ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!


Team Udayavani, Jun 7, 2023, 12:06 PM IST

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!

ಪಶ್ಚಿಮ ಬಂಗಾಳ: ಸರ್ಕಾರದಿಂದ ಬರುವ ವೃದ್ಧಾಪ್ಯ ವೇತನ ಸೌಲಭ್ಯ ಎಷ್ಟೋ ಬಡ ಕುಟುಂಬಗಳಿಗೆ ಆಸರೆ ಆಗುತ್ತದೆ. ಆದರೆ ಇಲ್ಲೊಂದು ವ್ಯಕ್ತಿಗೆ ಕಳೆದ 10 ವರ್ಷದಿಂದ ಬರುತ್ತಿದ್ದ ವೃದ್ಧಾಪ್ಯ ವೇತನ ಸೌಲಭ್ಯ ಅಧಿಕಾರಿಗಳ ಎಡವಟ್ಟಿನಿಂದಾಗಿ ನಿಂತಿದೆ.

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ 79 ವರ್ಷದ ವಿಜಯ್ ಹಾಥಿ ಅವರ ಬದುಕು ಬಡತನದ ದಿನದಲ್ಲೇ ಕಳೆಯುತ್ತಿದೆ. ತನ್ನ ಪತ್ನಿ ಹಾಗೂ ಅನಾರೋಗ್ಯಕ್ಕೆ ತುತ್ತಾಗಿ ಹಾಸಿಗೆಯಲ್ಲಿ ಮಲಗಿಯೇ ಇರುವ ಮಗನೊಂದಿಗೆ ಬದುಕು ಸಾಗಿಸಲು ವಿಜಯ್‌ ಅವರು ಪಡುವ ಕಷ್ಟ ಯಾರಿಗೂ ಬೇಡದಂತಿದೆ. ಹೇಗಾದರೂ ಮಾಡಿ ಮಗನ ಚಿಕಿತ್ಸೆಗೆ ಹಾಗೂ ಮನೆಯ ಖರ್ಚಿಗೆ ಚೂರಾದರೂ ಸಹಾಯವಾಗುತ್ತಿದ್ದ ಸರ್ಕಾರದ ವೃದ್ಧಾಪ್ಯ ವೇತನ ಸೌಲಭ್ಯ ಕಳೆದ ಎರಡು ವರ್ಷಗಳಿಂದ ನಿಂತಿದೆ.

10 ವರ್ಷಗಳಿಂದ ತಿಂಗಳಿಗೆ 1000 ಸಾವಿರದಂತೆ ಬರುತ್ತಿದ್ದ ವೃದ್ಧಾಪ್ಯ ವೇತನ ಸೌಲಭ್ಯ ಕಳೆದ ಎರಡು ವರ್ಷಗಳ ಹಿಂದೆ ನಿಂತಿದೆ. ಆತಂಕಕ್ಕೆ ಒಳಗಾದ ವಿಜಯ್‌ ಅವರು ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಬಳಿ ಕೇಳಿದಾಗ “ನೀವು ಮೃತ ಪಟ್ಟಿದ್ದೀರಿ ಎಂದು ಸರ್ಕಾರದ ದಾಖಲೆಗಳಲ್ಲಿ ಬರೆಯಲಾಗಿದೆ ನಿಮಗೆ ಇನ್ಮುಂದೆ ಸೌಲಭ್ಯ ಸಿಗುವುದಿಲ್ಲ” ಎಂದು ಹೇಳಿದ್ದಾರೆ.!

ಇದನ್ನೂ ಓದಿ: Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

ಅಂದಿನಿಂದ ಮನೆಯಲ್ಲಿ ನಿತ್ಯ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಗ್ರಾ.ಪಂ.ಸದಸ್ಯ ಚಿತ್ತರಂಜನ್ ಹಾಲ್ದರ್ ಈ ಬಗ್ಗೆ ಅಧಿಕಾರಿಗಳು “ದಾಖಲೆಗಳಲ್ಲಿ ತಪ್ಪು ಮಾಹಿತಿ ಹಾಕಿದ್ದರಿಂದ ಅವರ ಪಿಂಚಣಿ ನಿಂತಿದೆ” ಎಂದರು.

ತಮ್ಮ ತಪ್ಪೆಂದು ಒಪ್ಪಿಕೊಂಡ ಬಳಿಕ ಚಿತ್ತರಂಜನ್ ಹಲ್ದರ್, ಇನ್ನೊಬ್ಬ ಪಂಚಾಯತ್ ಕಾರ್ಯಕರ್ತನ ಹೆಸರನ್ನು ಹೇಳಿದ್ದಾರೆ.

ಮತ್ತೊಂದೆಡೆ ಧೋಲಾ ಪಂಚಾಯತ್ ಮುಖ್ಯಸ್ಥೆ ರೂಬಿಯಾ ಬೀಬಿ ಕಯಾಲ್ ಅವರ ಪತಿ, ಸ್ಥಳೀಯ ತೃಣಮೂಲ ನಾಯಕ ಹೊಸೈನ್ ಕಯಾಲ್ ವೃದ್ಧಾಪ್ಯ ವೇತನ ಸೌಲಭ್ಯ ನಿಲ್ಲಿಸಲು ನಿಲ್ಲಿಸಲು ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿಗಳು ಕಾರಣವೆಂದು ಆರೋಪಿಸಿದ್ದಾರೆ.

ಸೌಲಭ್ಯವನ್ನು ಮತ್ತೆ ಮರು ಪ್ರಾರಂಭಿಸುವ ಪ್ರಕ್ರಿಯೆ ಆರಂಭವಾಗಿದೆ. ಪಂಚಾಯಿತಿ ಕಚೇರಿಗೆ ಈ ಸಂಬಂಧ ದಾಖಲೆಗಳನ್ನು ಕಳುಹಿಸಲಾಗಿದೆ ಎಂದು ಕುಲ್ಪಿ ಬಿಡಿಒ ಸೌರಭ್ ಗುಪ್ತಾ ಹೇಳಿದ್ದಾರೆ.

ಟಾಪ್ ನ್ಯೂಸ್

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

1-csasad

Google 25 ವರ್ಷಗಳ ಸಂಭ್ರಮ: ಬಾಡಿಗೆ ಗ್ಯಾರೇಜ್‌ ನಲ್ಲಿ ಹುಟ್ಟಿಕೊಂಡಿದ್ದ ಸಂಸ್ಥೆ!

aap goa

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್‌

1-csadasd

Cauvery Water; ಕಾಂಗ್ರೆಸ್‌ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

vatal

September 29 ರಂದು ಕರ್ನಾಟಕ ಬಂದ್‌ ; ನೂರಾರು ಸಂಘಟನೆಗಳ ಬೆಂಬಲ

Goa; ಈ ಕಾರಣಕ್ಕೆ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

Goa; ಈ ಕಾರಣಕ್ಕಾಗಿ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

1-sasad-s

Muslim ಮಹಿಳೆಯರ ಪರವಾಗಿ ಏಕೆ ನಿಲ್ಲಲಿಲ್ಲ?: ವಿಪಕ್ಷಗಳ ವಿರುದ್ಧ ಪ್ರಧಾನಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aap goa

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್‌

Goa; ಈ ಕಾರಣಕ್ಕೆ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

Goa; ಈ ಕಾರಣಕ್ಕಾಗಿ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ: ತಾನಾವಡೆ

1-sasad-s

Muslim ಮಹಿಳೆಯರ ಪರವಾಗಿ ಏಕೆ ನಿಲ್ಲಲಿಲ್ಲ?: ವಿಪಕ್ಷಗಳ ವಿರುದ್ಧ ಪ್ರಧಾನಿ ಕಿಡಿ

1-fs-sad

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

1-saadsad

India-Canada ಸಂಬಂಧ ಹದಗೆಡಿಸಲು ನಿಜ್ಜರ್‌ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

Bagalkote ಅ. 28ರಂದು ಉತ್ತರ ಕರ್ನಾಟಕದ ಕಿಚಡಿ ಜಾತ್ರೆ

1-csasad

Google 25 ವರ್ಷಗಳ ಸಂಭ್ರಮ: ಬಾಡಿಗೆ ಗ್ಯಾರೇಜ್‌ ನಲ್ಲಿ ಹುಟ್ಟಿಕೊಂಡಿದ್ದ ಸಂಸ್ಥೆ!

aap goa

AAP: ಲೋಕಸಭೆ ಚುನಾವಣೆ – ಗೋವಾದಲ್ಲಿ ನೂತನ ಕಾರ್ಯಕಾರಿ ಸಮಿತಿ ಪ್ರಕಟಿಸಿದ ಆಪ್‌

1-csadasd

Cauvery Water; ಕಾಂಗ್ರೆಸ್‌ ಸರ್ಕಾರ ಅಸಮರ್ಥ: ಬಿಜೆಪಿ- ಜೆಡಿಎಸ್ ಜಂಟಿ ಪ್ರತಿಭಟನೆ

vatal

September 29 ರಂದು ಕರ್ನಾಟಕ ಬಂದ್‌ ; ನೂರಾರು ಸಂಘಟನೆಗಳ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.