ಸಿಯಾಚಿನ್ಗೆ ಭೇಟಿ ನೀಡಿದ ರಾಜ್ನಾಥ್
Team Udayavani, Jun 4, 2019, 6:00 AM IST
ಹೊಸದಿಲ್ಲಿ: ರಕ್ಷಣಾ ಸಚಿವರಾಗಿ ನೇಮಕಗೊಳ್ಳುತ್ತಿದ್ದಂತೆಯೇ ರಾಜನಾಥ್ ಸಿಂಗ್ ಸಿಯಾಚಿನ್ಗೆ ಭೇಟಿ ನೀಡಿದ್ದಾರೆ. ವಿಶ್ವದ ಅತಿ ಎತ್ತರದ ರಣರಂಗ ಎಂದೇ ಹೆಸರಾದ ಸಿಯಾ ಚಿನ್ಗೆ ತೆರಳಿ ಅಲ್ಲಿ, ಯೋಧ ರೊಂದಿಗೆ ಜಿಲೇಬಿ ಸವಿದ ಫೋಟೋ ಹಾಗೂ ವಿಡಿಯೋವನ್ನು ಟ್ವಿಟರ್ನಲ್ಲಿ ಸಿಂಗ್ ಹಂಚಿಕೊಂಡಿದ್ದಾರೆ. ಇಲ್ಲಿ ಹುತಾತ್ಮರಾದ ಎಲ್ಲ ಯೋಧರಿಗೂ ಗೌರವ ನಮನವನ್ನು ಸಿಂಗ್ ಸಲ್ಲಿಸಿದ್ದಾರೆ. ಸಿಯಾಚಿನ್ನಲ್ಲಿ ಈವರೆಗೆ 1100 ಯೋಧರು ಹುತಾತ್ಮರಾಗಿದ್ದಾರೆ.
ಮೈನಸ್ 60 ಡಿಗ್ರಿವರೆಗೂ ತೆರಳುವ ತಾಪಮಾನದಿಂದ ರಕ್ಷಣೆಗೆ ಬಿಳಿ ಜಾಕೆಟ್ ತೊಟ್ಟು ತೆರಳಿದ್ದ ರಾಜ್ನಾಥ್ ಜೊತೆಗೆ, ಸೇನೆಯ ಹಿರಿಯ ಅಧಿಕಾರಿಗಳೂ ಇದ್ದರು. ಅನಂತರ ಸಂಜೆ ಶ್ರೀನಗರಕ್ಕೆ ಬಂದು ಅಲ್ಲಿ ಸೇನಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಅಲ್ಲದೆ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ರಕ್ಷಣಾ ಸಚಿವಾಲಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಎಲ್ಲ ಯೋಜನೆಗಳ ವಿವರಣೆಯನ್ನೂ ನೀಡುವಂತೆ ಅಧಿಕಾರಿಗಳಿಗೆ ಸಿಂಗ್ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್