ದಲಿತರ ಬಾವಿಗೆ ಸೀಮೆಎಣ್ಣೆ ಸುರಿದರು!
Team Udayavani, May 1, 2017, 11:09 AM IST
ಭೋಪಾಲ್: ಜಾತಿ ಪದ್ಧತಿ ಮನುಷ್ಯರನ್ನು ಯಾವ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂಬುದಕ್ಕೆ ಮಧ್ಯಪ್ರದೇಶದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಜಾತಿ ಮೇಲಾಟಕ್ಕಾಗಿ ದಲಿತರು ಉಪಯೋಗಿಸುತ್ತಿರುವ ಬಾವಿಗೆ ದುಷ್ಕರ್ಮಿಗಳು ಸೀಮೆಎಣ್ಣೆ ಸುರಿದು, ನೀರು ಕುಡಿಯದಂತೆ ಮಾಡಿದ್ದಾರೆ.
ಈ ಘಟನೆ ಮಾಡ ಗ್ರಾಮದಲ್ಲಿ ನಡೆದಿದೆ. 500 ದಲಿತ ಕುಟುಂಬಗಳು ಇದೇ ಬಾವಿಯಿಂದ ಕುಡಿಯಲು ನೀರು ಬಳಸಿಕೊಳ್ಳುತ್ತಿದ್ದವು. ಆದರೆ ನೀರನ್ನು ಬಳಕೆ ಮಾಡಬಾರದು ಎಂಬ ದುರುದ್ದೇಶದಿಂದ ಸೀಮೆಎಣ್ಣೆ ಹಾಕಿ ವಿಷ ಬೆರೆಸಲಾಗಿದೆ. ಈ ಕುರಿತು ಮೇಲಧಿಕಾರಿಗಳಿಗೆ ದೂರು ನೀಡಲಾಗಿದ್ದು, ಅವರು ಬಂದು ಬಾವಿಯಲ್ಲಿನ ನೀರೆಲ್ಲ ಖಾಲಿ ಮಾಡಿ, ಹೊಸ ನೀರು ಬರುವಂತೆ ವ್ಯವಸ್ಥೆ ಮಾಡಿದ್ದಾರೆ.
ಇತ್ತೀಚೆಗೆ ಇಲ್ಲಿನ ದಲಿತ ಕುಟುಂಬವೊಂದು ಅದ್ದೂರಿಯಾಗಿ ಮದುವೆ ಸಮಾರಂಭವನ್ನು ಏರ್ಪಡಿಸಿತ್ತು. ವರನನ್ನು ಬೈಕ್ ಏರಿಸಿ, ಮೆರವಣಿಗೆ ಮಾಡಲಾಗಿತ್ತು. ಮೆರವಣಿಗೆ ಕೂಡ ಮುಖ್ಯರಸ್ತೆಯಲ್ಲೇ ಬಂದಿತ್ತು. ಇದರಿಂದ ಮೇಲ್ಜಾತಿಯವರು ಆಕ್ರೋಶಗೊಂಡಿದ್ದರು. ಅದಕ್ಕೆ ಪ್ರತೀಕಾರವಾಗಿ ಬಾವಿಗೆ ಸೀಮೆಎಣ್ಣೆ ಸುರಿಯಲಾಗಿದೆ ಎಂದು ದಲಿತರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್