DRDO ನಿಂದ ಉತ್ತರ ಪ್ರದೇಶಕ್ಕೆ 150 ಜಂಬೋ ಸಿಲಿಂಡರ್ ಆಕ್ಸಿಜನ್ ರವಾನೆ
Team Udayavani, Apr 19, 2021, 1:21 PM IST
ಉತ್ತರ ಪ್ರದೇಶ : ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿರ್ದೇಶನದಂತೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿ ಆರ್ ಡಿ ಒ) ಸೋಮವಾರ (ಏಪ್ರಿಲ್ 19) ಉತ್ತರ ಪ್ರದೇಶಕ್ಕೆ 150 ಜಂಬೋ ಸಿಲಿಂಡರ್ ಆಕ್ಸಿಜನ್ ಪೂರೈಸಿದೆ.
ಹೆಚ್ಚುವರಿ 1,000 ಸಿಲಿಂಡರ್ ಗಳನ್ನು ನಂತರ ಡಿ ಆರ್ ಡಿ ಒ ಒದಗಿಸಲಿದ್ದು, ಕೋವಿಡ್ ಸೋಂಕಿತರಿಗೆ ಲಕ್ನೋದಲ್ಲಿನ ಆಸ್ಪತ್ರೆಗಳಿಗೆ ಆಮ್ಲಜನಕವನ್ನು ಪೂರೈಸಲಾಗುತ್ತದೆ.
ಓದಿ : ಗುತ್ತಿಗಾರು ಪ್ರೌಢಶಾಲೆಯ ಮೂವರು ಮಕ್ಕಳಿಗೆ ಕೋವಿಡ್: ಪರೀಕ್ಷೆ ರದ್ದುಗೊಳಿಸಿ ರಜೆ ಘೋಷಣೆ
ಇನ್ನು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ ಬುಧವಾರ (ಏಪ್ರಿಲ್ 14) ಕೋವಿಡ್ ಸೋಂಕು ದೃಢಪಟ್ಟಿದ್ದು, ಉತ್ತರ ಪ್ರದೇಶದ ಕೋವಿಡ್ -19 ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.
ಶುಕ್ರವಾರ ಉತ್ತರ ಪ್ರದೇಶ ಸರ್ಕಾರ ಮೇ 15 ರ ತನಕ ವಾರಾಂತ್ಯ ಲಾಕ್ ಡೌನ್ ಅನ್ನು ಹೇರಿ, ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಜಾರಿಗೊಳಿಸಿ ಆದೇಶ ಹೊರಡಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಉತ್ತರ ಪ್ರದೇಶದಲ್ಲಿ ಪ್ರಸ್ತುತ ಒಟ್ಟು 1,91,457 ಸಕ್ರಿಯ ಕೋವಿಡ್ -19 ಪ್ರಕರಣಗಳಿದ್ದು, ಒಟ್ಟು 6,50,333 ಸೋಂಕಿನ ಪ್ರಕರಣಗಳು ದಾಖಲುಗೊಂಡಿವೆ ಮತ್ತು 9,830 ಸಾವುಗಳು ಸಂಭವಿಸಿವೆ.
ಇನ್ನು, ಕಳೆದ 24 ಗಂಟೆಗಳಲ್ಲಿ 2.73 ಲಕ್ಷಕ್ಕೂ ಹೆಚ್ಚು ಹೊಸ ಸೋಂಕುಗಳು ಮತ್ತು 1,619 ಸಾವುಗಳು ದೇಶದಲ್ಲಿ ದಾಖಲಾಗಿವೆ.
ಈ ಮೂಲಕ ದೇಶದಲ್ಲಿ ಒಟ್ಟು ಕೋವಿಡ್ ಸಕಾರಾತ್ಮಕ ಪ್ರಕರಣಗಳ ಸಂಖ್ಯೆ 1,50,61,919 ಕ್ಕೆ ಏರಿಕೆಯಾಗಿದ್ದು. ಪ್ರಸ್ತುತ 19,29,329 ಸಕ್ರಿಯ ಪ್ರಕರಣಗಳಿವೆ.
ಓದಿ : ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನ: ದೇವರ ದೊಡ್ಡ ದರ್ಶನ ಬಲಿ ಉತ್ಸವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?