PM IST
ಜೈಪುರ : 60 ವರ್ಷದ ದಲಿತ ವ್ಯಕ್ತಿಯೋರ್ವನ ಸುಟ್ಟು ಕರಕಲಾದ ದೇಹ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಗ್ರಾಮವೊಂದರಲ್ಲಿ ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮರಕ್ಕೆ ಕಟ್ಟಿ ಹಾಕಲ್ಪಟ್ಟ, ಸುಟ್ಟು ಕರಕಲಾದ ಮೃತ ದಲಿತ ವ್ಯಕ್ತಿಯನ್ನು ಗಂಗಾರಾಮ್ ಬಲಾಯ್ ಎಂದು ಗುರುತಿಸಲಾಗಿದೆ.
ಮೇಲ್ನೋಟಕ್ಕೆ ಇದು ಕೊಲೆ ಎಂದು ಕಂಡು ಬರುತ್ತದೆ. ಆದರೆ ಆತನನ್ನು ಜೀವಂತ ಸುಡಲಾಯಿತೇ ಅಥವಾ ಕೊಂದು ಅನಂತರ ಮರಕ್ಕೆ ಕಟ್ಟಿ ಸುಡಲಾಯಿತೇ ಎಂಬುದು ಗೊತ್ತಾಗಿಲ್ಲ ಎಂದು ಬಿಜೋಲಿಯಾ ಪೊಲೀಸ್ ಠಾಣೆಯ ಎಸ್ಎಚ್ಓ ಬಲದೇವ್ ರಾಮ್ ತಿಳಿಸಿದ್ದಾರೆ.
ಅವಿವಾಹಿತನಾಗಿದ್ದ ದಲಿತ ವ್ಯಕ್ತಿ, ಬಹಾದ್ದೂರ್ ಜೀ ಕಾ ಖೇಡಾ ಪ್ರದೇಶದಲ್ಲಿ ಗಾರ್ಡನರ್ ಆಗಿ ದುಡಿಯುತ್ತಿದ್ದ . ಪೊಲೀಸರು ಕೊಲೆ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ
Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್ ಟವರ್ ಹತ್ತಿದ ಯುವಕ