ವಿರೋಧದ ನಡುವೆಯೇ ದೆಹಲಿ ವಿಧೇಯಕ ಮಂಡನೆ

ರಾಜಕೀಯ ಪ್ರೇರಿತ ವಿರೋಧ ಎಂದ ಕೇಂದ್ರ ಸಚಿವ ಅಮಿತ್‌ ಶಾ- ಸರ್ಕಾರಕ್ಕೆ ಬಿಜೆಡಿ ಬೆಂಬಲ; ಆಪ್‌ಗೆ ಹಿನ್ನಡೆ

Team Udayavani, Aug 2, 2023, 7:31 AM IST

SAMSATH

ನವದೆಹಲಿ: ದೆಹಲಿ ಆಡಳಿತಾತ್ಮಕ ಸೇವೆಗಳ ವಿಧೇಯಕ ವಿಚಾರದಲ್ಲಿ ಪ್ರತಿಪಕ್ಷಗಳು ವಿನಾ ಕಾರಣ ರಾಜಕೀಯ ಮಾಡುತ್ತಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆರೋಪಿಸಿದ್ದಾರೆ. ಸಂವಿಧಾನದ 249ನೇ ವಿಧಿಯ ಅನ್ವಯ ದೆಹಲಿಗಾಗಿ ಕಾಯ್ದೆ, ಕಾನೂನುಗಳನ್ನು ರೂಪಿಸುವ ಅಧಿಕಾರ ಸಂಸತ್‌ಗೆ ಇದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಅಮಿತ್‌ ಶಾ ಪರವಾಗಿ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್‌ ಲೋಕಸಭೆಯಲ್ಲಿ ಮಂಗಳವಾರ ವಿಧೇಯಕ ಮಂಡಿಸಿದರು. “ರಾಷ್ಟ್ರೀಯ ರಾಜಧಾನಿ ವ್ಯಾಪ್ತಿ ದೆಹಲಿ (ತಿದ್ದುಪಡಿ) ವಿಧೇಯಕ 2023′ ಎಂಬ ಹೆಸರಿನ ಈ ವಿಧೇಯಕದ ವಿರುದ್ಧ ವ್ಯಕ್ತವಾಗುವ ಯಾವುದೇ ರೀತಿಯ ವಿರೋಧ ಕೇವಲ ರಾಜಕೀಯ ಪ್ರೇರಿತ. ಸಂಸತ್‌ನ ನಿಯಮಗಳನ್ನು ಉಲ್ಲೇಖೀಸಿ ಮಾಡುವ ವಿರೋಧ ಸರಿಯಲ್ಲ’ ಎಂದರು.

ಈ ವೇಳೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ “ಎಲ್ಲರಿಗೂ ಮಾತನಾಡುವ ಅವಕಾಶ ಕಲ್ಪಿಸಲಾಗುತ್ತದೆ. ವಿನಾ ಕಾರಣ ಗದ್ದಲ ಸಲ್ಲದು’ ಎಂದರು. ಆರ್‌ಎಸ್‌ಪಿ ಸಂಸದ ಎನ್‌.ಕೆ. ಪ್ರೇಮ್‌ಚಂದ್ರನ್‌ ವಿಧೇಯಕ ವಿರೋಧಿಸುವುದಾಗಿ ಆಕ್ರೋಶಭರಿತರಾಗಿ ಹೇಳಿದರು. ಅದಕ್ಕೆ ಉತ್ತರಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ “ವಿಧೇಯಕಕ್ಕೆ ಅನುಮೋದನೆ ಪಡೆಯಲು ಸಂಸತ್‌ಗೆ ಸಾಧ್ಯವಿದೆ. ಅದರ ಬಗ್ಗೆ ಚರ್ಚೆ ನಡೆಸಲು ಪ್ರತಿಪಕ್ಷಗಳು ಸಿದ್ಧರಾಗಲಿ’ ಎಂದರು.

ಬಿಜೆಡಿ ಬೆಂಬಲ:
ಸದ್ಯ ಹೊರಡಿಸಲಾಗಿರುವ ಸುಗ್ರೀವಾಜ್ಞೆ ವಿರುದ್ಧ ದನಿ ಎತ್ತುವಂತೆ ಪ್ರತಿಪಕ್ಷಗಳ ಬೆಂಬಲ ಕೋರಿದ್ದ ಆಪ್‌ಗೆ ಹಿನ್ನಡೆಯಾಗಿದೆ. ಒಡಿಶಾ ಆಡಳಿತ ಪಕ್ಷ ಬಿಜು ಜನತಾ ದಳ ಲೋಕಸಭೆ, ರಾಜ್ಯಸಭೆಯಲ್ಲಿ ವಿಧೇಯಕಕ್ಕೆ ಬೆಂಬಲ ನೀಡಲು ನಿರ್ಧರಿಸಿದೆ.

ಕಲಾಪ ಮುಂದೂಡಿಕೆ:
ಇನ್ನೊಂದೆಡೆ, ಮಣಿಪುರ ವಿಚಾರದಲ್ಲಿ ಪ್ರಧಾನಿ ಹೇಳಿಕೆಗೆ ಆಗ್ರಹಿಸಿ ಪ್ರತಿಪಕ್ಷಗಳ ಕೋಲಾಹಲ ಮಂಗಳವಾರವೂ ಉಭಯ ಸದನಗಳಲ್ಲಿ ಮುಂದುವರಿಯಿತು. ಗದ್ದಲದ ನಡುವೆಯೇ ಮೂರು ವಿಧೇಯಕಗಳ ಅಂಗೀಕಾರ ಹಾಗೂ ದೆಹಲಿ ಸೇವೆಗಳ ವಿಧೇಯಕ ಮಂಡನೆ ಮುಗಿಸಿ ಲೋಕಸಭೆ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಯಿತು. ರಾಜ್ಯಸಭೆಯಲ್ಲೂ ಪ್ರತಿಪಕ್ಷಗಳ ಒಕ್ಕೂಟದ ಸದಸ್ಯರು ಮಣಿಪುರ ವಿಚಾರದಲ್ಲಿ ಗದ್ದಲವೆಬ್ಬಿಸಿ ಕಲಾಪ ಬಹಿಷ್ಕರಿಸಿ ಹೊರನಡೆದ ಹಿನ್ನೆಲೆಯಲ್ಲಿ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಸೈಬರ್‌ ವಂಚನೆ ಸಂತ್ರಸ್ತರಿಗೆ ಪರಿಹಾರ?
ಸೈಬರ್‌ ವಂಚನೆಯ ಸಂತ್ರಸ್ತರಿಗೆ ಹಣಕಾಸು ಸಂಸ್ಥೆಗಳು ಕೂಡಲೇ ಪರಿಹಾರ ನೀಡುವಂತಾಗಬೇಕು ಎಂದು ಸಂಸದೀಯ ಸಮಿತಿಯೊಂದು ಶಿಫಾರಸು ಮಾಡಿದೆ. ಯಾರಿಗಾದರೂ ಸೈಬರ್‌ ವಂಚನೆ ನಡೆದರೆ, ಕೂಡಲೇ ಬ್ಯಾಂಕುಗಳು ಅಥವಾ ಹಣಕಾಸು ಸಂಸ್ಥೆಗಳು ಆ ಗ್ರಾಹಕನ ಖಾತೆಗೆ ಮೊತ್ತವನ್ನು ಆಟೋಮ್ಯಾಟಿಕ್‌ ಆಗಿ ಜಮೆ ಮಾಡಬೇಕು. ಈ ಮೊತ್ತಕ್ಕೆ ಬೇಕಿದ್ದರೆ ಮಿತಿ ಹಾಕಬಹುದು. ಒಟ್ಟಿನಲ್ಲಿ ಗ್ರಾಹಕನಿಗೆ ತತ್‌ಕ್ಷಣವೇ ನ್ಯಾಯ ಒದಗಿಸಬೇಕು. ಈ ನಿಟ್ಟಿನಲ್ಲಿ ಆರ್‌ಬಿಐ ಸ್ವಯಂಚಾಲಿತ ಪರಿಹಾರ ವ್ಯವಸ್ಥೆ ಜಾರಿ ಮಾಡಬೇಕು ಎಂದು ಬಿಜೆಪಿ ಸಂಸದ ಜಯಂತ್‌ ಸಿನ್ಹಾ ನೇತೃತ್ವದ ಸಮಿತಿ ಶಿಫಾರಸು ಮಾಡಿದೆ.

ಅಂಗಾಂಗ ಕಸಿ ಹೆಚ್ಚಳ:
ಕೊರೊನಾನಂತರ ದೇಶದಲ್ಲಿ ಅಂಗಾಂಗ ಜೋಡಣೆಯಂಥ ಶಸ್ತ್ರಚಿಕಿತ್ಸೆಗಳ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ ಎಂದು ರಾಜ್ಯಸಭೆಗೆ ಸರ್ಕಾರ ಮಾಹಿತಿ ನೀಡಿದೆ. 2023ರಲ್ಲಿ ಈವರೆಗೆ(7 ತಿಂಗಳಲ್ಲಿ) ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಲ್ಲಿ 7,107 ಅಂಗಾಂಗ ಜೋಡಣೆ ಶಸ್ತ್ರಚಿಕಿತ್ಸೆಗಳು ನಡೆದಿವೆ. 2022ರಲ್ಲಿ ಇಡೀ ವರ್ಷದಲ್ಲಿ ಈ ಸಂಖ್ಯೆ 16,041 ಆಗಿತ್ತು ಎಂದೂ ಹೇಳಿದೆ.

ವಿಧೇಯಕದಲ್ಲಿ ಏನೇನು ತಿದ್ದುಪಡಿ?
– ರಾಜ್ಯ ಸರ್ಕಾರಿ ಸೇವೆಗಳು ಮತ್ತು ರಾಜ್ಯ ಲೋಕಸೇವಾ ಆಯೋಗಕ್ಕೆ ಸಂಬಂಧಿಸಿದಂತೆ ದೆಹಲಿ ವಿಧಾನಸಭೆಗೆ ನಿಯಮ ಮಾಡಲು ಸಾಧ್ಯವಿಲ್ಲ ಎಂಬ ವಿಚಾರ ರದ್ದು
– ದೆಹಲಿ ಸರ್ಕಾರದ ಎಲ್ಲಾ ಮಂಡಳಿ, ನಿಗಮಗಳಿಗೆ ಮುಖ್ಯಸ್ಥರನ್ನು ನೇಮಿಸುವ ಲೆಫ್ಟಿನೆಂಟ್‌ ಗವರ್ನರ್‌ ಅಧಿಕಾರಕ್ಕೆ ಕತ್ತರಿ.
– ಸಂಸತ್‌ನಿಂದ ಅಂಗೀಕಾರ ಪಡೆದು ಸ್ಥಾಪನೆಗೊಂಡಿರುವ ಮಂಡಳಿಗಳ ವಿಚಾರದಲ್ಲಿ ಮಾತ್ರ ಅವರು ನೀತಿ- ನಿರ್ದೇಶನ ಮಾಡಲಿದ್ದಾರೆ.

ಆ.8ರಿಂದ ಅವಿಶ್ವಾಸ ಗೊತ್ತುವಳಿ ಚರ್ಚೆ
ಪ್ರಧಾನಿ ಮೋದಿ ವಿರುದ್ಧ ಪ್ರತಿಪಕ್ಷಗಳ ಒಕ್ಕೂಟ ಮಂಡಿಸಿರುವ ಅವಿಶ್ವಾಸ ಗೊತ್ತುವಳಿ ಕುರಿತ ಚರ್ಚೆಯು ಲೋಕಸಭೆಯಲ್ಲಿ ಆ.8ರಿಂದ 10ರವರೆಗೆ ನಡೆಯಲಿದ್ದು, ಕೊನೆಯ ದಿನ ಸದನದಲ್ಲಿ ಮೋದಿಯವರು ಮಾತನಾಡಲಿದ್ದಾರೆ. ಲೋಕಸಭೆಯ ಉದ್ದಿಮೆ ಸಲಹಾ ಸಮಿತಿ ಮಂಗಳವಾರ ಸಭೆ ನಡೆಸಿ, ಈ ತೀರ್ಮಾನ ಕೈಗೊಂಡಿದೆ. ಆದರೆ, ಬುಧವಾರವೇ ಚರ್ಚೆ ಕೈಗೆತ್ತಿಕೊಳ್ಳಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದು, ಆದ್ಯತೆ ಮೇರೆಗೆ ಗೊತ್ತುವಳಿಯನ್ನು ಪರಿಗಣಿಸುತ್ತಿಲ್ಲ ಎಂದು ಆರೋಪಿಸಿ ಸಭಾತ್ಯಾಗ ಮಾಡಿದವು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.