ಸರ್ಕಾರಿ ಯೋಜನೆಗಳಿಗೆ ಆಧಾರ್ ಕಡ್ಡಾಯ;ಮತ್ತೆ ಅವಧಿ ವಿಸ್ತರಣೆ
Team Udayavani, Aug 30, 2017, 12:29 PM IST
ನವದೆಹಲಿ:ಆಧಾರ್ ಗೆ ಸಂಬಂಧಪಟ್ಟ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ನವೆಂಬರ್ ಮೊದಲ ವಾರದಲ್ಲಿ ನಡೆಸುವುದಾಗಿ ಸುಪ್ರೀಂಕೋರ್ಟ್ ಬುಧವಾರ ತಿಳಿಸಿದೆ. ಸಾಮಾಜಿಕ ಹಾಗೂ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಡ್ಡಾಯ ಮಾಡುವ ಅವಧಿಯ ಗಡುವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಿರುವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.
ಸೆಪ್ಟೆಂಬರ್ 30ರ ಅಂತಿಮ ಗಡುವನ್ನು ಇನ್ನೂ 3 ತಿಂಗಳ ಕಾಲ ವಿಸ್ತರಿಸಿರುವುದಾಗಿ ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಸುಪ್ರೀಂಗೆ ಮಾಹಿತಿ ನೀಡಿದರು. ಸರ್ಕಾರದ ಸುಮಾರು 30ಕ್ಕೂ ಅಧಿಕ ಯೋಜನೆಗಳಿಗೆ ಆಧಾರ್ ಕಡ್ಡಾಯ ಎಂದು ಕೇಂದ್ರ ಸರ್ಕಾರ ಹೇಳಿತ್ತು.
ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ, ಜಸ್ಟೀಸ್ ಅಮಿತವ್ ರಾಯ್ ಹಾಗೂ ಜಸ್ಟೀಸ್ ಎಎಂ ಖಾನ್ ವಿಲ್ಕರ್ ನೇತೃತ್ವದ ಪೀಠ ಆಧಾರ್ ಗೆ ಸಂಬಂಧಪಟ್ಟ ಅರ್ಜಿಗಳ ವಿಚಾರಣೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು