ದಿಲ್ಲಿಯಲ್ಲಿ ಅಗರಬತ್ತಿ, ಮೇಣದ ಬತ್ತಿಗೂ ಬ್ರೇಕ್‌


Team Udayavani, Oct 31, 2018, 7:10 AM IST

air-pollution-600.jpg

ಹೊಸದಿಲ್ಲಿ: ರಾಷ್ಟ್ರರಾಜಧಾನಿಯಲ್ಲಿ ವಾಯುಮಾಲಿನ್ಯವು ಮಂಗಳವಾರ ಗಂಭೀರ ಸ್ಥಿತಿಗೆ ತಲುಪಿದ್ದು, ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ 401ಕ್ಕೇರಿದೆ. ಇದು ಅಪಾಯದ ಸ್ಥಿತಿಯಾಗಿರುವ ಕಾರಣ, ದಿಲಿ ನಿವಾಸಿಗಳಿಗೆ ಸರಕಾರಿ ಸ್ವಾಮ್ಯದ ವಾಯು ಗುಣಮಟ್ಟ ಮುನ್ಸೂಚನೆ ಮತ್ತು ಸಂಶೋಧನಾ ವ್ಯವಸ್ಥೆಯು (ಸಫ‌ರ್‌) ಹಲವು ಸೂಚನೆಗಳನ್ನು ನೀಡಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಬರುವವರೆಗೆ ಯಾರೂ ಅಗರಬತ್ತಿ, ಮೇಣದ ಬತ್ತಿಗಳನ್ನು ಉರಿಸುವುದಾಗಲೀ, ವಾಕಿಂಗ್‌ ಹೋಗುವುದಾಗಲೀ, ಕಿಟಕಿಗಳನ್ನು ತೆರೆ ದಿಡುವುದಾಗಲೀ ಮಾಡಬಾರದು ಎಂದು ನಾಗರಿಕರಿಗೆ ನಿರ್ದೇಶಿಸಲಾಗಿದೆ. ಮನೆಗಳಿಂದ ಹೊರಗೆ ಹೋಗುವುದಿದ್ದರೆ ಸುರಕ್ಷತೆಗಾಗಿ ಕೇವಲ ಡಸ್ಟ್‌ ಮಾಸ್ಕ್ಗಳ ಮೊರೆ ಹೋಗಬೇಡಿ. ಅದರ ಬದಲಿಗೆ ಎನ್‌-95 ಅಥವಾ ಪಿ-100 ಮಾಸ್ಕ್ಗಳನ್ನಷ್ಟೇ ಬಳಸಿ ಎಂದೂ ಸೂಚಿಸಲಾಗಿದೆ.

ಖಾಸಗಿ ವಾಹನಗಳಿಗೂ ನಿಷೇಧ?: ವಾಯು ಗುಣಮಟ್ಟವು 0-50 ಇದ್ದರೆ ‘ಉತ್ತಮ’ವೆಂದೂ, 51-100 ಇದ್ದರೆ ‘ತೃಪ್ತಿದಾಯಕ’ ಎಂದೂ, 200 ಇದ್ದರೆ ‘ಮಧ್ಯಮ’ವೆಂದೂ, 300 ಅನ್ನು ‘ಕಳಪೆ’, 301-400 ಇದ್ದರೆ ‘ಅತಿ ಕಳಪೆ’ ಎಂದೂ ಹಾಗೂ 401-500 ಇದ್ದರೆ ‘ಗಂಭೀರ’ ಎಂದೂ ಪರಿಗಣಿಸಲಾಗುತ್ತದೆ. ದಿಲ್ಲಿಯಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಈ ಸೂಚ್ಯಂಕವು 402 ಎಂದು ತೋರಿಸಿದ್ದರಿಂದ ಹೆಚ್ಚಿನ ಆತಂಕ ಸೃಷ್ಟಿಯಾಗಿದೆ ಎಂದು ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಹೇಳಿದೆ. ಒಂದು ವೇಳೆ ಹೀಗೇ ಮುಂದುವರಿದರೆ ದಿಲ್ಲಿಯಲ್ಲಿ ಖಾಸಗಿ ವಾಹನಗಳ ಸಂಚಾರಕ್ಕೂ ನಿಷೇಧ ಹೇರುವ ಸಾಧ್ಯತೆಯಿದೆ ಎಂದೂ ಪ್ರಾಧಿಕಾರ ತಿಳಿಸಿದೆ.

ನಿರ್ಮಾಣ ಸ್ಥಗಿತ: ಈ ನಡುವೆ, ನ.1ರಿಂದ 10 ದಿನಗಳ ಕಾಲ ದಿಲ್ಲಿಯಾದ್ಯಂತ ಎಲ್ಲ ರೀತಿಯ ನಿರ್ಮಾಣ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ಹಾಗೂ ಪ್ರಮುಖ ಸ್ಥಳಗಳಲ್ಲಿ ಗಸ್ತು ಹೆಚ್ಚಿಸುವಂತೆ ಸುಪ್ರೀಂಕೋರ್ಟ್‌ ನೇಮಕ ಮಾಡಿರುವ ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಸೂಚಿಸಿದೆ.

ಗಾಳಿ ಶುದ್ಧೀಕರಿಸುವ ತಂತ್ರಜ್ಞಾನಕ್ಕೆ ಒಪ್ಪಿಗೆ 
ವಾಯುಮಾಲಿನ್ಯ ಏರಿಕೆ ಕಾಣುತ್ತಿದ್ದಂತೆಯೇ ಸಾರ್ವಜನಿಕ ಪ್ರದೇಶಗಳ ವಾಯು ಶುದ್ಧೀಕರಿಸುವ ತಂತ್ರಜ್ಞಾನಕ್ಕೆ ರಾಷ್ಟ್ರೀಯ ಲ್ಯಾಬೊರೇಟರಿಯು ಅನುಮತಿ ನೀಡಿದೆ. ಶೇ. 90ಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಪರಿಸರದಲ್ಲಿನ ಮಾಲಿನ್ಯವನ್ನು ಈ ತಂತ್ರಜ್ಞಾನ ನಿವಾರಿಸುತ್ತದೆ ಎಂದು ರಾಷ್ಟ್ರೀಯ ಭೌತಿಕ ಲ್ಯಾಬ್‌ ಮುಖ್ಯ ಕಾರ್ಯದರ್ಶಿ ಶಂಕರ್‌ ಅಗರ್‌ವಾಲ್‌ ಹೇಳಿದ್ದಾರೆ. ಈ ತಂತ್ರಜ್ಞಾನವನ್ನು ಎವರ್‌ಜೆನ್‌ ಸಿಸ್ಟಂ ಅಭಿವೃದ್ಧಿಪಡಿಸಿದ್ದು, ಪ್ರಾಯೋಗಿಕವಾಗಿ ಗುರುದ್ವಾರ ರಕಬ್‌ಗಂಜ್‌ ಸಾಹಿಬ್‌ ಇದನ್ನು ಬಳಸುತ್ತಿದೆ. ಇದನ್ನು ಆಸ್ಪತ್ರೆ, ಶಾಲೆ, ಬಸ್‌ ನಿಲ್ದಾಣಗಳಲ್ಲಿ ಅಳವಡಿಸಬಹುದು. ಈ ತಂತ್ರಜ್ಞಾನವನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಅಳವಡಿಸುವುಕ್ಕಾಗಿ ಸರ್ಕಾರಿ ಸಂಸ್ಥೆಗಳ ಜೊತೆ ಕಂಪೆನಿ ಮಾತುಕತೆ ನಡೆಸಿದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.