ಭ್ರಷ್ಟಾಚಾರದಲ್ಲಿ ನನ್ನ ಕೈವಾಡ ಕಂಡು ಬಂದ ದಿನ ಗಲ್ಲಿಗೇರಿಸಿ: ಪ್ರಧಾನಿಗೆ ಕೇಜ್ರಿವಾಲ್
Team Udayavani, May 5, 2023, 10:27 PM IST
ಲೂಧಿಯಾನ: ತಮ್ಮ ವಿರುದ್ಧ ಒಂದು ಪೈಸೆ ಮೌಲ್ಯದ ಭ್ರಷ್ಟಾಚಾರದ ಪುರಾವೆಯನ್ನು ಕಂಡುಹಿಡಿಯಲು ಕೇಂದ್ರ ತನಿಖಾ ಸಂಸ್ಥೆಗಳಿಗೆ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸವಾಲು ಹಾಕಿದ್ದಾರೆ. ಪುರಾವೆ ಸಿಕ್ಕಲ್ಲಿ ನನ್ನನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಸವಾಲು ಹಾಕಿದ್ದಾರೆ.
ನನ್ನ ಹಿಂದೆ ಸಿಬಿಐ, ಇಡಿ, ಆದಾಯ ತೆರಿಗೆ ಮತ್ತು ಪೊಲೀಸರನ್ನು ಬಿಟ್ಟರು ಏಕೆ? ‘ಕೇಜ್ರಿವಾಲ್ ಚೋರ್ ಹೈ (ಕೇಜ್ರಿವಾಲ್ ಒಬ್ಬ ಕಳ್ಳ)’ ಎಂದು ಸಾಬೀತುಪಡಿಸುವುದು ಮತ್ತು ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಸಾಬೀತುಪಡಿಸುವುದು ಒಂದೇ ಒಂದು ಉದ್ದೇಶವಾಗಿದೆ, ”ಎಂದು ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಲೂಧಿಯಾನದಲ್ಲಿ ನಡೆದ 80 ‘ಆಮ್ ಆದ್ಮಿ ಕ್ಲಿನಿಕ್’ಗಳನ್ನು ಪಂಜಾಬ್ ಜನತೆಗೆ ಅರ್ಪಿಸಿದ ನಂತರ ಕೇಜ್ರಿವಾಲ್ ಮಾತನಾಡಿದರು.
ಈಗ, ಜನರಿಗೆ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ರಾಜ್ಯದಲ್ಲಿ ಒಟ್ಟು 580 ‘ಆಮ್ ಆದ್ಮಿ ಕ್ಲಿನಿಕ್’ಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.
ದೆಹಲಿಯ ಈಗ ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಎ 16 ರಂದು ಸಿಬಿಐ ಪ್ರಶ್ನಿಸಿತ್ತು. ಇದರಲ್ಲಿ ಅವರ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಈಗಾಗಲೇ ಜೈಲಿನಲ್ಲಿದ್ದಾರೆ. ಏಜೆನ್ಸಿ ಕೇಜ್ರಿವಾಲ್ ಅವರನ್ನು ಸಾಕ್ಷಿಯಾಗಿ ಸಮನ್ಸ್ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!