ಕಡಿಮೆಯಾಗುತ್ತಿದೆ ನಕ್ಸಲ್‌ ಚಟುವಟಿಕೆಗಳು

ಹಿಂಸಾಚಾರ ಬಿಟ್ಟು ಮುಖ್ಯವಾಹಿನಿಗೆ ಬಂದರೇ..?

Team Udayavani, Oct 28, 2019, 8:50 PM IST

naxal

ಹೊಸದಿಲ್ಲಿ: ದೇಶದಲ್ಲಿ ನಕ್ಸಲ್‌ ಚಟುವಟಿಕೆಗಳ ಕುರಿತಾಗಿ ಕೇಂದ್ರ ಗೃಹ ಸಚಿವಾಲಯ ವರದಿಯೊಂದನ್ನು ಬಿಡುಗಡೆ ಮಾಡಿದೆ. ನಕ್ಸಲ್‌ ಚಟುವಟಿಕೆ ವರ್ಷದಲ್ಲಿ ಎಷ್ಟೆಷ್ಟು ಸಂಭವಿಸಿದೆ ಮತ್ತು ಯಾವೆಲ್ಲ ರಾಜ್ಯಗಳಲ್ಲಿ ಸಂಭವಿಸಿವೆ ಎಂಬ ವರದಿಯನ್ನು ಇದು ಒಳಗೊಂಡಿದೆ. ಇದರಲ್ಲಿ ಕಳೆದ 9 ವರ್ಷಗಳ ಸಂಪೂರ್ಣ ಚಿತ್ರಣವನ್ನು ಬಿಡಿಸಿಡಲಾಗಿದ್ದು, 9 ವರ್ಷಗಳಲ್ಲಿ ನಕ್ಸಲರ ಹಿಂಸಾಚಾರ ಕಡಿಮೆಯಾಗಿದೆ. ಅವರು ದಾಳಿಗಳು ಮತ್ತು ಅದರಲ್ಲಿ ಬಲಿಯಾಗುತ್ತಿರುವವರ ಸಂಖ್ಯೆಯಲ್ಲಿಯೂ ಇಳಿಕೆಯಾಗುತ್ತಿವೆ. ಆ ವರದಿಯ ಅಂಶಗಳನ್ನು ಇಲ್ಲಿ ನೀಡಲಾಗಿದೆ.

ಶೇ. 88ರಷ್ಟು

ನಕ್ಸಲರು ಸಂಘಟಿಸುವ ಶೇ. 88 ದಾಳಿಗಳಲ್ಲಿ ಹೆಚ್ಚಿನ ಸಾವು ನೋವುಗಳು ಸಂಭವಿಸುತ್ತದೆ. ಇಲ್ಲಿ ಬಹುತೇಕ ಮುಗ್ಧಜನರೇ ತಮ್ಮ ಪ್ರಾಣವನ್ನು ತೆತ್ತಿದ್ದಾರೆ. 2010ರ ಬಳಿಕ 3749 ಮಂದಿ ನಕ್ಸಲರ ಅಟ್ಟಹಾಸದಿಂದ ಬಲಿಯಾಗಿದ್ದಾರೆ. 2010ರ ಬಳಿಕ ನಡೆದ ಒಟ್ಟು ದಾಳಿಗಳ ಸಂಖ್ಯೆ 10,660.

ಎಲ್ಲೆಲ್ಲಿ ನಕ್ಸಲ್‌ ಚಟುವಟಿಕೆ

ಛತ್ತೀಸ್‌ಗಢ್‌, ಜಾರ್ಖಂಡ್‌, ಬಿಹಾರ, ಒಡಿಶಾ, ಪಶ್ಚಿಮ ಬಂಗಾಲ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ, ಮಧ್ಯ ಪ್ರದೇಶ ಮತ್ತು ಉತ್ತರ ಪ್ರದೇಶ.

1,370

2010ರ ಬಳಿಕ ಛತ್ತೀಸ್‌ಗಢ್‌ದಲ್ಲಿ 3,769 ದಾಳಿಗಳು ನಡೆದಿದ್ದು, ಅವುಗಳ ಪರಿಣಾಮವಾಗಿ1,370 ಮಂದಿ ಬಲಿಯಾಗಿದ್ದಾರೆ. ಜಾರ್ಖಂಡ್‌ನ‌ಲ್ಲಿ 2010ರ ಬಳಿಕ ಒಟ್ಟು 3,358 ಪ್ರಕರಣಗಳು ನಡೆದಿದ್ದು, ಅವುಗಳಲ್ಲಿ 997 ಮಂದಿಬಲಿಯಾಗಿದ್ದಾರೆ. ಬಿಹಾರದಲ್ಲಿ 1,526 ಪ್ರಕರಣಗಳು ನಡೆದಿದ್ದು, ಅವುಗಳಲ್ಲಿ 387 ಮಂದಿಪ್ರಾಣ ತೆತ್ತವರು.

ಶೇ. 71.7 ಪಾಲು

ಒಟ್ಟು ಪ್ರಕರಣಗಳ ಪೈಕಿ ಛತ್ತೀಸ್‌ಗಢ್‌ ಮತ್ತು ಜಾರ್ಖಂಡ್‌ ರಾಜ್ಯಗಳು ಶೇ. 71.7 ಪ್ರಕರಣಗಳನ್ನು ಕಂಡಿವೆ. ಒಟ್ಟು ಸಾವನ್ನಪ್ಪಿದವರಲ್ಲಿ 81.7 ಶೇ ಜನ ಇದೇ ಎರಡು ರಾಜ್ಯಕ್ಕೆ ಸೇರಿದವರಾಗಿದ್ದಾರೆ. ಉಳಿದ ಪ್ರಕರಣಗಳನ್ನು ಇತರ ರಾಜ್ಯಗಳು ಹಂಚಿಕೊಂಡಿವೆ.

ಇಳಿಕೆ

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ನಕ್ಸಲ್‌ ಪ್ರಕರಣಗಳು ಕಡಿಮೆಯಾಗುತ್ತಿವೆ. 2013ರಲ್ಲಿ 1,136 ಪ್ರಕರಣಗಳಲ್ಲಿ 397 ಮಂದಿ ಬಲಿಯಾಗಿದ್ದರೆ, 2018ರಲ್ಲಿ 833 ಪ್ರಕರಣಗಳು ನಡೆದಿದ್ದು, 240 ಮಂದಿ ಸಾವನ್ನಪ್ಪಿದ್ದಾರೆ. 2013ರಲ್ಲಿ 10 ರಾಜ್ಯಗಳ 76 ಜಿಲ್ಲೆಗಳಲ್ಲಿ ನಕ್ಸಲರು ತಮ್ಮ ಅಟ್ಟಹಾಸ ತೋರಿಸುತ್ತಿದ್ದರು. ಈ 76 ಜಿಲ್ಲೆಗಳ 330 ಪೊಲೀಸ್‌ ಸ್ಟೇಶನ್‌ಗಳು ನಕ್ಸಲ್‌ ಪೀಡಿತ ಪ್ರದೇಶಗಳಲ್ಲೇ ಇದ್ದವು.

2018ರಲ್ಲಿ ಅವುಗಳ ಸಂಖ್ಯೆ ಕಡಿಮೆಯಾಗಿದ್ದು. 10 ರಾಜ್ಯಗಳ ಪೈಕಿ 2 ರಾಜ್ಯಗಳು ನಕ್ಸಲ್‌ ಚಟುವಟಿಕೆ ಮುಕ್ತರಾಜ್ಯವಾಗಿದೆ. 2013ರಲ್ಲಿ ಇದ್ದ 76 ಜಿಲ್ಲೆಗಳ ಪೈಕಿ ಕೇವಲ 60 ಜಿಲ್ಲೆಗಳು ಮಾತ್ರ ನಕ್ಸಲ್‌ ವಲಯದಲ್ಲಿವೆ. ಈ ಭಾಗಗಳ 251 ಪೊಲೀಸ್‌ ಸ್ಟೇಶನ್‌ಗಳು ಮಾತ್ರ ನಕ್ಸಲ್‌ ವಲಯದಲ್ಲಿದೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.