ಕೆಂಪುಕೋಟೆ ಗಲಭೆ ಪ್ರಕರಣ: ನಟ ದೀಪ್ ಸಿಧು ಬಂಧಿಸಿದ ದಿಲ್ಲಿ ಪೊಲೀಸರು
Team Udayavani, Feb 9, 2021, 9:35 AM IST
ಹೊಸದಿಲ್ಲಿ: ಜನವರಿ 26ರಂದು ಕೆಂಪುಕೋಟೆಯ ಬಳಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ನಟ ದೀಪ್ ಸಿಧುವನ್ನು ಬಂಧಿಸಿದ್ದಾರೆ.
ಗಣರಾಜ್ಯೋತ್ಸವ ದಿನದಂದು ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದಡಿ ದೀಪ್ ಸಿಧು ಬಂಧನವಾಗಿದೆ. ಆ ದಿನದಿಂದಲೇ ಪೊಲೀಸರು ನಟನನ್ನು ಹುಡುಕುತ್ತಿದ್ದು, ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ಬಂಧಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಜೋ ಬೈಡೆನ್ ಜೊತೆ ಮೋದಿ ಮಾತುಕತೆ: ದ್ವಿಪಕ್ಷೀಯ ಬಾಂಧವ್ಯ ವೃದ್ದಿಯ ಕುರಿತು ಚರ್ಚೆ
ಟ್ರ್ಯಾಕ್ಟರ್ ರ್ಯಾಲಿಯ ವೇಳೆ ಕೆಂಪುಕೋಟೆಗೆ ನುಗ್ಗಿದ್ದ ಪ್ರತಿಭಟನಾಕಾರರು ಕೆಂಪುಕೋಟೆಯ ಮುಂಭಾಗದ ಧ್ವಜಸ್ಥಂಬ ಹತ್ತಿ ಸಿಖ್ ಧ್ವಜಗಳನ್ನು ಹಾರಿಸಿದ್ದರು.
ಈ ಘಟನೆಗಳಿಗೆ ಸಂಬಂಧಿಸಿದಂತೆ ಇತ್ತೀಚಿಗಷ್ಟೇ ದಿಲ್ಲಿ ಪೊಲೀಸರು 12 ಮಂದಿ ಪ್ರಮುಖ ಆರೋಪಿಗಳ ಭಾವಚಿತ್ರವನ್ನು ಬಿಡುಗಡೆಗೊಳಿಸಿದ್ದರು. ದೀಪ್ ಸಿಧು ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್