ದಶಕಗಳ ಕನಸು ನನಸಾಯಿತು; ಇಡೀ ದೇಶ ಕುಣಿದು ಕುಪ್ಪಳಿಸಿತು

ಕೇಂದ್ರದ ನಿರ್ಧಾರಕ್ಕೆ ದೇಶಾದ್ಯಂತ ಬಹುಪರಾಕ್‌ ; ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ ಜನತೆ

Team Udayavani, Aug 6, 2019, 5:49 AM IST

1-2-05081-PTI8_5_2019_000199A

ಕೋಲ್ಕತ್ತಾದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್‌ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಾಚರಿಸಿದರು.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಹಿಂಪಡೆಯುವ ಕೇಂದ್ರದ ನಿರ್ಧಾರಕ್ಕೆ ಕರ್ನಾಟಕ ಸೇರಿದಂತೆ ದೇಶಾದ್ಯಂತ ಸಂಭ್ರಮ ವ್ಯಕ್ತವಾಗಿದೆ. ಹಲವಾರು ರಾಜ್ಯಗಳಲ್ಲಿ ಜನಸಾಮಾನ್ಯರು, ಬೀದಿಗೆ ಇಳಿದು, ಪಟಾಕಿ ಸಿಡಿಸಿ, ಎಲ್ಲರಿಗೂ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು.

ಜಮ್ಮುವಿನಲ್ಲೇ ಸಂಭ್ರಮ: ಸೋಮವಾರ ಬೆಳಗ್ಗೆ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ಈ ವಿಚಾರವನ್ನು ಪ್ರಸ್ತಾಪಿಸಿದ ಕೂಡಲೇ ಜಮ್ಮುವಿನಲ್ಲಿ ಜನರು, ಭಾನುವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿರುವ ನಿಷೇಧಾಜ್ಞೆಯನ್ನೂ ಲೆಕ್ಕಿಸದೆ ಬೀದಿಗೆ ಬಂದು ಹರ್ಷೋದ್ಗಾರಗಳೊಂದಿಗೆ ಕುಣಿದು ಕುಪ್ಪಳಿಸಿದರು.

ಹಲವಾರು ಕಡೆ ಸಂಭ್ರಮದಲ್ಲಿ ಮುಳುಗಿದ ಜನತೆ ಪರಸ್ಪರ ಸಿಹಿ ಹಂಚಿ, ಅಭಿನಂದಿಸಿ ಖುಷಿ ಪಟ್ಟರು. ಅವರ ಕಂಗಳಲ್ಲಿ ದಶಕಗಳ ಕನಸೊಂದು ನನಸಾದ ಭಾವ ಮಡುಗಟ್ಟಿತ್ತು.

ಬಿಜೆಪಿ ಕಾರ್ಯಕರ್ತರ ಖುಷಿ: ಹಿಮಾಚಲ ಪ್ರದೇಶದ ಸಚಿವರಾದ ಸುರೇಶ್‌ ಭರದ್ವಾಜ್‌ ಹಾಗೂ ಶಿಮ್ಲಾದ ಮೇಯರ್‌ ಕುಸುಮ್‌ ಸಂದ್ರೇಟ್‌ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಶಿಮ್ಲಾದ ನಾಝ್ ಚೌಕ್‌ನಲ್ಲಿ ಜಮಾವಣೆಗೊಂಡು ಡೋಲು ಬಾರಿಸುತ್ತಾ, ನೃತ್ಯ ಗಾಯನಗಳ ಮೂಲಕ ಸಂಭ್ರಮಿಸಿದರು.

ಭೋಪಾಲ್‌ನಲ್ಲಿ ಹರ್ಷ: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಸಹ ಜನರು ಸಂಭ್ರಮಾಚರಣೆಯಲ್ಲಿ ತೊಡಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೇನಾ ತಜ್ಞರಾದ ಕೈಲಾಶ್‌ ತ್ಯಾಗಿ, ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ವರ್ಷಗಳ ಹಿಂದೆಯೇ ರದ್ದು ಮಾಡಬೇಕಿತ್ತು. ಆಗ ಆಗದ ಕೆಲಸವನ್ನು ಕೇಂದ್ರ ಇಂದು ಮಾಡಿದೆ. ರಾಜಕೀಯ ಇಚ್ಛಾಶಕ್ತಿಯಿಂದಲೇ ಇದು ಸಾಧ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಅರುಣಾಚಲದಲ್ಲಿ ಸ್ವಾಗತ: ಈಶಾನ್ಯ ರಾಜ್ಯವಾದ ಅರುಣಾಚಲ ಪ್ರದೇಶದ ಜನತೆ, ಕೇಂದ್ರ ಸರ್ಕಾರದ ನಡೆಯನ್ನು ಸ್ವಾಗತಿಸಿದ್ದಾರೆ. ಅಲ್ಲಿ ನಾನಾ ಮಾಧ್ಯಮಗಳು ಸಂಗ್ರಹಿಸಿದ ಜನಾಭಿಪ್ರಾಯಗಳಲ್ಲಿ ಹಿರಿಯ ನಾಗರಿಕರು, ಯುವ ಜನತೆ, ವಿದ್ಯಾರ್ಥಿಗಳು, ರಾಜಕೀಯ ನಾಯಕರು ಹಾಗೂ ನಾನಾ ಕ್ಷೇತ್ರಗಳ ಗಣ್ಯರು ಕೇಂದ್ರದ ನಿಲುವನ್ನು ಸ್ವಾಗತಿಸಿದ್ದು, ಕಣಿವೆ ರಾಜ್ಯದ ಅಭಿವೃದ್ಧಿಗೆ ಹೊಸ ನಿರ್ಧಾರ ಪೂರಕವಾಗಿರಲಿದೆ ಎಂದು ಆಶಿಸಿದ್ದಾರೆ.

ಪಂಜಾಬ್‌ನಲ್ಲಿ ಸಂಭ್ರಮಕ್ಕೆ ಬ್ರೇಕ್‌
ಪಂಜಾಬ್‌ನಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ನೀಡ ದಂತೆ ಅಲ್ಲಿನ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಆದೇಶಿಸಿದ್ದಾರೆ. ಕೇಂದ್ರದ ನಿರ್ಧಾರದ ಹಿನ್ನೆಲೆಯಲ್ಲಿ ಪಾಕಿಸ್ತಾನದಿಂದ ಯಾವುದೇ ಕ್ಷಣದಲ್ಲಿ ವಿಧ್ವಂಸಕ ಕೃತ್ಯಗಳು ನಡೆಯಬಹುದು. ಹಾಗಾಗಿ, ರಾಜ್ಯದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ನೀಡಕೂಡ ದೆಂದು ಅಲ್ಲಿನ ಪೊಲೀಸ್‌ ಇಲಾಖೆಗೆ ಅವರು ಸೂಚಿಸಿದ್ದಾರೆ.

70 ವರ್ಷಗಳ ನಂತರ ಸುದಿನ: ಕಾಶ್ಮೀರಿ ಪಂಡಿತರ ಸ್ವಾಗತ
“70 ವರ್ಷಗಳ ನಂತರ ಈ ಸುದಿನ ಬಂದಿದೆ. ಕಣಿವೆ ರಾಜ್ಯದಲ್ಲಿ ನಾವು ವರ್ಷಗಳಿಂದ ಅನುಭವಿಸಿದ ಹಿಂಸೆ, ಸೇವೆಗಳು ಹಾಗೂ ಸೌಲಭ್ಯಗಳಿಗೆ ನಿರ್ಬಂಧ, ಶಿಕ್ಷಣ, ಉದ್ಯೋಗ, ವ್ಯಾಪಾರಗಳಿಗೆ ನಿರ್ಬಂಧ, ಅಸುರಕ್ಷೆಯ ಭಾವ, ತ್ರಿಶಂಕು ಸ್ಥಿತಿಗಳಿಗೆ ಈಗ ಅಂತ್ಯ ಸಿಕ್ಕಿದೆ’.

– ಇದು ಕಾಶ್ಮೀರದಲ್ಲಿ ತಮ್ಮ ಮೇಲಾಗುತ್ತಿದ್ದ ಹಿಂಸೆಯನ್ನು ತಾಳಲಾರದೆ ದಶಕಗಳ ಹಿಂದೆಯೇ ಅಲ್ಲಿಂದ ಪಲಾಯನ ಮಾಡಿ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಪ್ರತಿಕ್ರಿಯೆ. 1990ರಲ್ಲಿ ಉಗ್ರರ ಉಪಟಳ ತಾಳಲಾರದೇ ಕಣಿವೆಯಿಂದ ಪಲಾಯನ ಮಾಡಿದೆವು. ಕಾಶ್ಮೀರದಲ್ಲಿ ಯಾವ ಕಳ್ಳರು ಇತರರ ಬದುಕುವ ಹಕ್ಕುಗಳನ್ನು ಕಸಿದುಕೊಂಡರೋ, ಅವರೇ ಇಂದು ತಮ್ಮ ಹಕ್ಕುಗಳಿಗಾಗಿ ಕೂಗಾಡುತ್ತಿದ್ದಾರೆ. ದಶಕಗಳ ಹಿಂದೆ ಅವರು ಇತರರಿಗೆ ಮಾಡಿದ್ದು ಈಗ ಅವರಿಗೇ ತಿರುಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.