ಆಂಧ್ರ ವಿಧಾನ ಪರಿಷತ್‌ ಅಮಾನತಿಗೆ ನಿರ್ಧಾರ

ಜಗನ್‌ ನೇತೃತ್ವದ ವೈಎಸ್‌ಆರ್‌ ಕಾಂಗ್ರೆಸ್‌ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

Team Udayavani, Jan 28, 2020, 6:30 AM IST

jagan

ಅಮರಾವತಿ (ಆಂಧ್ರಪ್ರದೇಶ): ಆಂಧ್ರ ಪ್ರದೇಶದಲ್ಲಿ ವಿಧಾನ ಪರಿಷತ್ತನ್ನೇ ರದ್ದು ಪಡಿಸುವ ಮಹತ್ವದ ಮಸೂದೆಯನ್ನು ಇಲ್ಲಿನ ವಿಧಾನಸಭೆ ಸೋಮವಾರ ಅಂಗೀಕರಿಸಿದೆ.

ಇದರೊಂದಿಗೆ ವಿಧಾನ ಪರಿಷತ್‌ ಕೇವಲ 5 ರಾಜ್ಯಗಳಲ್ಲಿ ಮಾತ್ರ ಉಳಿದುಕೊಂಡಂತಾಗಿದೆ.

ವಿಧಾನ ಪರಿಷತ್‌ ಏಕೆ ಬೇಕು?
ಕಳೆದ ತಿಂಗಳು ಆಂಧ್ರ ಮೇಲ್ಮನೆ ಕಲಾಪದಲ್ಲಿ ಮುಖ್ಯ ಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಇಂಥದ್ದೊಂದು ಬೆದರಿಕೆಪೂರ್ಣ ಪ್ರಶ್ನೆ ಕೇಳಿದ್ದರು. ಅದುವೇ ಆ ಮನೆಯ ಕೊನೆಯ ಕಲಾಪವಾಗಿ ಬಿಟ್ಟಿದೆ. ಸೋಮವಾರ ವಿಧಾನಪರಿಷತ್‌ ರದ್ದು ಪಡಿಸುವ ನಿರ್ಧಾರವನ್ನು ಸಂಪುಟ ಅಂಗೀಕರಿಸಿ ದರೆ, ಸಂಜೆ ವಿಧಾನಸಭೆಯಲ್ಲಿ 133-0 ಮತ ಗಳಲ್ಲಿ ಮಸೂದೆಯನ್ನು ಅಂಗೀಕರಿಸಿತು.

ಕಾರಣ ಏನು?
ಆಂಧ್ರದಲ್ಲಿ ರಾಜಧಾನಿಗಳ ವಿಕೇಂದ್ರೀಕರಣ ಸಹಿತ 3 ಪ್ರಮುಖ ಮಸೂದೆಗಳು ಕಳೆದ ಕಲಾಪದಲ್ಲಿ ವಿಧಾನ ಪರಿಷತ್‌ನಲ್ಲಿ ತಿರಸ್ಕೃತ ಗೊಂಡಿದ್ದವು. ರಾಜ್ಯದಲ್ಲಿ ಮೂರು ರಾಜಧಾನಿಗಳನ್ನು ರೂಪಿಸಲು ಜಿದ್ದಿಗೆ ಬಿದ್ದಿರುವ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರ ಪಕ್ಷ ವೈಎಸ್‌ಆರ್‌ ಕಾಂಗ್ರೆಸ್‌ನ ಸದಸ್ಯ ಬಲ ಕೇವಲ 9 ಇದ್ದಿದ್ದರಿಂದ ಮಸೂದೆ ಪಾಸಾಗಲಿಲ್ಲ. ಎದುರಾಳಿ ತೆಲುಗು ದೇಶಂ ಪಕ್ಷದ ಸದಸ್ಯರ ಸಂಖ್ಯೆ 28. ಇದರಿಂದ ಕೆರಳಿದ ಮುಖ್ಯಮಂತ್ರಿ ಇಡೀ ಮೇಲ್ಮನೆಯನ್ನೇ ರದ್ದುಪಡಿಸಲು ಮುಂದಾದರು. ವರ್ಷಕ್ಕೆ ಮೇಲ್ಮನೆ ನಿರ್ವಹಣೆಗೆ 60 ಕೋಟಿ ರೂ. ನಷ್ಟ ಎನ್ನುವುದು ಅವರ ವಾದ.

ಹಿಂದೊಮ್ಮೆ ಇಲ್ಲಿ ರದ್ದಾಗಿತ್ತು
ವಿಶೇಷವೆಂದರೆ 1985ರಲ್ಲಿ ಟಿಡಿಪಿ ಸಿಎಂ ಎನ್‌.ಟಿ. ರಾಮರಾವ್‌ ಮೇಲ್ಮನೆಯನ್ನು ರದ್ದು ಪಡಿಸಿದ್ದರು. ವೈ.ಎಸ್‌. ರಾಜಶೇಖರ ರೆಡ್ಡಿ 2007ರಲ್ಲಿ ಮೇಲ್ಮನೆಗೆ ಮತ್ತೆ ಜೀವ ನೀಡಿದ್ದರು.

ವಿಧಾನಪರಿಷತ್‌ ಅಧಿಕಾರವೇನು?
ಭಾರತದ ಸಂಸತ್‌ ವ್ಯವಸ್ಥೆಯಲ್ಲಿ ಮೇಲ್ಮನೆ, ಕೆಳಮನೆ ಎಂಬ ಎರಡು ಸದನಗಳಿವೆ. ಕೆಳಮನೆ ನೇರವಾಗಿ ಜನರಿಂದ ಆಯ್ಕೆಯಾದ ಸದಸ್ಯರಿರುವ ಸದನ. ಮೇಲ್ಮನೆ ಶಾಸಕರಿಂದ, ವಿವಿಧ ಕ್ಷೇತ್ರಗಳಿಂದ ಆಯ್ಕೆಯಾದ ಶಾಸಕರಿರುವ ಸದನ. ಸಂಸತ್ತಿನಲ್ಲಿರುವ ರಾಜ್ಯಸಭೆಗೆ ಹೆಚ್ಚಿನ ಅಧಿಕಾರವಿದೆ. ಅಂತಹ ಅಧಿಕಾರ ರಾಜ್ಯಗಳಲ್ಲಿರುವ ವಿಧಾನ ಪರಿಷತ್‌ಗಿಲ್ಲ. ವಿಧಾನ ಪರಿಷತ್‌ನ ಸಲಹೆ, ನಿರ್ಧಾರಗಳನ್ನು ತಿರಸ್ಕರಿಸುವ ಅಧಿಕಾರ ವಿಧಾನಸಭೆಗಿದೆ. ಅಲ್ಲದೆ ಪರಿಷತ್‌ ಸದಸ್ಯರಿಗೆ, ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಹಾಕುವ ಅಧಿಕಾರವಿಲ್ಲ. ಹಾಗೆಯೇ ಸಾಂವಿಧಾನಿಕವಾಗಿ ಪರಿಷತ್‌ ಮಹತ್ವದ ಸ್ಥಾನ ಹೊಂದಿಲ್ಲ.

ಪರಿಷತ್‌ ಇರುವ ರಾಜ್ಯಗಳು
ಬಿಹಾರ (58 ಸ್ಥಾನಗಳು)
ಕರ್ನಾಟಕ (75)
ಮಹಾರಾಷ್ಟ್ರ (78)
ತೆಲಂಗಾಣ (40)
ಉತ್ತರಪ್ರದೇಶ (100)

2010ರಲ್ಲಿ ತಮಿಳುನಾಡಿನಲ್ಲಿ ವಿಧಾನ ಪರಿಷತ್‌ ರದ್ದಾಯಿತು. ಜಮ್ಮು- ಕಾಶ್ಮೀರದಲ್ಲೂ ಪರಿಷತ್‌ ಇತ್ತು. ಆದರೆ ಆ ರಾಜ್ಯವನ್ನು 2 ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿರುವುದರಿಂದ ಅಲ್ಲೂ ಪರಿಷತ್‌ ರದ್ದಾಗಿದೆ. ರಾಜಸ್ಥಾನ, ಅಸ್ಸಾಂ ನಲ್ಲಿ ಮೇಲ್ಮನೆ ಸ್ಥಾಪಿಸುವ ಪ್ರಸ್ತಾವ ಇದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.