ರಾಜನ್‌ ಹತ್ಯೆಗೆ ದಾವೂದ್‌ ಸಂಚು


Team Udayavani, Dec 28, 2017, 6:00 AM IST

dawood.jpg

ನವದೆಹಲಿ: ಮುಪ್ಪು ಆವರಿಸಿರುವ ಹಿನ್ನೆಲೆಯಲ್ಲಿ ಶರಣಾಗತನಾಗಿ ನವದೆಹಲಿಯ ತಿಹಾರ್‌ ಜೈಲಲ್ಲಿರುವ ಭೂಗತ ಪಾತಕಿ ಛೋಟಾ ರಾಜನ್‌ನನ್ನು ಕೊಲ್ಲಲು ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಗ್ಯಾಂಗ್‌ ಯೋಚಿಸಿತ್ತೇ? ಕೇಂದ್ರ ಗುಪ್ತಚರ ಸಂಸ್ಥೆಗಳು ಜೈಲಧಿಕಾರಿಗಳ ಜತೆ ಹಂಚಿಕೊಂಡಿರುವ ಮಾಹಿತಿಯಂತೆ ಈ ವಿಚಾರ ಹೌದು.

ಎರಡು ವಾರಗಳ ಹಿಂದೆ ಇಂಥ ಒಂದು ಸಂಚು ಬಹಿರಂಗವಾಗಿತ್ತು. ಈಗಾಗಲೇ ಜೈಲಲ್ಲಿರುವ ಪಾತಕಿ ನೀರಜ್‌ ಬವಾನಾ ಎಂಬಾತನ ಮೂಲಕವೇ ಅದನ್ನು ಕಾರ್ಯಗತಗೊಳಿಸುವ ಬಗ್ಗೆ ಯೋಜನೆ ರೂಪಿಸಲಾಗಿತ್ತು ಎಂಬ ಬಗ್ಗೆ ಮಾಹಿತಿ ದೊರೆತಿದೆ.

ಜೈಲಲ್ಲೇ ಕೊಲ್ಲಲು ಚಿಂತನೆ: ಬವಾನಾ ಎಂಬಾತ ಕೂಡ ತಿಹಾರ್‌ ಜೈಲಲ್ಲಿಯೇ ಇದ್ದಾನೆ. ಆತನ ಭೇಟಿಗಾಗಿ ಸಂದರ್ಶಕನೊಬ್ಬ ಬಂದಿದ್ದ ವೇಳೆ ಈ ಬಗ್ಗೆ ಚರ್ಚೆ ನಡೆದಿತ್ತು. ಅದನ್ನು ಕೇಂದ್ರ ಗುಪ್ತಚರ ಸಂಸ್ಥೆಗಳು ಪತ್ತೆ ಹಚ್ಚಿದ್ದವು. ಈ ಬಗ್ಗೆ ಸುಳಿವು ದೊರೆತ ಕೂಡಲೇ ತಿಹಾರ್‌ ಜೈಲಿನ ಅಧಿಕಾರಿಗಳು, ಬವಾನಾನನ್ನು ಬಿಗಿ ಭದ್ರತೆಯ ಮತ್ತೂಂದು ಸೆಲ್‌ಗೆ ವರ್ಗಾಯಿಸಿದ್ದಾರೆ. ಈ ಸಂದರ್ಭದಲ್ಲಿ ಆತನ ಬಳಿ ಮೊಬೈಲ್‌ ಫೋನ್‌ ಇದ್ದದ್ದೂ ಪತ್ತೆಯಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜೈಲಧಿ ಕಾರಿಗಳು, ಮುಂಬೈನ ಕಾರಾಗೃಹಕ್ಕಿಂತ ತಿಹಾರ್‌ ಜೈಲಲ್ಲಿ ಭದ್ರತೆ ಬಿಗಿಯಾಗಿದೆ. ಹೀಗಾಗಿ ದಾವೂದ್‌ ಸಹಚರರು ಛೋಟಾ ರಾಜನ್‌ನನ್ನು ಟಾರ್ಗೆಟ್‌ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಇನ್ನು ರಾಜನ್‌ಗೆ ವಿಶೇಷ ಗಾರ್ಡ್‌ಗಳ ಭದ್ರತೆ ನೀಡಲಾಗಿದೆ.

ಯಾರಿದು ಬವಾನಾ?: ಅಂದ ಹಾಗೆ ನೀರಜ್‌ ಬವಾನಾ ಎಂಬಾತ ನವದೆಹಲಿಯ ಕುಖ್ಯಾತ ಗ್ಯಾಂಗ್‌ ಸ್ಟರ್‌. ಅಕ್ರಮವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ 2016ರ ಸೆಪ್ಟೆಂಬರ್‌ನಲ್ಲಿ ಆತನಿಗೆ ದೆಹಲಿಯ ಸ್ಥಳೀಯ ಕೋರ್ಟೊಂದು ಏಳು ವರ್ಷಗಳ ಕಠಿಣ ಶಿಕ್ಷೆ ವಿಧಿಸಿತ್ತು. ಪಶ್ಚಿಮ ದೆಹಲಿ ನಿವಾಸಿಯಾಗಿರುವ ಆತನ ವಿರುದಟಛಿ ಕೊಲೆ, ಕೊಲೆಯತ್ನ, ಸುಲಿಗೆ ಸೇರಿದಂತೆ ಗುರುತರ ಆರೋಪಗಳು ಇವೆ. ಹಿಂದೆ ಕೂಡ ದಾವೂದ್‌ ಛೋಟಾ ರಾಜನ್‌ನನ್ನು
ಹತ್ಯೆ ಮಾಡಲು ಸಂಚು ರೂಪಿಸಿ ವಿಫ‌ಲನಾಗಿದ್ದ.

ಬೆಳಕಿಗೆ ಬಂದದ್ದು ಹೇಗೆ?
ಜೈಲಲ್ಲಿರುವ ಬವಾನಾ ಎಂಬಾತನ ಸಹಚರನೊಬ್ಬ ನವೆಂಬರ್‌ ಮಧ್ಯಭಾಗದಲ್ಲಿ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ. ಆತ ದೆಹಲಿಯಲ್ಲಿ ಕುಖ್ಯಾತ ಗ್ಯಾಂಗ್‌ ಲೀಡರ್‌ ಒಬ್ಬನ ಜತೆ ರಾಜನ್‌ನನ್ನು ಮುಗಿಸುವ ಮಾತಾಡಿದ್ದ. ಆತ ಮತ್ತೂಬ್ಬನಿಗೆ ಫೋನ್‌ ಮಾಡಿದ ಸಂದರ್ಭದಲ್ಲಿ “ದೊಡ್ಡ ಟಾಸ್ಕ್ ಒಂದು ಇದೆ’ ಎಂದು ಹೇಳಿದ್ದನ್ನು ಪತ್ತೆ ಮಾಡಿ ಬೆನ್ನು ಹತ್ತಲಾಗಿತ್ತು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.