ಲಂಚ: ಇಬ್ಬರು ಡಿಡಿಎ ಅಧಿಕಾರಿಗಳಿಗೆ 4 ವರ್ಷ ಕಠಿನ ಜೈಲು ಶಿಕ್ಷೆ
Team Udayavani, Jun 20, 2018, 4:57 PM IST
ಹೊಸದಿಲ್ಲಿ : ವಾಯವ್ಯ ದಿಲ್ಲಿಯಲ್ಲಿ ಅಕ್ರಮವಾಗಿ ಢಾಬಾ ನಡೆಸುವುದಕ್ಕೆ ದೂರುದಾರ ವ್ಯಕ್ತಿಯಿಂದ ಪ್ರತೀ ತಿಂಗಳೂ 6,000 ರೂ. ಲಂಚ ಕೇಳಿದ ಪ್ರಕರಣದಲ್ಲಿ ಅಪರಾಧಿಗಳೆಂದು ಕಂಡು ಬಂದ ದಿಲ್ಲಿ ಅಭಿವೃದ್ದಿ ಪ್ರಾಧಿಕಾರದ ಇಬ್ಬರು ಅಧಿಕಾರಿಗಳಿಗೆ ನಗರ ನ್ಯಾಯಾಲಯ ನಾಲ್ಕು ವರ್ಷಗಳ ಕಠಿನ ಜೈಲು ಶಿಕ್ಷೆಯನ್ನು ವಿಧಿಸಿದೆ.
ವಿಶೇಷ ನ್ಯಾಯಾಧೀಶ ಆಶುತೋಷ್ ಕುಮಾರ್ ಅವರು ಡಿಡಿಎ ಅಧಿಕಾರಿಗಳಾದ ಮುಕೇಶ್ ಚಂದರ್ ಮತ್ತು ಸತ್ಯಬೀರ್ ಸಿಂಗ್ ಅವರಿಗೆ ನಾಲ್ಕು ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದರು.
ಢಾಬಾವನ್ನು ಅಕ್ರಮವಾಗಿ ನಡೆಸುತ್ತಿರುವ ಕಾರಣಕ್ಕೆ ಅದನ್ನು ಮುಚ್ಚಬೇಕೆಂಬ ನೊಟೀಸ್ ಜಾರಿಯಾದಾಗ, ಆ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳದಿರುವುದಕ್ಕೆ ತಮಗೆ ಪ್ರತೀ ತಿಂಗಳೂ 6,000 ರೂ. ಲಂಚ ನೀಡಬೇಕೆಂದು ಆರೋಪಿ ಅಧಿಕಾರಿಗಳು ತಾಕೀತು ಮಾಡಿದ್ದರು.
ದೂರುದಾರ ವ್ಯಕ್ತಿ ಮತ್ತು ಆತನ ತಂದೆ ಜತೆಗೂಡಿ ತಮ್ಮ ಮನೆ ಆವರಣದ ಹೊರಗೆ ಢಾಬಾ ನಡೆಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ