ಕೋವಿಡ್ ಸಂಕಷ್ಟ: ಅನಾಥ ಮಕ್ಕಳಿಗೆ ಪ್ರತಿ ತಿಂಗಳು 2500 ರೂ. ಪಿಂಚಣಿ ಘೋಷಿಸಿದ ದೆಹಲಿ ಸರ್ಕಾರ
Team Udayavani, May 18, 2021, 8:03 PM IST
ನವದೆಹಲಿ: ಮಹಾಮಾರಿ ಕೋವಿಡ್ ಸೋಂಕಿನ ವಿರುದ್ಧ ಸಮರ ಸಾರಿರುವ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ, ಇಂದು ( ಮೇ.18) ಕೋವಿಡ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನತೆಗೆ ಕೆಲವೊಂದು ಪರಿಹಾರ ಘೋಷಿಸಿದೆ.
ರಾಷ್ಟ್ರ ರಾಜಧಾನಿ ದೆಹಲಿಯ ನಿವಾಸಿಗಳನ್ನು ಗಮನದಲ್ಲಿಟ್ಟುಕೊಂಡು ಪ್ಯಾಕೇಜ್ ಘೋಷಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕೋವಿಡ್ ಸೋಂಕಿಗೆ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥವಾದ ಮಕ್ಕಳಿಗೆ ಪ್ರತಿ ತಿಂಗಳು ( 25 ವರ್ಷ ತುಂಬುವ ವರೆಗೆ) 2500 ರೂಪಾಯಿ ವರೆಗೆ ಪಿಂಚಣಿ ನೀಡುವುದಾಗಿ ಹೇಳಿದ್ದಾರೆ. ಹಾಗೂ ಈ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ ಎಂದು ಹೇಳಿದ್ದಾರೆ.
ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಪ್ರತಿ ಕುಟುಂಬಕ್ಕೆ ದೆಹಲಿ ಸರ್ಕಾರದಿಂದ 50 ಸಾವಿರ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿರುವ ಸಿಎಂ, ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿದ ಬಡ ಕುಟುಂಬಗಳಿಗೆ ದೆಹಲಿ ಮುಖ್ಯಮಂತ್ರಿ ಉಚಿತ ಪಡಿತರವನ್ನು ಘೋಷಿಸಿದ್ದು, ಈ ತಿಂಗಳು 10 ಕೆ.ಜಿ ಉಚಿತ ಪಡಿತರ ನೀಡಲಾಗುವುದು ಎಂದಿದ್ದಾರೆ.
ಸಂಪಾದನೆ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದರೆ ಅಂತಹ ಕುಟುಂಬಗಳಿಗೆ ಪರಿಹಾರದ ಹಾಗು ಪ್ರತಿ ತಿಂಗಳು 2500 ಪಿಂಚಣಿಯನ್ನು ಘೋಷಿಸಲಾಗಿದೆ. ಗಂಡ ಸತ್ತಿದ್ದರೆ ಪಿಂಚಣಿ ಹೆಂಡತಿಗೆ ನೀಡಲಾಗುವುದು, ಹೆಂಡತಿ ಸತ್ತಿದ್ದರೆ ಅದನ್ನು ಗಂಡನಿಗೆ ನೀಡಲಾಗುವುದು. ಅವಿವಾಹಿತ ವ್ಯಕ್ತಿ ಸತ್ತರೆ ಪಿಂಚಣಿ ಅವನ / ಅವಳ ಪೋಷಕರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ