ಮಕ್ಕಳ ಅತ್ಯಾಚಾರಿಗಳಿಗೆ ನೇಣಿನ ಕುಣಿಕೆ


Team Udayavani, Apr 22, 2018, 6:00 AM IST

24.jpg

ಹೊಸದಿಲ್ಲಿ: ಕಥುವಾ, ಸೂರತ್‌ನಲ್ಲಿನ ಮಕ್ಕಳ ಮೇಲಿನ ಹಾಗೂ ಉನ್ನಾವ್‌ನ ಯುವತಿ ಮೇಲಿನ ಅತ್ಯಾಚಾರ ಪ್ರಕರಣಗಳ ಬಿಸಿ ತಾರಕಕ್ಕೇರಿರುವ ಬೆನ್ನಲ್ಲೇ 12 ವರ್ಷದೊಳಗಿನ ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಠಿನ ಕಾನೂನು ಜಾರಿಗೆ ತರಲು ಕೇಂದ್ರ ಸರಕಾರ ಅಧ್ಯಾದೇಶ ಹೊರಡಿಸಿದೆ.

ಈ ಪ್ರಕರಣಗಳ ಸಂಬಂಧ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದರೂ ವಿವಿಧೆಡೆ ಇನ್ನೂ ಅತ್ಯಾಚಾರಿಗಳಿಗೆ ಮಕ್ಕಳು ಬಲಿಯಾಗುತ್ತಿರುವುದು ಮುಂದುವರಿದೇ ಇದೆ. ಹೀಗಾಗಿ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ)ಗೆ ತಿದ್ದುಪಡಿ ಮಾಡಲು ಅಧ್ಯಾದೇಶ ತರಲಾಗಿದೆ. ಐದು ದಿನಗಳ ವಿದೇಶ ಪ್ರವಾಸಕ್ಕೆಂದು ತೆರಳಿದ್ದ ಪ್ರಧಾನಿ ಮೋದಿ ಶನಿವಾರ ದಿಲ್ಲಿಗೆ ವಾಪಸ್‌ ಆದ ಒಂದೆರಡು ಗಂಟೆಗಳಲ್ಲಿ ಕೇಂದ್ರ ಸಂಪುಟ ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಅಧ್ಯಾದೇಶವನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಲಾಗಿದೆ.

ಸದ್ಯದ ಮಟ್ಟಿಗೆ ಜೀವಾವಧಿ ಅಥವಾ ನಿಗದಿತ ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಮಾತ್ರವೇ ಅತ್ಯಾಚಾರಿಗಳಿಗೆ ನೀಡಬಹುದಾಗಿರುವ ಗರಿಷ್ಠ ಶಿಕ್ಷೆಯಾಗಿರುವುದರಿಂದ ಈ ಕಾನೂನಿನಲ್ಲಿ ಗರಿಷ್ಠ ಶಿಕ್ಷೆಯನ್ನು ಮರಣ ದಂಡನೆಗೆ ಹೆಚ್ಚಿಸಲು, ಭಾರತೀಯ ದಂಡ ಸಂಹಿತೆ (ಐಪಿಸಿ), ಸಾಕ್ಷ್ಯಾಧಾರ ಕಾಯ್ದೆ, ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಹಾಗೂ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ)ಗಳಿಗೆ ತಿದ್ದುಪಡಿ ತರುವ ಪ್ರಸ್ತಾವನೆಯನ್ನು ಅಧ್ಯಾದೇಶದಲ್ಲಿ ವಿವರಿಸಲಾಗಿದೆ.

ಇಂತಿಷ್ಟೇ ದಿನದಲ್ಲಿ ಪ್ರಕರಣದ ತನಿಖೆ, ವಿಚಾರಣೆ ಮುಗಿಸಿ ಶಿಕ್ಷೆ ಪ್ರಮಾಣ ಘೋಷಿಸಬೇಕು ಎಂಬ ಅಂಶವನ್ನೂ ಸೇರಿಸಲಾಗಿದ್ದು, ನಿರೀಕ್ಷಣಾ ಜಾಮೀನು ಅವಕಾಶವನ್ನೇ ತೆಗೆದು ಹಾಕಲಾಗಿದೆ. ಅಲ್ಲದೆ, ವೇಗಗತಿಯಲ್ಲಿ ಪ್ರಕರಣದ ತನಿಖೆ ಪೂರ್ಣಗೊಳ್ಳಬೇಕು ಎಂಬ ಕಾರಣಕ್ಕಾಗಿ ದೇಶದ ಎಲ್ಲ ಪೊಲೀಸ್‌ ಠಾಣೆ ಮತ್ತು ಆಸ್ಪತ್ರೆಗಳಿಗೆ ವಿಧಿವಿಜ್ಞಾನ ಕಿಟ್‌ ನೀಡಲೂ ಒಪ್ಪಿಗೆ ಸೂಚಿಸಲಾಗಿದೆ.

ಜಾಮೀನಿಗೆ ನಿಬಂಧನೆಗಳು
16 ವರ್ಷದೊಳಗಿನವರ ಮೇಲೆ ಅತ್ಯಾಚಾರ ಅಥವಾ ಸಾಮೂಹಿಕ ಅತ್ಯಾಚಾರ ಎಸಗಿರುವವರಿಗೆ ನಿರೀಕ್ಷಣಾ ಜಾಮೀನು ಇಲ್ಲ.

ಆರೋಪಿ ಸಲ್ಲಿಸುವ ಜಾಮೀನು ಅರ್ಜಿಯನ್ನು ಇತ್ಯರ್ಥಗೊಳಿಸುವ ಮುನ್ನ ನ್ಯಾಯಾಧೀಶರು, ಸರಕಾರಿ ಅಭಿಯೋಜಕರಿಗೆ ಹಾಗೂ ಆರೋಪಿ ಪರ ವಕೀಲರಿಗೆ 15 ದಿನಗಳಲ್ಲಿ ಅಹವಾಲು ಸಲ್ಲಿಸಲು ನೋಟಿಸ್‌ ಜಾರಿ ಮಾಡಬೇಕು.

ಎಲ್ಲ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಹೈಕೋರ್ಟ್‌ ಗಳ ಜತೆ ಸಮಾಲೋಚನೆ ನಡೆಸಿ ಅತ್ಯಾಚಾರ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪನೆ.

ತ್ವರಿತ ವಿಚಾರಣೆಗಾಗಿ ನೂತನ ಸರಕಾರಿ ಅಭಿಯೋಜಕರ ನೇಮಕ ಹಾಗೂ ಸೂಕ್ತ ಮೂಲಸೌಕರ್ಯಗಳನ್ನು ಒದಗಿಸುವುದು

ಎಲ್ಲ ಪೊಲೀಸ್‌ ಠಾಣೆಗಳಿಗೆ, ಆಸ್ಪತ್ರೆಗಳಿಗೆ ವಿಶೇಷ ವಿಧಿವಿಜ್ಞಾನ ಕಿಟ್‌ ನೀಡಿಕೆ.

ತನಿಖೆಗಾಗಿ ನಿಗದಿತ ಅವಧಿಯಲ್ಲಿ ಅಗತ್ಯಕ್ಕೆ ತಕ್ಕಂತೆ ಪ್ರತ್ಯೇಕ ಸಿಬಂದಿ.

ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ವಿಧಿವಿಜ್ಞಾನ ಪ್ರಯೋಗಾಲಯ ಸ್ಥಾಪನೆ

ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆಯಲ್ಲಿ ಲೈಂಗಿಕ ಅಪರಾಧಿ ಗಳಿಗಾಗಿ ಪ್ರತ್ಯೇಕ ಡೇಟಾಬೇಸ್‌.

ನಿಗದಿತ ಕಾಲಘಟ್ಟದಲ್ಲಿ ಡೇಟಾಬೇಸ್‌ನಲ್ಲಿನ ಅಪರಾಧಿಗಳ ಮಾಹಿತಿ ರಾಜ್ಯಗಳಿಗೆ, ಕೇಂದ್ರಾಡಳಿತ ಪ್ರದೇಶಗಳಿಗೆ ರವಾನೆ.

ಸಂತ್ರಸ್ತೆಯರ ನೆರವಿಗಾಗಿ ಪ್ರಸ್ತುತ ಚಾಲ್ತಿಯಲ್ಲಿರುವ “ಒನ್‌ ಸ್ಟಾಪ್‌’ ಕೇಂದ್ರಗಳನ್ನು ಎಲ್ಲ ಜಿಲ್ಲೆಗಳಲ್ಲಿ ತೆರೆಯುವುದು.

ಯಾವುದರಲ್ಲಿ ಏನೇನು ಬದಲಾವಣೆ?
ಕ್ರಿಮಿನಲ್‌ ಕಾನೂನು
ಮಹಿಳೆಯರ ಮೇಲಿನ ಅತ್ಯಾಚಾರ
ಇನ್ನು ಮುಂದೆ ಕನಿಷ್ಠ 10 ವರ್ಷ ಜೈಲು ಶಿಕ್ಷೆ. ಇದುವರೆಗೆ ಕನಿಷ್ಠ ಏಳು ವರ್ಷವಿತ್ತು, ಇನ್ನು ಮುಂದೆ ಇದು ಜೀವಾವಧಿವರೆಗೂ ವಿಸ್ತರಿಸಬಹುದು.

16 ವರ್ಷದೊಳಗಿನ ಸಂತ್ರಸ್ತೆ
ಶಿಕ್ಷೆಯ ಪ್ರಮಾಣ ಈಗಿರುವ 10ರಿಂದ 20 ವರ್ಷ ಅಥವಾ ಜೀವಾವಧಿವರೆಗೂ ವಿಸ್ತರಣೆ.

16 ವರ್ಷದೊಳಗಿನ ಸಂತ್ರಸ್ತೆ ಮೇಲೆ ಗ್ಯಾಂಗ್‌ರೇಪ್‌
ಅತ್ಯಾಚಾರಿಗಳಿಗೆ ಜೀವಾವಧಿ ಶಿಕ್ಷೆ.

 12 ವರ್ಷದೊಳಗಿನ ಮಕ್ಕಳು
ಅತ್ಯಾಚಾರಿಗೆ 20 ವರ್ಷಗಳ ಕಾರಾಗೃಹ ಅಥವಾ ಜೀವಾವಧಿ ಅಥವಾ ಮರಣದಂಡನೆ.

 12 ವರ್ಷದೊಳಗಿನ ಬಾಲಕಿ ಮೇಲಿನ ಗ್ಯಾಂಗ್‌ರೇಪ್‌
ಜೀವಾವಧಿ ಅಥವಾ ಗಲ್ಲುಶಿಕ್ಷೆ.

 ವೇಗದ ತನಿಖೆ ಮತ್ತು ವಿಚಾರಣೆ
ಸಂಪೂರ್ಣ ತನಿಖೆಗೆ 2 ತಿಂಗಳ ಗಡುವು
ವಿಚಾರಣೆಗೆ 2 ತಿಂಗಳ ಕಾಲಾವಧಿ
ಮೇಲ್ಮನವಿಯ ಇತ್ಯರ್ಥಕ್ಕೆ ಆರು ತಿಂಗಳ ಗಡುವು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.