ರಸ್ತೆ ಅಪಘಾತ, ಸಾವಿನಲ್ಲಿ ಇಳಿಕೆ: ಸಂಸತ್ತಿಗೆ ಕೇಂದ್ರ ಹೆದ್ದಾರಿ ಸಚಿವಾಲಯ ಉತ್ತರ
Team Udayavani, Jul 30, 2022, 8:48 PM IST
ನವದೆಹಲಿ: ದೇಶದಲ್ಲಿ 2018ರಿಂದ 2020ರ ಅವಧಿಯಲ್ಲಿ ರಸ್ತೆ ಅಪಘಾತಗಳು ಮತ್ತು ಅದರಿಂದಾಗುವ ಸಾವಿನ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದ ಇಳಿಕೆ ಕಂಡುಬಂದಿದೆ.
2018ರಲ್ಲಿ 4.67 ಲಕ್ಷ ಅಪಘಾತವಾಗಿ, 1.51 ಲಕ್ಷ ಜನರು ಸಾವನ್ನಪ್ಪಿದ್ದರೆ, 2020ರಲ್ಲಿ 3.66 ಲಕ್ಷ ಅಪಘಾತಗಳು ಸಂಭವಿಸಿದ್ದು, 1.31 ಲಕ್ಷ ಜನರು ಸಾವನ್ನಪ್ಪಿದ್ದಾರೆ.
ಈ ಅಂಶಗಳನ್ನೊಳಗೊಂಡ ವರದಿಯನ್ನು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯವು ಲೋಕಸಭೆಗೆ ಕೊಟ್ಟಿದೆ.
2020ರಲ್ಲಿ ಅತಿ ಹೆಚ್ಚು ಅಪಘಾತಗಳಾದ ರಾಜ್ಯಗಳ ಪಟ್ಟಿಯಲ್ಲಿ 45,484 ಅಪಘಾತಗಳೊಂದಿಗೆ ತಮಿಳುನಾಡು ಮೊದಲನೇ ಸ್ಥಾನದಲ್ಲಿದೆ. 34,178 ಅಪಘಾತ ಕಂಡಿರುವ ಕರ್ನಾಟಕ ಈ ಪಟ್ಟಿಯ 4ನೇ ಸ್ಥಾನದಲ್ಲಿದೆ.
ಹಾಗೆಯೇ 2020ರಲ್ಲಿ ಅಪಘಾತದಿಂದಾಗಿ ಅತಿ ಹೆಚ್ಚು ಜನರು ಸಾವನ್ನಪ್ಪಿದ ಪಟ್ಟಿಯಲ್ಲಿ 19,149 ಸಾವಿನೊಂದಿಗೆ ಉತ್ತರ ಪ್ರದೇಶ ಮೊದಲನೇ ಸ್ಥಾನದಲ್ಲಿದ್ದರೆ, 9,760 ಸಾವಿನೊಂದಿಗೆ ಕರ್ನಾಟಕ ನಾಲ್ಕನೇ ಸ್ಥಾನ ಪಡೆದಿದೆ.
ರಸ್ತೆ ಅಪಘಾತ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡಿರುವ ವಿವಿಧ ಕಾಮಗಾರಿಗಳನ್ನೂ ಇಲಾಖೆಯು ಲೋಕಸಭೆಗೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ