ಇಸ್ರೇಲ್ ಪ್ರಧಾನಿಗೆ ರಾಷ್ಟ್ರಪತಿ ಭವನದಲ್ಲಿ ಭವ್ಯ ಸ್ವಾಗತ
Team Udayavani, Jan 15, 2018, 11:22 AM IST
ಹೊಸದಿಲ್ಲಿ : ”ಭಾರತ-ಇಸ್ರೇಲ್ ನಡುವಿನ ಸ್ನೇಹ ಮತ್ತು ಬಾಂಧವ್ಯದ ಹೊಸ ಯುಗಾರಂಭಕ್ಕೆ ಈ ಮಹೋನ್ನತ ಕ್ಷಣಗಳು ಸಾಕ್ಷಿಯಾಗಿವೆ” ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇಂದು ಸೋಮವಾರ ರಾಷ್ಟ್ರಪತಿ ಭವನದಲ್ಲಿ ರತ್ನಗಂಬಳಿಯ ಅದ್ದೂರಿ ಸ್ವಾಗತವನ್ನು ಪಡೆದ ಬಳಿಕ ಸಭಿಕರನ್ನು ಉದ್ದೇಶಿಸಿ ಹೇಳಿದರು.
“ಇದು ಆರಂಭವಾದದ್ದು ಪ್ರಧಾನಿ ನರೇಂದ್ರ ಮೋದಿ ಅವರ ಐತಿಹಾಸಿಕ ಇಸ್ರೇಲ್ ಭೇಟಿಯೊಂದಿಗೆ. ಆ ಭೇಟಿ ಅದ್ಭುತವಾದ ಹುಮ್ಮಸ್ಸು, ಹುರುಪನ್ನು ಉಭಯ ದೇಶಗಳ ಸ್ನೇಹ ಸಂಬಂಧದಲ್ಲಿ ತುಂಬಿದವು; ಈ ಕ್ಷಣಗಳು ನನಗೆ, ನನ್ನ ಪತ್ನಿಗೆ ಮತ್ತು ಇಸ್ರೇಲ್ ನ ಸಮಗ್ರ ಜನತೆಗೆ ಅತ್ಯಂತ ಸಂತಸದಾಯಕವಾಗಿವೆ’ ಎಂದು ನೆತನ್ಯಾಹು ಹೇಳಿದರು.
ನಿನ್ನೆ ಭಾನುವಾರ ಪ್ರಧಾನಿ ಮೋದಿ ಅವರು ಶಿಷ್ಟಾಚಾರಗಳನ್ನೆಲ್ಲ ಬದಿಗೊತ್ತಿ ಇಸ್ರೇಲ್ ಪ್ರಧಾನಿಯನ್ನು ದಿಲ್ಲಿ ವಿಮಾನ ನಿಲ್ದಾಣದಲ್ಲಿ ವೈಯಕ್ತಿಕವಾಗಿ ಆತ್ಮೀಯ ಅಪ್ಪುಗೆಯೊಂದಿಗೆ ಸ್ವಾಗತಿಸಿದ್ದರು.
ಈ ಆತ್ಮೀಯ ಅಪ್ಪುಗೆಯ ಸ್ವಾಗತಕ್ಕೆ ಅಚ್ಚರಿ ವ್ಯಕ್ತಪಡಿಸುತ್ತಾ ನೆತನ್ಯಾಹು ಅವರು ತಮ್ಮ ಟ್ವೀಟ್ ನಲ್ಲಿ “ವಿಮಾನ ನಿಲ್ದಾಣಕ್ಕೆ ಖುದ್ದು ಆಗಮಿಸಿದ ಅಪ್ಪುಗೆಯ ಸ್ವಾಗಡ ನೀಡಿದ ನನ್ನ ಉತ್ತಮ ಸ್ನೇಹಿತ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ; ನಾವಿಬ್ಬರೂ ಜತೆಗೂಡಿ ಉಭಯ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ಹೊಸ ಎತ್ತರಕ್ಕೆ ಒಯ್ಯೋಣ’ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
MUST WATCH
ಹೊಸ ಸೇರ್ಪಡೆ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ