ಗೋವಾದಲ್ಲಿ ಕೋವಿಡ್ ಇಳಿಕೆ : ಕರ್ಫ್ಯೂ ಸಡಿಲಿಕೆ ಸಾಧ್ಯತೆ
Team Udayavani, Jun 5, 2021, 5:29 PM IST
ಪಣಜಿ: ಗೋವಾದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮತ್ತು ಕೋವಿಡ್ ನಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಫ್ರ್ಯೂ ಸಡಿಲಿಕೆ ಮಾಡುವ ಸೂಚನೆ ಲಭ್ಯವಾಗುತ್ತಿದೆ. ಸರ್ಕಾರವು ಎಲ್ಲ ಸರ್ಕಾರಿ ನೌಕರರು ಖಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ ಈಗಾಗಲೇ ಸೂಚನೆ ನೀಡಿದೆ. ಇಷ್ಟೇ ಅಲ್ಲದೆಯೇ ಶಿಕ್ಷಣ ಇಲಾಖೆಯು ಕೂಡ ಎಲ್ಲ ಶೈಕ್ಷಣಿಕ ಕರ್ಮಚಾರಿಗಳು ಸೋಮವಾರದಿಂದ ಖಡ್ಡಾಯವಾಗಿ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.
ಜೂನ್ 7 ರಂದು ರಾಜ್ಯದಲ್ಲಿ ಜಾರಿಯಲ್ಲಿರುವ ಕಫ್ರ್ಯೂ ಕಾಲಾವಧಿ ಮುಕ್ತಾಯಗೊಳ್ಳಲಿದೆ. ರಾಜ್ಯ ಸರ್ಕಾರವು ಸದ್ಯ ಕೈಗೊಳ್ಳುತ್ತಿರುವ ನಿರ್ಣಯವನ್ನು ಗಮನಿಸಿದರೆ ರಾಜ್ಯದಲ್ಲಿ ಕಫ್ರ್ಯೂ ಸಡಿಲಿಕೆ ಮಾಡುವ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ.
ರಾಜ್ಯದಲ್ಲಿ ಮುನ್ಸಿಪಲ್ ಮಾರುಕಟ್ಟೆ ಹೊರತುಪಡಿಸಿ ಪ್ರತ್ಯೇಕವಾಗಿರುವ ಅಂಗಡಿಗಳನ್ನು ತೆರೆಯಲು ಜೂನ್ 8 ರಿಂದ ಅವಕಾಶ ನೀಡುವ ಸಾಧ್ಯತೆಯಿದೆ. ಹೋಟೆಲ್ಗಳಲ್ಲಿ ಶೇ 50 ರಷ್ಟು ಜನರಿಗೆ ಅವಕಾಶ ನೀಡುವ ಸಾಧ್ಯತೆಯಿದೆ, ನಿಗಧಿತ ಸಂಖ್ಯೆಯಲ್ಲಿ ಜನರು ಸೇರಿ ಸರಳ ವಿವಾಹ ನಡೆಸಲು ಪರವಾನಗಿ ಸಾಧ್ಯತೆಯಿದೆ ಎಂದೇ ಹೇಳಲಾಗುತ್ತಿದೆ.
ಈಗಾಗಲೇ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಕಫ್ರ್ಯೂ ಸಡಿಲಿಕೆ ಅಥವಾ ಮುಂದುವರೆಸುವ ನಿಟ್ಟಿನಲ್ಲಿ ಟಾಸ್ಕ ಪೋರ್ಸ ಸಮೀತಿಯೊಂದಿಗೆ ಬೈಠಕ್ ನಡೆಸಿ ಚರ್ಚಿಸಿದ್ದಾರೆ. ಗೋವಾದಲ್ಲಿ ಕರೋನಾ ಪೋಜಿಟಿವಿಟಿ ದರ ಈ ಹಿಂದೆ ಶೇ 52 ಕ್ಕೆ ತಲುಪಿತ್ತು ಅದು ಈಗ ಶೇ 14.10 ಕ್ಕೆ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ