ಜಮ್ಮು-ಕಾಶ್ಮೀರ: ಸ್ಮಶಾನ ತಲುಪಿದಾಗ ಬದುಕಿ ಬಂದ ಶಿಶು!
Team Udayavani, May 24, 2022, 10:26 PM IST
ಸಾಂದರ್ಭಿಕ ಚಿತ್ರ.
ಶ್ರೀನಗರ: ಬದುಕಿಲ್ಲ ಎಂದು ಆಸ್ಪತ್ರೆಯವರು ಹೇಳಿದ್ದನ್ನು ಕೇಳಿ ದಫನ ಮಾಡಲು ಸ್ಮಶಾನಕ್ಕೆ ಕರೆದೊಯ್ಯಲಾಗಿದ್ದ ಶಿಶುವೊಂದು ಬದುಕಿಬಂದಿರುವ ಘಟನೆ ಜಮ್ಮು-ಕಾಶ್ಮೀರದ ರಾಂಬನ್ನ ಬನಿಹಾಲ್ನಲ್ಲಿ ನಡೆದಿದೆ.
ಬಶರತ್ ಅಹ್ಮದ್ ಅವರ ಪತ್ನಿ ಸೋಮವಾರ ಬನಿಹಾಲ್ನ ಆಸ್ಪತ್ರೆಯಲ್ಲಿ ನವಜಾತ ಶಿಶುವಿಗೆ ಜನ್ಮ ನೀಡಿದ್ದಾರೆ. ಆದರೆ ಶಿಶು ಹುಟ್ಟುವಾಗಲೇ ಸಾವನ್ನಪ್ಪಿದ್ದಾಗಿ ಆಸ್ಪತ್ರೆಯ ಸಿಬ್ಬಂದಿ ತಿಳಿಸಿದ್ದಾರೆ.
ಅಂತ್ಯಸಂಸ್ಕಾರಕ್ಕೆಂದು ಶಿಶುವನ್ನು ಸ್ಮಶಾನಕ್ಕೆ ಹೊತ್ತೂಯ್ದಾಗ ಶಿಶು ಉಸಿರಾಡುತ್ತಿರುವುದು ಕಂಡುಬಂದಿದೆ. ತಕ್ಷಣ ವಾಪಸು ಆಸ್ಪತ್ರೆಗೆ ಕರೆತರಲಾಗಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಅಲ್ಲಿಂದ ಶ್ರೀನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬದುಕಿರುವ ಮಗುವನ್ನು ಸತ್ತಿದೆಯೆಂದು ಹೇಳಿದ ಆಸ್ಪತ್ರೆಯ ವಿರುದ್ಧ ಸಂಬಂಧಿಕರು ಹೋರಾಟ ನಡೆಸಿದ್ದಾರೆ. ಇಬ್ಬರು ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್ ಸಲಹೆ
Russia-Ukraine War: ಉಕ್ರೇನ್ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ
Mann Ki Baat: ತೆಲುಗಿನ ಜನರ ಮನ್ ಕಿ ಬಾತ್ ಆಲಿಸಿ… ಮೋದಿಗೆ ಶರ್ಮಿಳಾ
Panaji: ಮಕ್ಕಳಿಗಾಗಿ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ