ಆಯ್ಕೆಗನುಗುಣವಾಗಿ ಟೀಕೆ: ಮೋದಿ ಆಕ್ರೋಶ
ವಿಪಕ್ಷಗಳ ವಿರುದ್ಧ ಕಿಡಿಕಾರಿದ ಪ್ರಧಾನಿ; ದೇಶದ ಮಾನ ಕಳೆಯುತ್ತಿರುವ ಟೀಕಾಕಾರರು
Team Udayavani, Oct 13, 2021, 6:16 AM IST
ಹೊಸದಿಲ್ಲಿ: ಮಾನವ ಹಕ್ಕುಗಳ ಉಲ್ಲಂಘನೆ ವಿಚಾರದಲ್ಲಿ ದೇಶದಲ್ಲಿ ಕೆಲವರು ಅವರ ಆಯ್ಕೆಗನುಗುಣವಾಗಿ ಟೀಕೆ ಮಾಡುತ್ತಿದ್ದಾರೆ. ಕೆಲವು ಪ್ರಕರಣಗಳನ್ನು ಮಾತ್ರ ವೈಭವೀಕರಿಸಿ, ಉಳಿದ ಪ್ರಕರಣಗಳ ಬಗ್ಗೆ ತಿರುಗಿಯೂ ನೋಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಿಡಿಕಾರಿದ್ದಾರೆ.
ಉ.ಪ್ರ.ದಲ್ಲಿ ರೈತರ ಹತ್ಯೆ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಮಾತ್ರ ವಿಪಕ್ಷಗಳು ಮತ್ತು ಕೆಲವು ಸಂಘಸಂಸ್ಥೆಗಳು ಕೇಂದ್ರ ಮತ್ತು ಉತ್ತರ ಪ್ರದೇಶ ಸರಕಾರದ ವಿರುದ್ಧ ಕಿಡಿಕಾರುತ್ತಿರುವ ಮಧ್ಯೆಯೇ ಪ್ರಧಾನಿ ಮೋದಿ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಯ 28ನೇ ಸಂಸ್ಥಾಪನ ದಿನದ ಅಂಗವಾಗಿ ಮಾತನಾಡಿದ ಅವರು, ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳನ್ನು ಕೆಲವರು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇದರಿಂದ ದೇಶದ ಗರಿಮೆಗೂ ಧಕ್ಕೆ ಬರುವುದಲ್ಲದೇ, ಪ್ರಜಾಪ್ರಭುತ್ವದ ಮೇಲೂ ಘಾಸಿ ಮಾಡುತ್ತದೆ ಎಂದಿದ್ದಾರೆ.
ಇದೇ ಕಾರ್ಯಕ್ರಮದಲ್ಲಿ ಮೋದಿ ಅವರು, ಜನರ ಅಭಿವೃದ್ಧಿಗಾಗಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಉಲ್ಲೇಖ ಮಾಡಿದರು. ಬಡವರು, ಮಹಿಳೆಯರು, ದಿವ್ಯಾಂಗರಿಗೆ ಆಗುತ್ತಿದ್ದ ಅನ್ಯಾಯಗಳನ್ನು ತಪ್ಪಿಸಲಾಗಿದೆ ಎಂದ ಅವರು, ಕೆಲವು ಪ್ರಕರಣಗಳಲ್ಲಷ್ಟೇ ಸದ್ದು ಮಾಡುವವರ ವಿರುದ್ಧವೂ ಕಿಡಿಕಾರಿದರು.
ಇದನ್ನೂ ಓದಿ:ನಮ್ಮ ಕೆಲಸ ಗುರುತಿಸಿ ಜೆಡಿಎಸ್ಗೆ ಮತ ಹಾಕುತ್ತಾರೆ : ಮಾಜಿ ಪ್ರಧಾನಿ ದೇವೆಗೌಡ
ಅಂದರೆ, ಒಂದು ಪ್ರಕರಣದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸುವವರು ಇನ್ನೊಂದು ಪ್ರಕರಣ ನಡೆದಾಗ ಈ ಪ್ರಕರಣಕ್ಕೂ ತಮಗೂ ಸಂಬಂಧವೇ ಇಲ್ಲವೆಂಬ ರೀತಿಯಲ್ಲಿ ವರ್ತಿಸುತ್ತಾರೆ ಎಂದರು. ಮಾನವ ಹಕ್ಕುಗಳ ಉಲ್ಲಂಘನೆ ಎಂಬುದು ಸಣ್ಣಪುಟ್ಟ ವಿಷಯವಲ್ಲ. ಆದರೆ ಇದನ್ನು ರಾಜಕೀಯವಾಗಿ ತಮಗೆ ಲಾಭವಾಗುತ್ತದೆಯೋ ಅಥವಾ ನಷ್ಟವಾಗುತ್ತದೆಯೋ ಎಂಬ ರೀತಿಯಲ್ಲಿ ನೋಡುವುದು ಮಾತ್ರ ತಪ್ಪು ಎಂದರು.
ಕೋವಿಡ್ ಕಷ್ಟ ಕಾಲದಲ್ಲಿ ದೇಶದ 80 ಕೋಟಿ ಜನರಿಗೆ ಉಚಿತವಾಗಿ ಆಹಾರ ಧಾನ್ಯ ನೀಡಿದ್ದೇವೆ. ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್ ಮಂತ್ರದಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ದೇಶದ ಪ್ರತಿಯೊಬ್ಬರಿಗೂ ಮಾನವ ಹಕ್ಕುಗಳ ಖಾತ್ರಿ ನೀಡಿದ್ದೇವೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಸರಕಾರವು ಬಡವರು, ಹಿಂದು ಳಿದ ವರ್ಗದವರು, ಸಮಾಜದಲ್ಲಿನ ಕಟ್ಟಕಡೆ ಯವರ ಉದ್ಧಾರಕ್ಕಾಗಿ ಕೆಲಸ ಮಾಡಿ, ಮಾನವ ಹಕ್ಕುಗಳ ರಕ್ಷಣೆ ಮಾಡುತ್ತಿದೆ.
-ಅಮಿತ್ ಶಾ, ಕೇಂದ್ರ ಗೃಹ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ